ಮುಂಡಗೋಡ:-ತಾಲೂಕಿನಲ್ಲಿ ಮಳೆಯ ಆರ್ಭಟಕ್ಕೆ ಪ್ರತಿದಿನ ಒಂದಿದಿಲ್ಲೊಂದು ಅವಾಂತರಗಳು ಆಗುತ್ತಿವೆ. ತಾಲೂಕಿನ ಮೈನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋದ್ನಾಳ ಗ್ರಾಮದ ಅಂಗನವಾಡಿ ಕೇಂದ್ರ ಎಲ್ಲೆಂದರಲ್ಲಿ ಬಿರುಕು ಬಿಟ್ಟು ಅಪಾಯಕಾರಿ ಹಂತಕ್ಕೆ ತಲುಪಿದೆ. ಕಟ್ಟಡದ ಮೇಲ್ಚಾವಣಿಯು ಅಲ್ಲಲ್ಲಿ ಶಿಥಿಲಗೊಂಡು ಕಳಚಿ ಬೀಳುತ್ತಿದೆ ಹಾಗಾಗಿ ಮಕ್ಕಳಿಗೆ ಏನಾದರೂ ತೊಂದರೆಯಾದರೆ ಯಾರು ಹೊಣೆ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ ಗ್ರಾಮಸ್ಥರಾದ ಲಾಮು ರಾಮು ಎಡಗೆ.
ಅಧಿಕಾರಿಗಳಿಗೆ ಗಮನಿಸಿ:-
ಈ ರೀತಿಯಾಗಿ ಅಪಾಯಕಾರಿಯಾಗಿರುವ ಕಟ್ಟಡದಲ್ಲಿ ಮಕ್ಕಳನ್ನು ಕೂರಿಸುವ ಬದಲು,ಬದಲಿ ವ್ಯವಸ್ಥೆ ಮಾಡುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ತುರ್ತು ಕ್ರಮ ಕೈಗೊಳ್ಳಬೇಕಿದೆ.
ಕಳಪೆ ಕಾಮಗಾರಿ
ಈ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಕೇವಲ 12 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದು ಈ ವರ್ಷದ ಮಳೆಗೆ ಇಷ್ಟೊಂದು ಅಪಾಯಕಾರಿ ರೀತಿಯಲ್ಲಿ ಬಿರುಕು ಬಿಟ್ಟಿದ್ದು ನೋಡಿದರೆ ಕಟ್ಟಡದ ಕಾಮಗಾರಿಯ ಗುಣಮಟ್ಟದ ಬಗ್ಗೆ ಸಂಶಯ ಮೂಡುತ್ತಿದೆ ಹೀಗಾಗಿ ಇನ್ನೂ ಮುಂದೆಯಾದರೂ ಸಾರ್ವಜನಿಕ ಕಟ್ಟಡಗಳನ್ನು ಕಟ್ಟಿಸುವಾಗ ಇಂಜಿನಿಯರ್ ಗಳು ಗುಣಮಟ್ಟದ ಕಾಮಗಾರಿ ಆಗುವಂತೆ ನೋಡಿಕೊಳ್ಳಬೇಕಿದೆ.
ವರದಿ: ಮಂಜುನಾಥ್ ಎಫ್ ಎಚ್ ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…