ಕಾರವಾರ: ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ ಮತ್ತು ಮಾರಾಟ ನಡೆಸಿದ ಆರೋಪ ಇಲಾಖಾ ತನಿಖೆಯಲ್ಲಿ ಸಾಬೀತಾದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಸಂತೋಷ್ ಲಮಾಣಿ ಅವರನ್ನು ಸೇವೆಯಿಂದ ವಜಾಗೊಳಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಆದೇಶ ಹೊರಡಿಸಿದ್ದಾರೆ.
ಸಂತೋಷ್ ಲಮಾಣಿ ಅವರು ಗೋವಾ ಗಡಿ ಭಾಗದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಅಕ್ರಮ ಮದ್ಯ ಸಾಗಾಟ ಹಾಗೂ ಮಾರಾಟ ಜಾಲದೊಂದಿಗೆ ಸಂಪರ್ಕ ಹೊಂದಿದ್ದರು ಎಂಬ ಆರೋಪ ಕೇಳಿಬಂದಿತ್ತು. ವಿವಿಧ ಠಾಣೆಗಳಿಗೆ ವರ್ಗಾವಣೆಯಾದ ಬಳಿಕವೂ ಗಡಿ ಪ್ರದೇಶದ ಸಂಪರ್ಕವನ್ನು ಬಳಸಿಕೊಂಡು ಅಕ್ರಮ ಚಟುವಟಿಕೆ ಮುಂದುವರಿಸಿದ್ದರೆಂದು ಇಲಾಖಾ ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.
2024ರ ಜೂನ್ ತಿಂಗಳಲ್ಲಿ ಗೋವಾದಿಂದ ಗೋಕರ್ಣದತ್ತ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವೇಳೆ ಅವರು ಪೊಲೀಸರ ಬಲೆಗೆ ಬಿದ್ದಿದ್ದರು. ಈ ಘಟನೆ ಬಳಿಕ ಅವರನ್ನು ಅಮಾನತುಗೊಳಿಸಲಾಗಿತ್ತು. ನಂತರ ಮತ್ತೊಂದು ಠಾಣೆಗೆ ವರ್ಗಾವಣೆಯಾದರೂ ಅಕ್ರಮ ಚಟುವಟಿಕೆ ಮುಂದುವರಿಸಿದ್ದರೆಂಬ ಆರೋಪಗಳು ಮತ್ತೆ ಕೇಳಿಬಂದಿದ್ದವು.
ನ್ಯಾಯಾಲಯದ ಕೆಲಸದ ನಿಮಿತ್ತ ಕಾರವಾರಕ್ಕೆ ತೆರಳುತ್ತಿರುವುದಾಗಿ ತಿಳಿಸಿದ್ದ ಸಂದರ್ಭದಲ್ಲಿಯೂ ಮತ್ತೊಮ್ಮೆ ಗೋವಾ ಮದ್ಯ ಸಾಗಾಟ ಪ್ರಕರಣದಲ್ಲಿ ಅವರ ಹೆಸರು ಬೆಳಕಿಗೆ ಬಂದಿತ್ತು. ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾದ ಅಕ್ರಮ ಮದ್ಯ ಸಾಗಣೆ ವಾಹನದ ತನಿಖೆಯಲ್ಲೂ ಅವರ ಪಾತ್ರ ಉಲ್ಲೇಖವಾಗಿತ್ತು.
ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಾತೇನಹಳ್ಳಿ ಅವರ ನೇತೃತ್ವದಲ್ಲಿ ನಡೆದ ಇಲಾಖಾ ತನಿಖೆಯಲ್ಲಿ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ, ಸಂತೋಷ್ ಲಮಾಣಿ ಅವರನ್ನು ಪೊಲೀಸ್ ಇಲಾಖೆಯ ಸೇವೆಯಿಂದ ವಜಾಗೊಳಿಸುವ ಕ್ರಮ ಕೈಗೊಳ್ಳಲಾಗಿದೆ. ಈ ಕ್ರಮದ ಮೂಲಕ ಅಕ್ರಮ ಚಟುವಟಿಕೆಯಲ್ಲಿ ತೊಡಗುವ ಸಿಬ್ಬಂದಿಯ ವಿರುದ್ಧ ಇಲಾಖೆ ಕಠಿಣ ನಿಲುವು ತಾಳಿರುವುದು ಮತ್ತೊಮ್ಮೆ ಸ್ಪಷ್ಟವಾಗಿದೆ.
ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ವರ್ಚಗಲ್ ಗ್ರಾಮದ ಸಮೀಪದ ಕಬ್ಬಿನ ಗದ್ದೆಯಲ್ಲಿ 30 ವರ್ಷದ ವಿವಾಹಿತ ಮಹಿಳೆಯೊಬ್ಬರ ಕೊಳೆತ ಸ್ಥಿತಿಯಲ್ಲಿದ್ದ…
ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯು 2026–27ನೇ ಶೈಕ್ಷಣಿಕ ವರ್ಷಕ್ಕಾಗಿ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ…
ದಾವಣಗೆರೆ ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಅವರ ನಿರ್ದೇಶನದ ಮೇರೆಗೆ ಜಗಳೂರು ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ…
ಬೆಂಗಳೂರು: ನಗರದಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಮತ್ತೆ ಆತಂಕ ಮೂಡಿಸುವ ಘಟನೆ ಬೆಳಕಿಗೆ ಬಂದಿದೆ. ಪಾರ್ಸೆಲ್ ವಿತರಿಸಲು ಬಂದಿದ್ದ ಡೆಲಿವರಿ…
ಭಟ್ಕಳ: ಆಯುಷ್ಮಾನ್ ಭಾರತ–ಆರೋಗ್ಯ ಕರ್ನಾಟಕ (ಎಬಿ–ಆರ್ಕೆ) ಯೋಜನೆಯ 2026–27ನೇ ಸಾಲಿನ ರಾಜ್ಯಮಟ್ಟದ ಕಾರ್ಯಕ್ಷಮತೆ ಮೌಲ್ಯಮಾಪನದಲ್ಲಿ ಭಟ್ಕಳ ತಾಲೂಕು ಆಸ್ಪತ್ರೆ ಗಮನಾರ್ಹ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನಡೆಯಲಿದ್ದು, ಅವರ ಮೊಮ್ಮಗಳು…