ಬೆಂಗಳೂರು: ಯಾತ್ರೆಗೆ ತೆರಳಿದ್ದ ಸಂದರ್ಭವನ್ನು ಉಪಯೋಗಿಸಿಕೊಂಡು, ಮನೆಗೆ ಬೀಗ ಹಾಕಿದ್ದೇ ಸುಲಭ ಅವಕಾಶವಾಯಿತು ಎಂಬಂತೆ ಮನೆಯಲ್ಲಿನ ಚಿನ್ನಾಭರಣಗಳನ್ನು ಕದ್ದಮೇಲಾದ್ದು ಯಾರಿಂದೋ ಅಲ್ಲ… ತನಿಖೆಯಲ್ಲಿ ದೂರುದಾರರ ಮಗಳೇ ಈ ಕೃತ್ಯ ಎಸಗಿರುವುದು ಬಹಿರಂಗವಾಗಿದೆ.
ಈ ಘಟನೆ ಮಾರತಹಳ್ಳಿಯ ಯಮಲೂರಿನಲ್ಲಿ ನಡೆದಿದ್ದು, ಸುಮಾರು 258 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿವೆ. ಅವುಗಳ ಮೌಲ್ಯ ಸುಮಾರು 21 ಲಕ್ಷ ರೂಪಾಯಿಯಷ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾತ್ರೆಯಿಂದ ಮನೆಗೆ ಹಿಂದಿರುಗಿದ ಕುಟುಂಬದವರು ಬೀಗ ಹಾಗೆ ಇದ್ದರೂ, ಮನೆಯೊಳಗೆ ಪ್ರವೇಶಿಸಿದಾಗ ಬೀರುವಿನಲ್ಲಿ ಇರಿಸಿದ್ದ ಆಭರಣಗಳು ಕಾಣೆಯಾಗಿರುವುದು ಗೊತ್ತಾಯಿತು. ತಕ್ಷಣ ಮಾರತಹಳ್ಳಿ ಪೊಲೀಸರಿಗೆ ದೂರು ನೀಡಲಾಯಿತು.
ಪೊಲೀಸರ ತನಿಖೆ ವೇಳೆ ದೂರುದಾರರು ತಮ್ಮ ಮಗಳು, ತಂಗಿ ಮತ್ತು ತಂಗಿಯ ಮಗನ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಮಗಳನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ, ಆಕೆ ಕೃತ್ಯವನ್ನೇ ಒಪ್ಪಿಕೊಂಡಿದ್ದಾಳೆ.
ವಿಚಾರಣೆಯಲ್ಲಿ ಆರೋಪಿತೆ 30 ಗ್ರಾಂ ಚಿನ್ನಾಭರಣವನ್ನು ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಅಡಮಾನವಿಟ್ಟು, ಉಳಿದ 228 ಗ್ರಾಂನ್ನು ತನ್ನ ಮನೆಯಲ್ಲಿ ಇಟ್ಟುಕೊಂಡಿರುವುದಾಗಿ ಮಾಹಿತಿ ನೀಡಿದ್ದಾಳೆ. ಈ ಹೇಳಿಕೆಯ ಮೇರೆಗೆ ಪೊಲೀಸರು ಎರಡು ಕಡೆಗಳಿಂದ ಎಲ್ಲಾ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ನೇತೃತ್ವದ ತಂಡ ಈ ಪ್ರಕರಣವನ್ನು ಬಗೆಹರಿಸಲು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು, ಮಗಳಿಗೆ ನೋಟಿಸ್ ಜಾರಿಗೊಳಿಸಿ ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿದೆ.
ಈ ಘಟನೆ ಮತ್ತೆ ಮನೆಯೊಳಗಿನ ವ್ಯಕ್ತಿಗಳ ಮೇಲೆಯೂ ಎಚ್ಚರಿಕೆ ವಹಿಸಬೇಕೆಂಬ ಸಂದೇಶವನ್ನು ನೀಡಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…