ಮುಂಡಗೋಡ:-ತಾಲೂಕಿನಲ್ಲಿ ಮಳೆಯ ಆರ್ಭಟಕ್ಕೆ ಪ್ರತಿದಿನ ಒಂದಿದಿಲ್ಲೊಂದು ಅವಾಂತರಗಳು ಆಗುತ್ತಿವೆ. ತಾಲೂಕಿನ ಮೈನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋದ್ನಾಳ ಗ್ರಾಮದ ಅಂಗನವಾಡಿ ಕೇಂದ್ರ ಎಲ್ಲೆಂದರಲ್ಲಿ ಬಿರುಕು ಬಿಟ್ಟು ಅಪಾಯಕಾರಿ ಹಂತಕ್ಕೆ ತಲುಪಿದೆ. ಕಟ್ಟಡದ ಮೇಲ್ಚಾವಣಿಯು ಅಲ್ಲಲ್ಲಿ ಶಿಥಿಲಗೊಂಡು ಕಳಚಿ ಬೀಳುತ್ತಿದೆ ಹಾಗಾಗಿ ಮಕ್ಕಳಿಗೆ ಏನಾದರೂ ತೊಂದರೆಯಾದರೆ ಯಾರು ಹೊಣೆ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ ಗ್ರಾಮಸ್ಥರಾದ ಲಾಮು ರಾಮು ಎಡಗೆ.
ಅಧಿಕಾರಿಗಳಿಗೆ ಗಮನಿಸಿ:-
ಈ ರೀತಿಯಾಗಿ ಅಪಾಯಕಾರಿಯಾಗಿರುವ ಕಟ್ಟಡದಲ್ಲಿ ಮಕ್ಕಳನ್ನು ಕೂರಿಸುವ ಬದಲು,ಬದಲಿ ವ್ಯವಸ್ಥೆ ಮಾಡುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ತುರ್ತು ಕ್ರಮ ಕೈಗೊಳ್ಳಬೇಕಿದೆ.
ಕಳಪೆ ಕಾಮಗಾರಿ
ಈ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಕೇವಲ 12 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದು ಈ ವರ್ಷದ ಮಳೆಗೆ ಇಷ್ಟೊಂದು ಅಪಾಯಕಾರಿ ರೀತಿಯಲ್ಲಿ ಬಿರುಕು ಬಿಟ್ಟಿದ್ದು ನೋಡಿದರೆ ಕಟ್ಟಡದ ಕಾಮಗಾರಿಯ ಗುಣಮಟ್ಟದ ಬಗ್ಗೆ ಸಂಶಯ ಮೂಡುತ್ತಿದೆ ಹೀಗಾಗಿ ಇನ್ನೂ ಮುಂದೆಯಾದರೂ ಸಾರ್ವಜನಿಕ ಕಟ್ಟಡಗಳನ್ನು ಕಟ್ಟಿಸುವಾಗ ಇಂಜಿನಿಯರ್ ಗಳು ಗುಣಮಟ್ಟದ ಕಾಮಗಾರಿ ಆಗುವಂತೆ ನೋಡಿಕೊಳ್ಳಬೇಕಿದೆ.
ವರದಿ: ಮಂಜುನಾಥ್ ಎಫ್ ಎಚ್ ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…