Latest

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್‌ ಸಂಬಂಧಿತವಾಗಿ ಬಳ್ಳಾರಿಯಲ್ಲಿ ಚಿನ್ನದ ಅಂಗಡಿ ಮಾಲೀಕ ಸಾಹಿಲ್ ಜೈನ್‌ ಬಂಧನ

ಬೆಂಗಳೂರು: ನಟಿ ರನ್ಯಾ ರಾವ್ ವಿರುದ್ಧದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮತ್ತೊಂದು ಪ್ರಮುಖ ಬಂಧನವಾಗಿದೆ. ಡೈರೆಕ್ಟೊರೇಟ್ ಆಫ್ ರೆವೆನ್ಯೂ ಇಂಟಲಿಜೆನ್ಸ್ (ಡಿಆರ್‌ಐ) ಅಧಿಕಾರಿಗಳು ಬಳ್ಳಾರಿಯಲ್ಲಿ ಚಿನ್ನದ ಅಂಗಡಿ ಮಾಲೀಕ ಸಾಹಿಲ್ ಜೈನ್‌ ಅನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಈ ಹಿಂದೆ ನಟಿ ರನ್ಯಾ ರಾವ್ ಮತ್ತು ಆಕೆಯ ಮಾಜಿ ಪ್ರಿಯಕರ ತರುಣ್ ರಾಜ್‌ನ್ನು ಬಂಧಿಸಲಾಗಿತ್ತು.

ಸಾಹಿಲ್ ಜೈನ್‌ ಚಿನ್ನ ಕರಗಿಸುತ್ತಿದ್ದ ಮಾಹಿತಿ ಬಯಲು

ವಿಚಾರಣೆ ವೇಳೆ ರನ್ಯಾ ರಾವ್‌ ಮತ್ತು ತರುಣ್ ರಾಜ್‌ ನಿರಂತರ ಸಂಪರ್ಕದಲ್ಲಿದ್ದ ಮತ್ತೊಬ್ಬ ವ್ಯಕ್ತಿ ಸಾಹಿಲ್ ಜೈನ್‌ ಎಂಬುದು ಹೊರಬಿದ್ದಿದೆ. ಚಿನ್ನದ ವ್ಯಾಪಾರ ನಡೆಸುತ್ತಿದ್ದ ಈತ, ಕಳ್ಳಸಾಗಣೆ ಮಾಡಲಾಗುತ್ತಿದ್ದ ಚಿನ್ನವನ್ನು ಕರಗಿಸಿ, ಆಪತ್ತಿಗೆ ಬಾರದಂತೆ ಮಾರಾಟ ಮಾಡುತ್ತಿದ್ದ. ಇದಕ್ಕಾಗಿ ಶೇ.10ರಿಂದ 15ರಷ್ಟು ಕಮಿಷನ್ ಪಡೆಯುತ್ತಿದ್ದನೆಂಬ ಮಾಹಿತಿ ಲಭ್ಯವಾಗಿದೆ.

ಡಿಆರ್‌ಐ ಅಧಿಕಾರಿಗಳು ಗುರುವಾರ ಬಳ್ಳಾರಿಯಲ್ಲಿ ಕಾರ್ಯಾಚರಣೆ ನಡೆಸಿ, ಸಾಹಿಲ್ ಜೈನ್‌ನ್ನು ಬಂಧಿಸಿದ್ದಾರೆ. ಇದೀಗ ನಾಲ್ಕು ದಿನಗಳ ಕಾಲ ವಶಕ್ಕೆ ಪಡೆದು, ಆತನ ವಿರುದ್ಧ ಆಳವಾದ ತನಿಖೆ ನಡೆಸಲಾಗುತ್ತಿದೆ.

ಮುಂಬೈಯಿಂದ ಬಳ್ಳಾರಿಯ ತನಕದ ಸಂಪರ್ಕ ಜಾಲ

ಮೂಲತಃ ಬಟ್ಟೆ ವ್ಯಾಪಾರದಿಂದ ತನ್ನ ವೃತ್ತಿ ಆರಂಭಿಸಿದ್ದ ಸಾಹಿಲ್ ಜೈನ್‌ ಕುಟುಂಬ ಹಲವು ವರ್ಷಗಳವರೆಗೆ ಬಳ್ಳಾರಿಯಲ್ಲಿ ವಾಸವಿತ್ತು. ಆದರೆ, ಇತ್ತೀಚೆಗೆ ಅವರು ಬೆಂಗಳೂರಿಗೆ ಸ್ಥಳಾಂತರವಾದರೂ, ಸಾಹಿಲ್ ಮಾತ್ರ ಮುಂಬೈನಲ್ಲಿ ತನ್ನ ಸೋದರ ಮಾವನೊಂದಿಗೆ ವಾಸವಿದ್ದ.

ಈ ಹಿಂದೆ ಸಹ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ಸಾಹಿಲ್ ಜೈನ್‌ನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದ ತಿಳಿದು ಬಂದಿದೆ. ಇದೀಗ, ನಟಿ ರನ್ಯಾ ರಾವ್‌ ಜತೆಗಿನ ಅವಿನಾಭಾವ ಸಂಬಂಧ ಮತ್ತು ಚಿನ್ನ ಕಳ್ಳಸಾಗಣೆಯಲ್ಲಿ ಅವನ ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.

ತನಿಖೆ ಮುಂದುವರಿದಂತೆ ಮತ್ತಷ್ಟು ಬಂಧನ ಸಾಧ್ಯತೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಬಂಧನಗಳು ನಡೆಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರನ್ಯಾ ರಾವ್‌, ತರುಣ್ ರಾಜ್ ಹಾಗೂ ಸಾಹಿಲ್ ಜೈನ್‌ ನಡುವಿನ ಹಣಕಾಸು ಲೆನದು-ದೆನದು, ಚಿನ್ನದ ಸಾಗಣೆ ಮಾರ್ಗಗಳು ಮತ್ತು ಈ ಜಾಲದಲ್ಲಿ ಇನ್ನೂ ಎಷ್ಟು ಮಂದಿ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

ಡಿಆರ್‌ಐ ನಡೆಸುತ್ತಿರುವ ಈ ಆಪರೇಷನ್‌ಗೆ ಸಿನಿಮಾ, ಉದ್ಯಮ ಹಾಗೂ ಸ್ಮಗ್ಲಿಂಗ್ ಜಾಲದ ನಡುವಿನ ಸಂಪರ್ಕದ ಕುರಿತ ಬಹುಮುಖ್ಯ ಅಂಶಗಳು ಹೊರಬರುತ್ತಿವೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

10 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

10 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

10 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

10 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago