Latest

10000 ರೂಪಾಯಿ ಕೊಡಿ ನಿಮಗೇನು ತೊಂದ್ರೆ ಆಗಲ್ಲ : ಲಂಚಕ್ಕೆ ಬೇಡಿಕೆ ಇಡುತ್ತಿರುವ ತೆರಿಗೆ ಅಧಿಕಾರಿಗಳು.!

ಬೆಂಗಳೂರು, ಜುಲೈ 19: ಯುಪಿಐ ವಹಿವಾಟು ಮಾಡುತ್ತಿರುವ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಶೋಕಾಸ್ ನೋಟಿಸ್ ಜಾರಿ ಮಾಡಿರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಹಲವು ವ್ಯಾಪಾರಿಗಳು ಯುಪಿಐ ಸೇವೆ ನಿಲ್ಲಿಸಿರುವಂತ ತೀವ್ರ ಪರಿಣಾಮಗಳು ಎದುರಾಗಿವೆ. ಇದೀಗ ಈ ನೋಟಿಸ್ ಪ್ರಕರಣ ಮತ್ತೊಂದು ಬೆಳವಣಿಗೆ ಕಂಡಿದ್ದು, ನೋಟಿಸ್ ನೀಡಿದ ಕೆಲ ಅಧಿಕಾರಿಗಳ ವಿರುದ್ಧ ಲಂಚದ ಆರೋಪಗಳು ಕೇಳಿಬಂದಿವೆ.

ಬೆಂಗಳೂರಿನ ವಿಜಯನಗರ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ 40 ಲಕ್ಷ ರೂಪಾಯಿಗೂ ಹೆಚ್ಚು ವಹಿವಾಟು ನಡೆಸಿದ ವ್ಯಾಪಾರಸ್ಥರಿಗೆ ಜಿಎಸ್ಟಿ ನೋಂದಣಿ ಹಾಗೂ ತೆರಿಗೆ ಪಾವತಿಸಬೇಕೆಂದು ಸೂಚಿಸಿ ನೋಟಿಸ್ ನೀಡಲಾಗಿದೆ. ಇದರಿಂದ ಹಲವು ಸಣ್ಣ ವ್ಯಾಪಾರಿಗಳು ಯುಪಿಐ ಮೂಲಕ ವ್ಯವಹಾರ ಮಾಡುವುದರಲ್ಲಿ ಹಿಂದೇಟು ಹಾಕಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ‘ಶೋಕಾಸ್ ನೋಟಿಸ್ ರದ್ದುಮಾಡಲು 10,000 ರೂಪಾಯಿ ಕೊಡಿ, ನಿಮಗೇನು ತೊಂದರೆ ಆಗಲ್ಲ’ ಎಂದು ಲಂಚಕ್ಕೆ ಬೇಡಿಕೆ ಇಡುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋಗಳಲ್ಲಿ, ವಿಜಯನಗರದ ವಾಣಿಜ್ಯ ತೆರಿಗೆ ಇಲಾಖೆಯ ಕೆಲ ಅಧಿಕಾರಿಗಳು ನೋಟಿಸ್ ಪಡೆದ ವ್ಯಾಪಾರಿಗಳಿಂದ ನಗದು ಪಡೆಯುತ್ತಿರುವ ದೃಶ್ಯಗಳು ಪತ್ತೆಯಾಗಿವೆ. ಇದರಿಂದ ವ್ಯಾಪಾರಿಗಳು ಭಯಭೀತರಾಗಿದ್ದು, ಸರಕಾರದಿಂದ ಸ್ಪಷ್ಟನೆ ಮತ್ತು ನ್ಯಾಯ ನಿರೀಕ್ಷಿಸುತ್ತಿದ್ದಾರೆ.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಣ್ಣ ವ್ಯಾಪಾರಿಗಳು ಸರ್ಕಾರಿ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಲಂಚದ ಆರೋಪಗಳ ಕುರಿತು ತನಿಖೆ ನಡೆಸುವಂತೆ ವ್ಯಾಪಾರಿ ಸಂಘಟನೆಗಳು ಆಗ್ರಹಿಸುತ್ತಿದ್ದು, ಈ ಕುರಿತಂತೆ ಸಚಿವಾಲಯ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿವೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

15 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

15 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

15 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

15 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

15 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

15 hours ago