Latest

ಸುರಸಾಗರ ಸರೋವರದಲ್ಲಿ ಶಿವನ ಚಿನ್ನದ ಪ್ರತಿಮೆ ಅನಾವರಣ

ಗುಜರಾತ್‌ನ ವಡೋದರಾದ ಸುರ್‌ಸಾಗರ್ ಸರೋವರದಲ್ಲಿ 111 ಅಡಿ ಎತ್ತರದ ಶಿವನ ಪ್ರತಿಮೆಯನ್ನು 12 ಕೋಟಿ ರೂಪಾಯಿ ಮೌಲ್ಯದ ಚಿನ್ನದಿಂದ ಮಾಡಲಾಗಿದೆ. ಈ ಮೂರ್ತಿ ನಿರ್ಮಾಣಕ್ಕಾಗಿ 17.5 ಕೆಜಿ ಚಿನ್ನ ಬಳಸಲಾಗಿದೆ.
ಮಂಜಲ್‌ಪುರ ಶಾಸಕ ಯೋಗೀಶ್ ಪಟೇಲ್ ನೇತೃತ್ವದಲ್ಲಿ ಸತ್ಯಂ, ಶಿವಂ, ಸುಂದರಂ ಸಮಿತಿ ಎಂಬ ಟ್ರಸ್ಟ್ ಈ ಬೃಹತ್ ಶಿವನ ಪ್ರತಿಮೆಯನ್ನು ಸ್ಥಾಪಿಸಿದೆ. ಈ ಪ್ರತಿಮೆಯ ನಿರ್ಮಾಣ ಕಾರ್ಯ 1996 ರಲ್ಲಿ ಪ್ರಾರಂಭವಾಗಿ 2002 ರಲ್ಲಿ ಪೂರ್ಣಗೊಂಡಿತು. ಈ ವಿಗ್ರಹ ಆಗ ತಾಮ್ರದಿಂದ ಮಾಡಲ್ಪಟ್ಟಿತ್ತು. ನಂತರ, ಸ್ವರ್ಣ ಸಂಕಲ್ಪ ಪ್ರತಿಷ್ಠಾನವು ಪ್ರತಿಮೆಗೆ ಚಿನ್ನದ ಲೇಪನ ಮಾಡಲು ನಿರ್ಧರಿಸಿತು. ಅಂತಿಮವಾಗಿ ದೇವಾದಿದೇವನ ವಿಗ್ರಹ ಇದೀಗ ಸ್ವರ್ಣಲೇಪನದಲ್ಲಿದೆ. ಸ್ವರ್ಣ ಲೇಪನಕ್ಕೆ ಅಗತ್ಯ ಹಣ ನೀಡಲು ಜನರು ಮುಂದೆ ಬಂದು ಸತ್ಯಂ, ಶಿವಂ, ಸುಂದರಂ ಸಮಿತಿ ಟ್ರಸ್ಟ್ ಗೆ ದೇಣಿಗೆ ರೂಪದಲ್ಲಿ ನೆರವು ನೀಡಿದರು. ಹೀಗಾಗಿ 17.5 ಕೆಜಿ ಚಿನ್ನವನ್ನು ಚಿನ್ನದ ಲೇಪನಕ್ಕೆ ಬಳಸಲಾಗಿದ್ದು, 12 ಕೋಟಿ ರೂಪಾಯಿ ವೆಚ್ಚವಾಗಿದೆ.
ವಡೋದರದಲ್ಲಿ ಶಿವನ ವಾರ್ಷಿಕ ಮೆರವಣಿಗೆಯು ಸುರ್ಸಾಗರ್ ಬಳಿ ಕೊನೆಗೊಳ್ಳುತ್ತದೆ. ನಂತರ ವಿಗ್ರಹದ ಬಳಿ ಆರತಿ ಸಲ್ಲಿಸಲಾಗುವುದು. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ರವರು 111 ಅಡಿ ಚಿನ್ನದ ಲೇಪಿತ ಶಿವನ ಪ್ರತಿಮೆಯನ್ನು ವಡೋದರಾಕ್ಕೆ ಮಹಾಶಿವರಾತ್ರಿಯ ಸಂದರ್ಭದಲ್ಲಿ ಅಧಿಕೃತವಾಗಿ ಸಮರ್ಪಿಸಲಿದ್ದಾರೆ. ವಡೋದರಾ ನಗರದ ಜನರು ಈ ಹಬ್ಬಗಳಲ್ಲಿ ಭಾಗವಹಿಸಲು ಉತ್ಸುಕರಾಗಿದ್ದು, ಶಿವನ ಮೂರ್ತಿ ಅನಾವರಣಕ್ಕೆ ಜನಸಾಗರವೇ ಹರಿದು ಬರಲಿದೆ.

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

55 minutes ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

56 minutes ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

58 minutes ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

59 minutes ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

1 hour ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

1 hour ago