Latest

ಚಿನ್ನ ಕಳ್ಳಸಾಗಣೆ ಪ್ರಕರಣ: ಜಾಮೀನಿಗಾಗಿ ಹೈಕೋರ್ಟ್ನೆ ತಲುಪಿದ ನಟಿ ರನ್ಯಾ ರಾವ್

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿರುವ ನಟಿ ರನ್ಯಾ ರಾವ್, ತಮ್ಮ ಜಾಮೀನುಗಾಗಿ ಇಂದು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಅರ್ಜಿಯ ವಿಚಾರಣೆ ಮುಂದಿನ ವಾರ ನಡೆಯುವ ಸಾಧ್ಯತೆ ಇದೆ.

ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧನದಲ್ಲಿರುವ ರನ್ಯಾ, ಡೆಪಾರ್ಟ್ಮೆಂಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (DRI) ಅಧಿಕಾರಿಗಳ ದಾಳಿ ವೇಳೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮರಳಿ ಹಿಡಿಯಲ್ಪಟ್ಟಿದ್ದರು. ದುಬೈನಿಂದ ಸುಮಾರು ₹12.56 ಕೋಟಿ ಮೌಲ್ಯದ 14 ಕೆಜಿ ಚಿನ್ನ ಕಳ್ಳಸಾಗಿಸಲು ಯತ್ನಿಸಿದ ಆರೋಪದಡಿ ಅವರನ್ನು ಮಾರ್ಚ್ 3ರಂದು ಬಂಧಿಸಲಾಗಿತ್ತು.

ಈ ಹಿಂದೆ, ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಮಾರ್ಚ್ 16ರಂದು ತಿರಸ್ಕರಿಸಿತ್ತು. ಈ ನಂತರ ಅವರು 64ನೇ ಸೆಷನ್ಸ್ ಕೋರ್ಟ್ ನಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅಲ್ಲಿ ಸಹ ಅವರ ಮನವಿಗೆ ನಿರಾಕರಣೆ ದೊರಕಿತು.

ಈ ಹಿನ್ನಲೆಯಲ್ಲಿ, ಇದೀಗ ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಸಿರುವ ರನ್ಯಾ, ತಮಗೆ ಕೊನೆಗೂ ಜಾಮೀನು ಸಿಗುತ್ತದಾ ಎಂಬುದರ ಬಗ್ಗೆ ಕುತೂಹಲ ಮೂಡಿಸಿದೆ. ಹೈಕೋರ್ಟ್ನಲ್ಲಿ ಈ ಪ್ರಕರಣದ ವಿಚಾರಣೆ ಮುಂದಿನ ವಾರ ನಡೆಯುವ ಸಾಧ್ಯತೆ ಇದೆ.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

14 minutes ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

6 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

6 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

6 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

6 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

7 hours ago