ಬೆಂಗಳೂರು: ಯಾತ್ರೆಗೆ ತೆರಳಿದ್ದ ಸಂದರ್ಭವನ್ನು ಉಪಯೋಗಿಸಿಕೊಂಡು, ಮನೆಗೆ ಬೀಗ ಹಾಕಿದ್ದೇ ಸುಲಭ ಅವಕಾಶವಾಯಿತು ಎಂಬಂತೆ ಮನೆಯಲ್ಲಿನ ಚಿನ್ನಾಭರಣಗಳನ್ನು ಕದ್ದಮೇಲಾದ್ದು ಯಾರಿಂದೋ ಅಲ್ಲ… ತನಿಖೆಯಲ್ಲಿ ದೂರುದಾರರ ಮಗಳೇ ಈ ಕೃತ್ಯ ಎಸಗಿರುವುದು ಬಹಿರಂಗವಾಗಿದೆ.
ಈ ಘಟನೆ ಮಾರತಹಳ್ಳಿಯ ಯಮಲೂರಿನಲ್ಲಿ ನಡೆದಿದ್ದು, ಸುಮಾರು 258 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿವೆ. ಅವುಗಳ ಮೌಲ್ಯ ಸುಮಾರು 21 ಲಕ್ಷ ರೂಪಾಯಿಯಷ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾತ್ರೆಯಿಂದ ಮನೆಗೆ ಹಿಂದಿರುಗಿದ ಕುಟುಂಬದವರು ಬೀಗ ಹಾಗೆ ಇದ್ದರೂ, ಮನೆಯೊಳಗೆ ಪ್ರವೇಶಿಸಿದಾಗ ಬೀರುವಿನಲ್ಲಿ ಇರಿಸಿದ್ದ ಆಭರಣಗಳು ಕಾಣೆಯಾಗಿರುವುದು ಗೊತ್ತಾಯಿತು. ತಕ್ಷಣ ಮಾರತಹಳ್ಳಿ ಪೊಲೀಸರಿಗೆ ದೂರು ನೀಡಲಾಯಿತು.
ಪೊಲೀಸರ ತನಿಖೆ ವೇಳೆ ದೂರುದಾರರು ತಮ್ಮ ಮಗಳು, ತಂಗಿ ಮತ್ತು ತಂಗಿಯ ಮಗನ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಮಗಳನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ, ಆಕೆ ಕೃತ್ಯವನ್ನೇ ಒಪ್ಪಿಕೊಂಡಿದ್ದಾಳೆ.
ವಿಚಾರಣೆಯಲ್ಲಿ ಆರೋಪಿತೆ 30 ಗ್ರಾಂ ಚಿನ್ನಾಭರಣವನ್ನು ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಅಡಮಾನವಿಟ್ಟು, ಉಳಿದ 228 ಗ್ರಾಂನ್ನು ತನ್ನ ಮನೆಯಲ್ಲಿ ಇಟ್ಟುಕೊಂಡಿರುವುದಾಗಿ ಮಾಹಿತಿ ನೀಡಿದ್ದಾಳೆ. ಈ ಹೇಳಿಕೆಯ ಮೇರೆಗೆ ಪೊಲೀಸರು ಎರಡು ಕಡೆಗಳಿಂದ ಎಲ್ಲಾ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ನೇತೃತ್ವದ ತಂಡ ಈ ಪ್ರಕರಣವನ್ನು ಬಗೆಹರಿಸಲು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು, ಮಗಳಿಗೆ ನೋಟಿಸ್ ಜಾರಿಗೊಳಿಸಿ ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿದೆ.
ಈ ಘಟನೆ ಮತ್ತೆ ಮನೆಯೊಳಗಿನ ವ್ಯಕ್ತಿಗಳ ಮೇಲೆಯೂ ಎಚ್ಚರಿಕೆ ವಹಿಸಬೇಕೆಂಬ ಸಂದೇಶವನ್ನು ನೀಡಿದೆ.
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…