Latest

ಚಿನ್ನದ ವಂಚನೆ ಪ್ರಕರಣ: ಪಿಎಸ್‌ಐ ಸಂತೋಷ್ ಅಮಾನತು

ಬೆಂಗಳೂರು: ಆಭರಣ ಅಂಗಡಿಯಿಂದ ಚಿನ್ನ ಪಡೆದು ವಾಪಸ್ ನೀಡದೆ ದುರ್ನಡತೆ ತೋರಿದ ಕಾಟನ್‌ಪೇಟೆ ಠಾಣೆ ಪಿಎಸ್‌ಐ ಪಿ.ಜಿ. ಸಂತೋಷ್ ಅವರನ್ನು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಅಮಾನತುಗೊಳಿಸಿದ್ದಾರೆ.

ಸಂತ್ರಸ್ತ ಧನಂಜಯ್ ಶ್ಯಾಮ್ ರಾವ್ ಮಾಲಿ ನೀಡಿದ ದೂರಿನ ಅನ್ವಯ ಹಲಸೂರು ಗೇಟ್ ಠಾಣೆಯಲ್ಲಿ ಸಂತೋಷ್ ವಿರುದ್ಧ ವಂಚನೆ, ನಂಬಿಕೆ ದ್ರೋಹ ಮತ್ತು ಜೀವ ಬೆದರಿಕೆ ಆರೋಪಗಳಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಿನ್ನ ಪಡೆದು ವಾಪಸ್ ನೀಡದ ಸಂತೋಷ್

2020ರಲ್ಲಿ ಹಲಸೂರು ಗೇಟ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್‌ಐ ಸಂತೋಷ್, ನಗರದ ಸಿಟಿ ಸ್ಟ್ರೀಟ್ ರಸ್ತೆಯಲ್ಲಿರುವ ಧನಂಜಯ್ ಅವರ ಚಿನ್ನದ ಅಂಗಡಿಗೆ ಭೇಟಿ ನೀಡಿ, ನ್ಯಾಯಾಂಗ ವಿಚಾರಣೆಗಾಗಿ 950 ಗ್ರಾಂ ಚಿನ್ನದ ಗಟ್ಟಿಯನ್ನು ತಾತ್ಕಾಲಿಕವಾಗಿ ವಶಪಡಿಸಿಕೊಂಡರು. ಅದನ್ನು ಸಂಜೆಯೊಳಗೆ ಮರಳಿಸುವ ಭರವಸೆ ನೀಡಿದರೂ, ತಿಂಗಳುಗಳ ಕಾಲ ಚಿನ್ನವನ್ನು ವಾಪಸ್ ನೀಡಲು ವಿಫಲರಾಗಿದ್ದರು.

ಧನಂಜಯ್ ಅವರ ಅನೇಕ ಪ್ರಯತ್ನಗಳ ನಡುವೆಯೂ ಸಂತೋಷ್ ಚಿನ್ನವನ್ನು ಹಿಂದಿರುಗಿಸದೆ, ಬದಲಿಗೆ ಹನುಮಂತನಗರದಲ್ಲಿರುವ ತನ್ನ ಪತ್ನಿಯ ಹೆಸರಿನಲ್ಲಿನ ನಿವೇಶನವನ್ನು ನೋಂದಾಯಿಸಿ ಕೊಡುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ, ಈ ಆಸ್ತಿಯನ್ನು ಯಾರಿಗೂ ಗೊತ್ತಾಗದಂತೆ ಬೇರೊಬ್ಬರಿಗೆ ಮಾರಾಟ ಮಾಡಿದ್ದರು.

ಖಾಲಿ ಚೆಕ್, ಬೆದರಿಕೆ, ಮತ್ತು ದೂರು

ಸಂತೋಷ್ ನೀಡಿದ್ದ ಚೆಕ್‌ಗಳು ಬ್ಯಾಂಕಿನಲ್ಲಿ ಬೌನ್ಸ್ ಆಗುತ್ತಿದ್ದಂತೆ ಧನಂಜಯ್ ಅವರ ಶಂಕೆ ಮತ್ತಷ್ಟು ಗಂಭೀರಗೊಂಡಿತು. ಅವರು ಇದನ್ನು ಪ್ರಶ್ನಿಸಿದಾಗ, ಸುಳ್ಳು ಪ್ರಕರಣ ದಾಖಲಿಸಿ ಬಂಧಿಸುವ ಬೆದರಿಕೆ ನೀಡುತ್ತಿದ್ದ ಸಂತೋಷ್ ವಿರುದ್ಧ ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್ ಅವರಿಗೆ ದೂರು ಸಲ್ಲಿಸಲಾಯಿತು.

ಆಂತರಿಕ ತನಿಖೆ ಮತ್ತು ಅಮಾನತು

ಧನಂಜಯ್ ಅವರ ದೂರಿನ ಆಧಾರದಲ್ಲಿ ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ಕುಮಾರ್ ಅವರು ಆಂತರಿಕ ತನಿಖೆ ನಡೆಸಿ, ಸಂತೋಷ್ ಕರ್ತವ್ಯಲೋಪ, ವಂಚನೆ ಹಾಗೂ ದುರ್ನಡತೆಯಲ್ಲಿ ತೊಡಗಿರುವುದನ್ನು ದೃಢಪಡಿಸಿದರು. ಈ ವರದಿ ಆಧಾರದಲ್ಲಿ ಡಿಸಿಪಿ ಅವರು ಪೊಲೀಸ್ ಕಮಿಷನರ್ ಬಿ. ದಯಾನಂದ ಅವರ ಗಮನಕ್ಕೆ ತರಲಾಗಿ, ಪಿಎಸ್‌ಐ ಸಂತೋಷ್ ಅವರನ್ನು ತಕ್ಷಣದ ಪರಿಣಾಮದಿಂದ ಅಮಾನತುಗೊಳಿಸಿ, ಹೆಚ್ಚಿನ ತನಿಖೆಗೆ ಆದೇಶಿಸಲಾಗಿದೆ.

ಈ ಪ್ರಕರಣವು ಪೊಲೀಸ್ ಇಲಾಖೆಯ ಒಳಗಿನ ಭ್ರಷ್ಟಾಚಾರ ಮತ್ತು ಅಧಿಕಾರ ದುರ್ವಿನಿಯೋಗದ ಕುರಿತಾಗಿ ಗಂಭೀರ ಚರ್ಚೆಗೆ ಕಾರಣವಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago