ಮನೆಯಲ್ಲಿಟ್ಟಿದ್ದ ಕಳೆನಾಶಕವನ್ನು ಜ್ಯೂಸ್ ಎಂದು ತಪ್ಪಾಗಿ ಗ್ರಹಿಸಿ ಕುಡಿದ ಪರಿಣಾಮ 14 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಿಧಿಕೃಷ್ಣ (14) ಎಂಬ ಬಾಲಕಿಯು ಈ ದುರ್ಘಟನೆಗೆ ಬಲಿಯಾಗಿದ್ದಾಳೆ. ಆರೋಗ್ಯ ಕಾಪಾಡಿಕೊಳ್ಳಲು ದಿನನಿತ್ಯ ಅಲೋವೆರಾ ಜ್ಯೂಸ್ ಕುಡಿಯುತ್ತಿದ್ದ ನಿಧಿ, ಮಾರ್ಚ್ 4ರಂದು ತನ್ನ ಮನೆಯಲ್ಲಿದ್ದ ಖಾಲಿ ಅಲೋವೆರಾ ಡಬ್ಬಿನಲ್ಲಿ ಭದ್ರವಾಗಿಟ್ಟಿದ್ದ ಕಳೆನಾಶಕವನ್ನು ತಪ್ಪಾಗಿ ಜ್ಯೂಸ್ ಎಂದು ಭಾವಿಸಿ ಕುಡಿದಿದ್ದಾಳೆ. ಇದರಿಂದ ಅನಾರೋಗ್ಯ ತಲೆದೋರಿದ ಹಿನ್ನೆಲೆ ತಕ್ಷಣವೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 31ರಂದು ನಿಧಿ ಅಸುನೀಗಿದ್ದಾಳೆ.
ಈ ಘಟನೆಗೆ ಪೋಷಕರ ನಿರ್ಲಕ್ಷ್ಯವೇ ಕಾರಣವೆಂದು ಶಂಕಿಸಲಾಗಿದ್ದು, ಅಪಾಯಕಾರಿಯಾದ ರಾಸಾಯನಿಕವನ್ನು ನಿರ್ಲಕ್ಷ್ಯದಿಂದ ಮನೆಯಲ್ಲೇ ಉಗ್ರಹಿಸಿಕೊಂಡು ಇಡುವುದು ಎಷ್ಟು ಕಾನೂನುಭಂಗವೋ, ಅಷ್ಟೇ ಅಪಾಯಕಾರಿಯೂ ಆಗಬಹುದು ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿದೆ. ಅಪರಾಧ ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಟರಾಯನಪುರ ಪೊಲೀಸರು ಈ ಕುರಿತಾಗಿ ತನಿಖೆ ಮುಂದುವರಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…