Latest

ಸುರಸಾಗರ ಸರೋವರದಲ್ಲಿ ಶಿವನ ಚಿನ್ನದ ಪ್ರತಿಮೆ ಅನಾವರಣ

ಗುಜರಾತ್‌ನ ವಡೋದರಾದ ಸುರ್‌ಸಾಗರ್ ಸರೋವರದಲ್ಲಿ 111 ಅಡಿ ಎತ್ತರದ ಶಿವನ ಪ್ರತಿಮೆಯನ್ನು 12 ಕೋಟಿ ರೂಪಾಯಿ ಮೌಲ್ಯದ ಚಿನ್ನದಿಂದ ಮಾಡಲಾಗಿದೆ. ಈ ಮೂರ್ತಿ ನಿರ್ಮಾಣಕ್ಕಾಗಿ 17.5 ಕೆಜಿ ಚಿನ್ನ ಬಳಸಲಾಗಿದೆ.
ಮಂಜಲ್‌ಪುರ ಶಾಸಕ ಯೋಗೀಶ್ ಪಟೇಲ್ ನೇತೃತ್ವದಲ್ಲಿ ಸತ್ಯಂ, ಶಿವಂ, ಸುಂದರಂ ಸಮಿತಿ ಎಂಬ ಟ್ರಸ್ಟ್ ಈ ಬೃಹತ್ ಶಿವನ ಪ್ರತಿಮೆಯನ್ನು ಸ್ಥಾಪಿಸಿದೆ. ಈ ಪ್ರತಿಮೆಯ ನಿರ್ಮಾಣ ಕಾರ್ಯ 1996 ರಲ್ಲಿ ಪ್ರಾರಂಭವಾಗಿ 2002 ರಲ್ಲಿ ಪೂರ್ಣಗೊಂಡಿತು. ಈ ವಿಗ್ರಹ ಆಗ ತಾಮ್ರದಿಂದ ಮಾಡಲ್ಪಟ್ಟಿತ್ತು. ನಂತರ, ಸ್ವರ್ಣ ಸಂಕಲ್ಪ ಪ್ರತಿಷ್ಠಾನವು ಪ್ರತಿಮೆಗೆ ಚಿನ್ನದ ಲೇಪನ ಮಾಡಲು ನಿರ್ಧರಿಸಿತು. ಅಂತಿಮವಾಗಿ ದೇವಾದಿದೇವನ ವಿಗ್ರಹ ಇದೀಗ ಸ್ವರ್ಣಲೇಪನದಲ್ಲಿದೆ. ಸ್ವರ್ಣ ಲೇಪನಕ್ಕೆ ಅಗತ್ಯ ಹಣ ನೀಡಲು ಜನರು ಮುಂದೆ ಬಂದು ಸತ್ಯಂ, ಶಿವಂ, ಸುಂದರಂ ಸಮಿತಿ ಟ್ರಸ್ಟ್ ಗೆ ದೇಣಿಗೆ ರೂಪದಲ್ಲಿ ನೆರವು ನೀಡಿದರು. ಹೀಗಾಗಿ 17.5 ಕೆಜಿ ಚಿನ್ನವನ್ನು ಚಿನ್ನದ ಲೇಪನಕ್ಕೆ ಬಳಸಲಾಗಿದ್ದು, 12 ಕೋಟಿ ರೂಪಾಯಿ ವೆಚ್ಚವಾಗಿದೆ.
ವಡೋದರದಲ್ಲಿ ಶಿವನ ವಾರ್ಷಿಕ ಮೆರವಣಿಗೆಯು ಸುರ್ಸಾಗರ್ ಬಳಿ ಕೊನೆಗೊಳ್ಳುತ್ತದೆ. ನಂತರ ವಿಗ್ರಹದ ಬಳಿ ಆರತಿ ಸಲ್ಲಿಸಲಾಗುವುದು. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ರವರು 111 ಅಡಿ ಚಿನ್ನದ ಲೇಪಿತ ಶಿವನ ಪ್ರತಿಮೆಯನ್ನು ವಡೋದರಾಕ್ಕೆ ಮಹಾಶಿವರಾತ್ರಿಯ ಸಂದರ್ಭದಲ್ಲಿ ಅಧಿಕೃತವಾಗಿ ಸಮರ್ಪಿಸಲಿದ್ದಾರೆ. ವಡೋದರಾ ನಗರದ ಜನರು ಈ ಹಬ್ಬಗಳಲ್ಲಿ ಭಾಗವಹಿಸಲು ಉತ್ಸುಕರಾಗಿದ್ದು, ಶಿವನ ಮೂರ್ತಿ ಅನಾವರಣಕ್ಕೆ ಜನಸಾಗರವೇ ಹರಿದು ಬರಲಿದೆ.

ಭ್ರಷ್ಟರ ಬೇಟೆ

Recent Posts

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

13 hours ago

ಖಾಸಗಿ ವಿಡಿಯೋ ಬೆದರಿಕೆ, ಕೋಟಿ ರೂ. ಬೇಡಿಕೆ: ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್

ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್…

13 hours ago

ಆಂಬ್ಯುಲೆನ್ಸ್‌ನಲ್ಲೇ ರೋಮ್ಯಾನ್ಸ್: 5 ಕಿಮೀ ಬೆನ್ನಟ್ಟಿದ ಸಾರ್ವಜನಿಕರು, ವಿಡಿಯೋ ವೈರಲ್

ಛತ್ತರ್‌ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನೊಳಗೆ ಯುವತಿ ಹಾಗೂ ಇಬ್ಬರು…

14 hours ago

ವಿಚ್ಛೇದಿತ ಐಐಟಿ ವರನ ವಿವಾದಾತ್ಮಕ ಬೇಡಿಕೆ: ‘ವರ್ಜಿನ್ ಬ್ರಾಹ್ಮಣ ವಧು ಬೇಕು’ ಹೇಳಿಕೆಗೆ ಚರ್ಚೆ

ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…

17 hours ago

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…

22 hours ago

ನಿಶ್ಚಿತಾರ್ಥದ ಬಳಿಕ ನಿಜ ಮುಖ ಬಯಲು: ಭಾವಿ ಪತಿಯ ಅವಮಾನಕ್ಕೆ ಮನನೊಂದು ಎಂ.ಎಸ್ಸಿ ಪದವೀಧರೆ ಆತ್ಮಹತ್ಯೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…

22 hours ago