Latest

ಎಸ್‌ಎಸ್‌ಎಲ್ಸಿ ಅಥವಾ ಐಟಿಐ ಮಾಡಿದವರಿಗೆ ಸಿಹಿ ಸುದ್ದಿ: ಭಾರತೀಯ ರೈಲ್ವೆಯಲ್ಲಿ ಸಾವಿರಾರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಸರ್ಕಾರಿ ಉದ್ಯೋಗ ಪಡೆಯುವುದು ಬಹುಮಾನದಂತಹ ಕನಸು. ಹಲವರು ವರ್ಷಗಟ್ಟಲೆ ಪರೀಕ್ಷೆಗಳಿಗೆ ತಯಾರಿ ಮಾಡುತ್ತಾ ತಮ್ಮ ಕನಸನ್ನು ನನಸುಮಾಡಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ವಿಶೇಷವೆಂದರೆ, ಹೆಚ್ಚಿನ ವಿದ್ಯಾಭ್ಯಾಸ ಮಾಡಲಾಗದೆ ಉಳಿದವರು – ಮುಖ್ಯವಾಗಿ ಎಸ್‌ಎಸ್‌ಎಲ್ಸಿ ಪಾಸಾದವರು – ಈಗ ಭಾರತೀಯ ರೈಲ್ವೆ ಇಲಾಖೆಯಲ್ಲೊಂದು ಉತ್ತಮ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಈ ಬಾರಿ ಎಷ್ಟು ಹುದ್ದೆಗಳು?

ಭಾರತೀಯ ರೈಲ್ವೆ ಇಲಾಖೆ ಒಟ್ಟು 6,238 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳು ಟೆಕ್ನಿಷಿಯನ್ ಗ್ರೇಡ್-1 ಹಾಗೂ ಟೆಕ್ನಿಷಿಯನ್ ಗ್ರೇಡ್-3 ವಿಭಾಗಗಳಡಿಯಲ್ಲಿ ಬಂದುಬರುತ್ತವೆ.

ಹುದ್ದೆಗಳ ವಿವರ ಮತ್ತು ಅರ್ಹತೆ:

🔹 ಟೆಕ್ನಿಷಿಯನ್ ಗ್ರೇಡ್–1

ಒಟ್ಟು ಹುದ್ದೆಗಳು: 183

ಅರ್ಹತೆ: B.Sc., B.Tech, ಡಿಪ್ಲೊಮಾ ಅಥವಾ ಕಂಪ್ಯೂಟರ್ ಸೈನ್ಸ್‌ ವಿದ್ಯಾಭ್ಯಾಸ ಪೂರೈಸಿರಬೇಕು

ವೇತನ: ₹29,200/-

ವಯೋಮಿತಿ: 18 ರಿಂದ 33 ವರ್ಷ

🔹 ಟೆಕ್ನಿಷಿಯನ್ ಗ್ರೇಡ್–3

ಒಟ್ಟು ಹುದ್ದೆಗಳು: 6,055

ಅರ್ಹತೆ: ಕನಿಷ್ಟ ಎಸ್‌ಎಸ್‌ಎಲ್ಸಿ ಪಾಸಾಗಿದ್ದು, ಸಂಬಂಧಿತ ಕ್ಷೇತ್ರದಲ್ಲಿ ಐಟಿಐ ಮಾಡಿರಬೇಕು

ವೇತನ: ₹19,900/-

ವಯೋಮಿತಿ: 18 ರಿಂದ 30 ವರ್ಷ

ಅರ್ಜಿ ಸಲ್ಲಿಕೆಗೆ ಪ್ರಮುಖ ಮಾಹಿತಿ:

ಅರ್ಜಿ ಸಲ್ಲಿಕೆಗೆ ಆನ್‌ಲೈನ್ ವಿಧಾನವನ್ನು ಅನುಸರಿಸಬೇಕು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಅಧಿಕೃತ ಲಿಂಕ್ – ಶೀಘ್ರದಲ್ಲೇ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ
ಅಧಿಕೃತ ಅಧಿಸೂಚನೆಯು ಹೊರಬೀಳುತ್ತಿದ್ದಂತೆ, ಅರ್ಹ ಅಭ್ಯರ್ಥಿಗಳು ಸಂಪೂರ್ಣ ಮಾಹಿತಿ ಓದಿ ಅರ್ಜಿ ಸಲ್ಲಿಸಬೇಕು.

 

 

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

14 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

20 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

20 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago