ಮನೆಯಲ್ಲಿಟ್ಟಿದ್ದ ಕಳೆನಾಶಕವನ್ನು ಜ್ಯೂಸ್ ಎಂದು ತಪ್ಪಾಗಿ ಗ್ರಹಿಸಿ ಕುಡಿದ ಪರಿಣಾಮ 14 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಿಧಿಕೃಷ್ಣ (14) ಎಂಬ ಬಾಲಕಿಯು ಈ ದುರ್ಘಟನೆಗೆ ಬಲಿಯಾಗಿದ್ದಾಳೆ. ಆರೋಗ್ಯ ಕಾಪಾಡಿಕೊಳ್ಳಲು ದಿನನಿತ್ಯ ಅಲೋವೆರಾ ಜ್ಯೂಸ್ ಕುಡಿಯುತ್ತಿದ್ದ ನಿಧಿ, ಮಾರ್ಚ್ 4ರಂದು ತನ್ನ ಮನೆಯಲ್ಲಿದ್ದ ಖಾಲಿ ಅಲೋವೆರಾ ಡಬ್ಬಿನಲ್ಲಿ ಭದ್ರವಾಗಿಟ್ಟಿದ್ದ ಕಳೆನಾಶಕವನ್ನು ತಪ್ಪಾಗಿ ಜ್ಯೂಸ್ ಎಂದು ಭಾವಿಸಿ ಕುಡಿದಿದ್ದಾಳೆ. ಇದರಿಂದ ಅನಾರೋಗ್ಯ ತಲೆದೋರಿದ ಹಿನ್ನೆಲೆ ತಕ್ಷಣವೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 31ರಂದು ನಿಧಿ ಅಸುನೀಗಿದ್ದಾಳೆ.

ಈ ಘಟನೆಗೆ ಪೋಷಕರ ನಿರ್ಲಕ್ಷ್ಯವೇ ಕಾರಣವೆಂದು ಶಂಕಿಸಲಾಗಿದ್ದು, ಅಪಾಯಕಾರಿಯಾದ ರಾಸಾಯನಿಕವನ್ನು ನಿರ್ಲಕ್ಷ್ಯದಿಂದ ಮನೆಯಲ್ಲೇ ಉಗ್ರಹಿಸಿಕೊಂಡು ಇಡುವುದು ಎಷ್ಟು ಕಾನೂನುಭಂಗವೋ, ಅಷ್ಟೇ ಅಪಾಯಕಾರಿಯೂ ಆಗಬಹುದು ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿದೆ. ಅಪರಾಧ ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಟರಾಯನಪುರ ಪೊಲೀಸರು ಈ ಕುರಿತಾಗಿ ತನಿಖೆ ಮುಂದುವರಿಸಿದ್ದಾರೆ.

Related News

error: Content is protected !!