Latest

`BPL’ ಕಾರ್ಡ್ ಹೊಂದಿರುವ `SC-ST’ ಸಮುದಾಯಕ್ಕೆ ಗುಡ್ ನ್ಯೂಸ್

ವಿಜಯನಗರ : ಜನಪರ ಯೋಜನೆ ಆಡಿಯಲ್ಲಿ ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದ ಗೃಹ ವಿದ್ಯುತ್ ಬಳಕೆದಾರರಿಗೆ (ಭಾಗ್ಯ ಜ್ಯೋತಿ, ಕುಟೀರ, ಜ್ಯೋತಿ ಒಳಗೊಂಡಂತೆ) ಮಾಸಿಕ 75 ಯುನಿಟ್‍ಗಳ ಉಚಿತ ವಿದ್ಯುತ್ ಒದಗಿಸುವ ಕಾರ್ಯಕ್ರಮವನ್ನು ‘ಅಮೃತ ಜ್ಯೋತಿ’ ಕಾರ್ಯಕ್ರಮ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.

ಹೊಸಪೇಟೆ ನಗರದ ಉಪ-ವಿಭಾಗ-1ರ ವ್ಯಾಪ್ತಿಯಲ್ಲಿ ಬರುವಂತಹ ಬಸವೇಶ್ವರ ಬಡಾವಣೆ, ಇಂಡಸ್ಟ್ರೀಯಲ್ ಏರಿಯಾ, ಅಮರಾವತಿ, ಸಾಯಿರಾಂ ಬಡಾವಣೆ, ಮಲ್ಲಿನಾಥ್ ಲೇಔಟ್, ಚಿತ್ತವಾಡಿಗಿ, ಕಲ್ಯಾಣನಗರ, ಪಟೇಲ್ ನಗರ, ಅನ್ನಪೂರ್ಣ ಬಡಾವಣೆ, ಕಾಲೇಜ್ ರಸ್ತೆ, ಇಂದಿರಾ ನಗರ, ಚಾಪಲ್ ಗಟ್ಟ, ಸ್ಟೇಷನ್ ರೋಡ್ ಏರಿಯಾ, ಭಾರತಿ ನಗರ, ಪಟೇಲ್ ನಗರ ರೈಲ್ವೆ ಸ್ಟೇಷನ್, ಶ್ರೀರಾಮ್ ಪಾರ್ಕ್, ರಾಯಲ್ ಆರ್‍ಕೇಟ್, ಚಲುವಾದಿಕೇರಿ, ಜಬ್ಬಲ್ ಸರ್ಕಲ್, ಎನ್.ಸಿ. ಕಾಲೋನಿ, ಚಪ್ಪರದಹಳ್ಳಿ, ಎಸ್.ಆರ್.ನಗರ, ಎಂ.ಜೆ.ನಗರ, ಗಾಂಧಿ ಕಾಲೋನಿ, ಬಿಟಿಆರ್ ನಗರ, ವಿದ್ಯಾ ನಗರ್, ಭಗತ್‍ಸಿಂಗ್ ನಗರ, ಸಂಡೂರು ರಸ್ತೆ, ವಿದ್ಯಾರಣ್ಯ ನಗರ, ವಿವೇಕಾನಂದ ನಗರ, ಜೋಳದರಾಶಿ ಗುಡ್ಡ, ಸಾಯಿಬಾಬಾ ಸರ್ಕಲ್, ಗೋಕುಲ ನಗರ, ಸೋನಿಯಾ ನಗರ, ಇಂದಿರಾ ನಗರ, ವಂಕಾಯ ಕ್ಯಾಂಪ್, ಜನತಾ ಕಾಲೋನಿ, ರಾಯರಕೆರೆ, ನಿಶಾನಿ ಕ್ಯಾಂಪ್, ಡ್ರೆಸೆಸ್ ಕ್ಯಾಂಪ್, ಪಿಎಲ್ಸಿ ಏರಿಯಾ, ಟಿಬಿ ಡ್ಯಾಂ ಇತ್ಯಾದಿ ಏರಿಯಾ ಗ್ರಾಹಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ‘sevasindhu.karnataka.govt.in’ ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

8 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

8 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

8 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

8 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

9 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago