Latest

ಎಸ್‌ಎಸ್‌ಎಲ್ಸಿ ಅಥವಾ ಐಟಿಐ ಮಾಡಿದವರಿಗೆ ಸಿಹಿ ಸುದ್ದಿ: ಭಾರತೀಯ ರೈಲ್ವೆಯಲ್ಲಿ ಸಾವಿರಾರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಸರ್ಕಾರಿ ಉದ್ಯೋಗ ಪಡೆಯುವುದು ಬಹುಮಾನದಂತಹ ಕನಸು. ಹಲವರು ವರ್ಷಗಟ್ಟಲೆ ಪರೀಕ್ಷೆಗಳಿಗೆ ತಯಾರಿ ಮಾಡುತ್ತಾ ತಮ್ಮ ಕನಸನ್ನು ನನಸುಮಾಡಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ವಿಶೇಷವೆಂದರೆ, ಹೆಚ್ಚಿನ ವಿದ್ಯಾಭ್ಯಾಸ ಮಾಡಲಾಗದೆ ಉಳಿದವರು – ಮುಖ್ಯವಾಗಿ ಎಸ್‌ಎಸ್‌ಎಲ್ಸಿ ಪಾಸಾದವರು – ಈಗ ಭಾರತೀಯ ರೈಲ್ವೆ ಇಲಾಖೆಯಲ್ಲೊಂದು ಉತ್ತಮ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಈ ಬಾರಿ ಎಷ್ಟು ಹುದ್ದೆಗಳು?

ಭಾರತೀಯ ರೈಲ್ವೆ ಇಲಾಖೆ ಒಟ್ಟು 6,238 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳು ಟೆಕ್ನಿಷಿಯನ್ ಗ್ರೇಡ್-1 ಹಾಗೂ ಟೆಕ್ನಿಷಿಯನ್ ಗ್ರೇಡ್-3 ವಿಭಾಗಗಳಡಿಯಲ್ಲಿ ಬಂದುಬರುತ್ತವೆ.

ಹುದ್ದೆಗಳ ವಿವರ ಮತ್ತು ಅರ್ಹತೆ:

🔹 ಟೆಕ್ನಿಷಿಯನ್ ಗ್ರೇಡ್–1

ಒಟ್ಟು ಹುದ್ದೆಗಳು: 183

ಅರ್ಹತೆ: B.Sc., B.Tech, ಡಿಪ್ಲೊಮಾ ಅಥವಾ ಕಂಪ್ಯೂಟರ್ ಸೈನ್ಸ್‌ ವಿದ್ಯಾಭ್ಯಾಸ ಪೂರೈಸಿರಬೇಕು

ವೇತನ: ₹29,200/-

ವಯೋಮಿತಿ: 18 ರಿಂದ 33 ವರ್ಷ

🔹 ಟೆಕ್ನಿಷಿಯನ್ ಗ್ರೇಡ್–3

ಒಟ್ಟು ಹುದ್ದೆಗಳು: 6,055

ಅರ್ಹತೆ: ಕನಿಷ್ಟ ಎಸ್‌ಎಸ್‌ಎಲ್ಸಿ ಪಾಸಾಗಿದ್ದು, ಸಂಬಂಧಿತ ಕ್ಷೇತ್ರದಲ್ಲಿ ಐಟಿಐ ಮಾಡಿರಬೇಕು

ವೇತನ: ₹19,900/-

ವಯೋಮಿತಿ: 18 ರಿಂದ 30 ವರ್ಷ

ಅರ್ಜಿ ಸಲ್ಲಿಕೆಗೆ ಪ್ರಮುಖ ಮಾಹಿತಿ:

ಅರ್ಜಿ ಸಲ್ಲಿಕೆಗೆ ಆನ್‌ಲೈನ್ ವಿಧಾನವನ್ನು ಅನುಸರಿಸಬೇಕು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಅಧಿಕೃತ ಲಿಂಕ್ – ಶೀಘ್ರದಲ್ಲೇ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ
ಅಧಿಕೃತ ಅಧಿಸೂಚನೆಯು ಹೊರಬೀಳುತ್ತಿದ್ದಂತೆ, ಅರ್ಹ ಅಭ್ಯರ್ಥಿಗಳು ಸಂಪೂರ್ಣ ಮಾಹಿತಿ ಓದಿ ಅರ್ಜಿ ಸಲ್ಲಿಸಬೇಕು.

 

 

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago