ಮನೆಯಲ್ಲಿಟ್ಟಿದ್ದ ಕಳೆನಾಶಕವನ್ನು ಜ್ಯೂಸ್ ಎಂದು ತಪ್ಪಾಗಿ ಗ್ರಹಿಸಿ ಕುಡಿದ ಪರಿಣಾಮ 14 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಿಧಿಕೃಷ್ಣ (14) ಎಂಬ ಬಾಲಕಿಯು ಈ ದುರ್ಘಟನೆಗೆ ಬಲಿಯಾಗಿದ್ದಾಳೆ. ಆರೋಗ್ಯ ಕಾಪಾಡಿಕೊಳ್ಳಲು ದಿನನಿತ್ಯ ಅಲೋವೆರಾ ಜ್ಯೂಸ್ ಕುಡಿಯುತ್ತಿದ್ದ ನಿಧಿ, ಮಾರ್ಚ್ 4ರಂದು ತನ್ನ ಮನೆಯಲ್ಲಿದ್ದ ಖಾಲಿ ಅಲೋವೆರಾ ಡಬ್ಬಿನಲ್ಲಿ ಭದ್ರವಾಗಿಟ್ಟಿದ್ದ ಕಳೆನಾಶಕವನ್ನು ತಪ್ಪಾಗಿ ಜ್ಯೂಸ್ ಎಂದು ಭಾವಿಸಿ ಕುಡಿದಿದ್ದಾಳೆ. ಇದರಿಂದ ಅನಾರೋಗ್ಯ ತಲೆದೋರಿದ ಹಿನ್ನೆಲೆ ತಕ್ಷಣವೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 31ರಂದು ನಿಧಿ ಅಸುನೀಗಿದ್ದಾಳೆ.
ಈ ಘಟನೆಗೆ ಪೋಷಕರ ನಿರ್ಲಕ್ಷ್ಯವೇ ಕಾರಣವೆಂದು ಶಂಕಿಸಲಾಗಿದ್ದು, ಅಪಾಯಕಾರಿಯಾದ ರಾಸಾಯನಿಕವನ್ನು ನಿರ್ಲಕ್ಷ್ಯದಿಂದ ಮನೆಯಲ್ಲೇ ಉಗ್ರಹಿಸಿಕೊಂಡು ಇಡುವುದು ಎಷ್ಟು ಕಾನೂನುಭಂಗವೋ, ಅಷ್ಟೇ ಅಪಾಯಕಾರಿಯೂ ಆಗಬಹುದು ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿದೆ. ಅಪರಾಧ ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಟರಾಯನಪುರ ಪೊಲೀಸರು ಈ ಕುರಿತಾಗಿ ತನಿಖೆ ಮುಂದುವರಿಸಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…