ಬೆಂಗಳೂರು: ಯಾತ್ರೆಗೆ ತೆರಳಿದ್ದ ಸಂದರ್ಭವನ್ನು ಉಪಯೋಗಿಸಿಕೊಂಡು, ಮನೆಗೆ ಬೀಗ ಹಾಕಿದ್ದೇ ಸುಲಭ ಅವಕಾಶವಾಯಿತು ಎಂಬಂತೆ ಮನೆಯಲ್ಲಿನ ಚಿನ್ನಾಭರಣಗಳನ್ನು ಕದ್ದಮೇಲಾದ್ದು ಯಾರಿಂದೋ ಅಲ್ಲ… ತನಿಖೆಯಲ್ಲಿ ದೂರುದಾರರ ಮಗಳೇ ಈ ಕೃತ್ಯ ಎಸಗಿರುವುದು ಬಹಿರಂಗವಾಗಿದೆ.
ಈ ಘಟನೆ ಮಾರತಹಳ್ಳಿಯ ಯಮಲೂರಿನಲ್ಲಿ ನಡೆದಿದ್ದು, ಸುಮಾರು 258 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿವೆ. ಅವುಗಳ ಮೌಲ್ಯ ಸುಮಾರು 21 ಲಕ್ಷ ರೂಪಾಯಿಯಷ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾತ್ರೆಯಿಂದ ಮನೆಗೆ ಹಿಂದಿರುಗಿದ ಕುಟುಂಬದವರು ಬೀಗ ಹಾಗೆ ಇದ್ದರೂ, ಮನೆಯೊಳಗೆ ಪ್ರವೇಶಿಸಿದಾಗ ಬೀರುವಿನಲ್ಲಿ ಇರಿಸಿದ್ದ ಆಭರಣಗಳು ಕಾಣೆಯಾಗಿರುವುದು ಗೊತ್ತಾಯಿತು. ತಕ್ಷಣ ಮಾರತಹಳ್ಳಿ ಪೊಲೀಸರಿಗೆ ದೂರು ನೀಡಲಾಯಿತು.
ಪೊಲೀಸರ ತನಿಖೆ ವೇಳೆ ದೂರುದಾರರು ತಮ್ಮ ಮಗಳು, ತಂಗಿ ಮತ್ತು ತಂಗಿಯ ಮಗನ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಮಗಳನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ, ಆಕೆ ಕೃತ್ಯವನ್ನೇ ಒಪ್ಪಿಕೊಂಡಿದ್ದಾಳೆ.
ವಿಚಾರಣೆಯಲ್ಲಿ ಆರೋಪಿತೆ 30 ಗ್ರಾಂ ಚಿನ್ನಾಭರಣವನ್ನು ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಅಡಮಾನವಿಟ್ಟು, ಉಳಿದ 228 ಗ್ರಾಂನ್ನು ತನ್ನ ಮನೆಯಲ್ಲಿ ಇಟ್ಟುಕೊಂಡಿರುವುದಾಗಿ ಮಾಹಿತಿ ನೀಡಿದ್ದಾಳೆ. ಈ ಹೇಳಿಕೆಯ ಮೇರೆಗೆ ಪೊಲೀಸರು ಎರಡು ಕಡೆಗಳಿಂದ ಎಲ್ಲಾ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ನೇತೃತ್ವದ ತಂಡ ಈ ಪ್ರಕರಣವನ್ನು ಬಗೆಹರಿಸಲು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು, ಮಗಳಿಗೆ ನೋಟಿಸ್ ಜಾರಿಗೊಳಿಸಿ ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿದೆ.
ಈ ಘಟನೆ ಮತ್ತೆ ಮನೆಯೊಳಗಿನ ವ್ಯಕ್ತಿಗಳ ಮೇಲೆಯೂ ಎಚ್ಚರಿಕೆ ವಹಿಸಬೇಕೆಂಬ ಸಂದೇಶವನ್ನು ನೀಡಿದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…