ವಿಜಯನಗರ : ಜನಪರ ಯೋಜನೆ ಆಡಿಯಲ್ಲಿ ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದ ಗೃಹ ವಿದ್ಯುತ್ ಬಳಕೆದಾರರಿಗೆ (ಭಾಗ್ಯ ಜ್ಯೋತಿ, ಕುಟೀರ, ಜ್ಯೋತಿ ಒಳಗೊಂಡಂತೆ) ಮಾಸಿಕ 75 ಯುನಿಟ್ಗಳ ಉಚಿತ ವಿದ್ಯುತ್ ಒದಗಿಸುವ ಕಾರ್ಯಕ್ರಮವನ್ನು ‘ಅಮೃತ ಜ್ಯೋತಿ’ ಕಾರ್ಯಕ್ರಮ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.
ಹೊಸಪೇಟೆ ನಗರದ ಉಪ-ವಿಭಾಗ-1ರ ವ್ಯಾಪ್ತಿಯಲ್ಲಿ ಬರುವಂತಹ ಬಸವೇಶ್ವರ ಬಡಾವಣೆ, ಇಂಡಸ್ಟ್ರೀಯಲ್ ಏರಿಯಾ, ಅಮರಾವತಿ, ಸಾಯಿರಾಂ ಬಡಾವಣೆ, ಮಲ್ಲಿನಾಥ್ ಲೇಔಟ್, ಚಿತ್ತವಾಡಿಗಿ, ಕಲ್ಯಾಣನಗರ, ಪಟೇಲ್ ನಗರ, ಅನ್ನಪೂರ್ಣ ಬಡಾವಣೆ, ಕಾಲೇಜ್ ರಸ್ತೆ, ಇಂದಿರಾ ನಗರ, ಚಾಪಲ್ ಗಟ್ಟ, ಸ್ಟೇಷನ್ ರೋಡ್ ಏರಿಯಾ, ಭಾರತಿ ನಗರ, ಪಟೇಲ್ ನಗರ ರೈಲ್ವೆ ಸ್ಟೇಷನ್, ಶ್ರೀರಾಮ್ ಪಾರ್ಕ್, ರಾಯಲ್ ಆರ್ಕೇಟ್, ಚಲುವಾದಿಕೇರಿ, ಜಬ್ಬಲ್ ಸರ್ಕಲ್, ಎನ್.ಸಿ. ಕಾಲೋನಿ, ಚಪ್ಪರದಹಳ್ಳಿ, ಎಸ್.ಆರ್.ನಗರ, ಎಂ.ಜೆ.ನಗರ, ಗಾಂಧಿ ಕಾಲೋನಿ, ಬಿಟಿಆರ್ ನಗರ, ವಿದ್ಯಾ ನಗರ್, ಭಗತ್ಸಿಂಗ್ ನಗರ, ಸಂಡೂರು ರಸ್ತೆ, ವಿದ್ಯಾರಣ್ಯ ನಗರ, ವಿವೇಕಾನಂದ ನಗರ, ಜೋಳದರಾಶಿ ಗುಡ್ಡ, ಸಾಯಿಬಾಬಾ ಸರ್ಕಲ್, ಗೋಕುಲ ನಗರ, ಸೋನಿಯಾ ನಗರ, ಇಂದಿರಾ ನಗರ, ವಂಕಾಯ ಕ್ಯಾಂಪ್, ಜನತಾ ಕಾಲೋನಿ, ರಾಯರಕೆರೆ, ನಿಶಾನಿ ಕ್ಯಾಂಪ್, ಡ್ರೆಸೆಸ್ ಕ್ಯಾಂಪ್, ಪಿಎಲ್ಸಿ ಏರಿಯಾ, ಟಿಬಿ ಡ್ಯಾಂ ಇತ್ಯಾದಿ ಏರಿಯಾ ಗ್ರಾಹಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ‘sevasindhu.karnataka.govt.in’ ವೆಬ್ಸೈಟ್ನಲ್ಲಿ ಸಲ್ಲಿಸಬಹುದು.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…