Latest

ಬೀಗ ಮುರಿಯದೇ ಚಿನ್ನ ಕಳವು: ಮಗಳು ಕೈ ಹಾಕಿದ ರಹಸ್ಯ ಬಯಲಾಗಿಸಿದ ಪೊಲೀಸರು”

ಬೆಂಗಳೂರು: ಯಾತ್ರೆಗೆ ತೆರಳಿದ್ದ ಸಂದರ್ಭವನ್ನು ಉಪಯೋಗಿಸಿಕೊಂಡು, ಮನೆಗೆ ಬೀಗ ಹಾಕಿದ್ದೇ ಸುಲಭ ಅವಕಾಶವಾಯಿತು ಎಂಬಂತೆ ಮನೆಯಲ್ಲಿನ ಚಿನ್ನಾಭರಣಗಳನ್ನು ಕದ್ದಮೇಲಾದ್ದು ಯಾರಿಂದೋ ಅಲ್ಲ… ತನಿಖೆಯಲ್ಲಿ ದೂರುದಾರರ ಮಗಳೇ ಈ ಕೃತ್ಯ ಎಸಗಿರುವುದು ಬಹಿರಂಗವಾಗಿದೆ.

ಈ ಘಟನೆ ಮಾರತಹಳ್ಳಿಯ ಯಮಲೂರಿನಲ್ಲಿ ನಡೆದಿದ್ದು, ಸುಮಾರು 258 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿವೆ. ಅವುಗಳ ಮೌಲ್ಯ ಸುಮಾರು 21 ಲಕ್ಷ ರೂಪಾಯಿಯಷ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾತ್ರೆಯಿಂದ ಮನೆಗೆ ಹಿಂದಿರುಗಿದ ಕುಟುಂಬದವರು ಬೀಗ ಹಾಗೆ ಇದ್ದರೂ, ಮನೆಯೊಳಗೆ ಪ್ರವೇಶಿಸಿದಾಗ ಬೀರುವಿನಲ್ಲಿ ಇರಿಸಿದ್ದ ಆಭರಣಗಳು ಕಾಣೆಯಾಗಿರುವುದು ಗೊತ್ತಾಯಿತು. ತಕ್ಷಣ ಮಾರತಹಳ್ಳಿ ಪೊಲೀಸರಿಗೆ ದೂರು ನೀಡಲಾಯಿತು.

ಪೊಲೀಸರ ತನಿಖೆ ವೇಳೆ ದೂರುದಾರರು ತಮ್ಮ ಮಗಳು, ತಂಗಿ ಮತ್ತು ತಂಗಿಯ ಮಗನ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಮಗಳನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ, ಆಕೆ ಕೃತ್ಯವನ್ನೇ ಒಪ್ಪಿಕೊಂಡಿದ್ದಾಳೆ.

ವಿಚಾರಣೆಯಲ್ಲಿ ಆರೋಪಿತೆ 30 ಗ್ರಾಂ ಚಿನ್ನಾಭರಣವನ್ನು ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಅಡಮಾನವಿಟ್ಟು, ಉಳಿದ 228 ಗ್ರಾಂನ್ನು ತನ್ನ ಮನೆಯಲ್ಲಿ ಇಟ್ಟುಕೊಂಡಿರುವುದಾಗಿ ಮಾಹಿತಿ ನೀಡಿದ್ದಾಳೆ. ಈ ಹೇಳಿಕೆಯ ಮೇರೆಗೆ ಪೊಲೀಸರು ಎರಡು ಕಡೆಗಳಿಂದ ಎಲ್ಲಾ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸ್ ಇನ್‌ಸ್ಪೆಕ್ಟರ್ ಅನಿಲ್ ಕುಮಾರ್ ನೇತೃತ್ವದ ತಂಡ ಈ ಪ್ರಕರಣವನ್ನು ಬಗೆಹರಿಸಲು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು, ಮಗಳಿಗೆ ನೋಟಿಸ್ ಜಾರಿಗೊಳಿಸಿ ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿದೆ.

ಈ ಘಟನೆ ಮತ್ತೆ ಮನೆಯೊಳಗಿನ ವ್ಯಕ್ತಿಗಳ ಮೇಲೆಯೂ ಎಚ್ಚರಿಕೆ ವಹಿಸಬೇಕೆಂಬ ಸಂದೇಶವನ್ನು ನೀಡಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago