ಬೆಂಗಳೂರು: ಆಭರಣ ಅಂಗಡಿಯಿಂದ ಚಿನ್ನ ಪಡೆದು ವಾಪಸ್ ನೀಡದೆ ದುರ್ನಡತೆ ತೋರಿದ ಕಾಟನ್ಪೇಟೆ ಠಾಣೆ ಪಿಎಸ್ಐ ಪಿ.ಜಿ. ಸಂತೋಷ್ ಅವರನ್ನು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಅಮಾನತುಗೊಳಿಸಿದ್ದಾರೆ.
ಸಂತ್ರಸ್ತ ಧನಂಜಯ್ ಶ್ಯಾಮ್ ರಾವ್ ಮಾಲಿ ನೀಡಿದ ದೂರಿನ ಅನ್ವಯ ಹಲಸೂರು ಗೇಟ್ ಠಾಣೆಯಲ್ಲಿ ಸಂತೋಷ್ ವಿರುದ್ಧ ವಂಚನೆ, ನಂಬಿಕೆ ದ್ರೋಹ ಮತ್ತು ಜೀವ ಬೆದರಿಕೆ ಆರೋಪಗಳಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚಿನ್ನ ಪಡೆದು ವಾಪಸ್ ನೀಡದ ಸಂತೋಷ್
2020ರಲ್ಲಿ ಹಲಸೂರು ಗೇಟ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್ಐ ಸಂತೋಷ್, ನಗರದ ಸಿಟಿ ಸ್ಟ್ರೀಟ್ ರಸ್ತೆಯಲ್ಲಿರುವ ಧನಂಜಯ್ ಅವರ ಚಿನ್ನದ ಅಂಗಡಿಗೆ ಭೇಟಿ ನೀಡಿ, ನ್ಯಾಯಾಂಗ ವಿಚಾರಣೆಗಾಗಿ 950 ಗ್ರಾಂ ಚಿನ್ನದ ಗಟ್ಟಿಯನ್ನು ತಾತ್ಕಾಲಿಕವಾಗಿ ವಶಪಡಿಸಿಕೊಂಡರು. ಅದನ್ನು ಸಂಜೆಯೊಳಗೆ ಮರಳಿಸುವ ಭರವಸೆ ನೀಡಿದರೂ, ತಿಂಗಳುಗಳ ಕಾಲ ಚಿನ್ನವನ್ನು ವಾಪಸ್ ನೀಡಲು ವಿಫಲರಾಗಿದ್ದರು.
ಧನಂಜಯ್ ಅವರ ಅನೇಕ ಪ್ರಯತ್ನಗಳ ನಡುವೆಯೂ ಸಂತೋಷ್ ಚಿನ್ನವನ್ನು ಹಿಂದಿರುಗಿಸದೆ, ಬದಲಿಗೆ ಹನುಮಂತನಗರದಲ್ಲಿರುವ ತನ್ನ ಪತ್ನಿಯ ಹೆಸರಿನಲ್ಲಿನ ನಿವೇಶನವನ್ನು ನೋಂದಾಯಿಸಿ ಕೊಡುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ, ಈ ಆಸ್ತಿಯನ್ನು ಯಾರಿಗೂ ಗೊತ್ತಾಗದಂತೆ ಬೇರೊಬ್ಬರಿಗೆ ಮಾರಾಟ ಮಾಡಿದ್ದರು.
ಖಾಲಿ ಚೆಕ್, ಬೆದರಿಕೆ, ಮತ್ತು ದೂರು
ಸಂತೋಷ್ ನೀಡಿದ್ದ ಚೆಕ್ಗಳು ಬ್ಯಾಂಕಿನಲ್ಲಿ ಬೌನ್ಸ್ ಆಗುತ್ತಿದ್ದಂತೆ ಧನಂಜಯ್ ಅವರ ಶಂಕೆ ಮತ್ತಷ್ಟು ಗಂಭೀರಗೊಂಡಿತು. ಅವರು ಇದನ್ನು ಪ್ರಶ್ನಿಸಿದಾಗ, ಸುಳ್ಳು ಪ್ರಕರಣ ದಾಖಲಿಸಿ ಬಂಧಿಸುವ ಬೆದರಿಕೆ ನೀಡುತ್ತಿದ್ದ ಸಂತೋಷ್ ವಿರುದ್ಧ ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್ ಅವರಿಗೆ ದೂರು ಸಲ್ಲಿಸಲಾಯಿತು.
ಆಂತರಿಕ ತನಿಖೆ ಮತ್ತು ಅಮಾನತು
ಧನಂಜಯ್ ಅವರ ದೂರಿನ ಆಧಾರದಲ್ಲಿ ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ಕುಮಾರ್ ಅವರು ಆಂತರಿಕ ತನಿಖೆ ನಡೆಸಿ, ಸಂತೋಷ್ ಕರ್ತವ್ಯಲೋಪ, ವಂಚನೆ ಹಾಗೂ ದುರ್ನಡತೆಯಲ್ಲಿ ತೊಡಗಿರುವುದನ್ನು ದೃಢಪಡಿಸಿದರು. ಈ ವರದಿ ಆಧಾರದಲ್ಲಿ ಡಿಸಿಪಿ ಅವರು ಪೊಲೀಸ್ ಕಮಿಷನರ್ ಬಿ. ದಯಾನಂದ ಅವರ ಗಮನಕ್ಕೆ ತರಲಾಗಿ, ಪಿಎಸ್ಐ ಸಂತೋಷ್ ಅವರನ್ನು ತಕ್ಷಣದ ಪರಿಣಾಮದಿಂದ ಅಮಾನತುಗೊಳಿಸಿ, ಹೆಚ್ಚಿನ ತನಿಖೆಗೆ ಆದೇಶಿಸಲಾಗಿದೆ.
ಈ ಪ್ರಕರಣವು ಪೊಲೀಸ್ ಇಲಾಖೆಯ ಒಳಗಿನ ಭ್ರಷ್ಟಾಚಾರ ಮತ್ತು ಅಧಿಕಾರ ದುರ್ವಿನಿಯೋಗದ ಕುರಿತಾಗಿ ಗಂಭೀರ ಚರ್ಚೆಗೆ ಕಾರಣವಾಗಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…