Latest

ಕಾರ್ಮಿಕರಿಗೆ ಸರ್ಕಾರದಿಂದ ಗುಡ್​ನ್ಯೂಸ್

ಕರ್ನಾಟಕದಲ್ಲಿ ಕನಿಷ್ಠ ವೇತನ‌ ಪ್ರಕಟ: ಕರ್ನಾಟಕ ರಾಜ್ಯ ಸರ್ಕಾರ ಕನಿಷ್ಠ ವೇತನ ಪ್ರಕಟಿಸಿದೆ. ಕೊರೋನಾ ಕಾಟದಿಂದಾಗಿ ಕಳೆದ 2 ವರ್ಷಗಳಿಂದ ನಿಂತುಹೋಗಿದ್ದ ಕನಿಷ್ಠ ವೇತನವನ್ನು ಸರ್ಕಾರ ಜಾರಿಗೆ ಮುಂದಾಗಿದೆ. ಈ ಮೂಲಕ ಕಾರ್ಮಿಕರಿಗೆ ಸರ್ಕಾರ ಗುಡ್​ನ್ಯೂಸ್ ಕೊಟ್ಟಿದೆ.
ಕೊರೋನಾದಿಂದ ಕನಿಷ್ಠ ವೇತನ ಪರಿಷ್ಕೃರಣೆ ಆಗಿರಲಿಲ್ಲ. ಈಗ ಒಂದಷ್ಟು ವಿಭಾಗಕ್ಕೆ ಕನಿಷ್ಠ ವೇತನ ಜಾರಿಯಾಗಿದ್ದು ಕಾರ್ಮಿಕರಿಗೆ ಹಬ್ಬಗಳ ಮಾಸದಂದೇ ಗಿಫ್ಟ್ ಸಿಕ್ಕಂತಾಗಿದೆ. ಹೊಸ ವೇತನವು ಜುಲೈ 28ರಿಂದ ಅಧಿಸೂಚನೆ ಪ್ರಕಟವಾದಾಗಿನಿಂದ ಜಾರಿಗೆ ಬಂದಿದೆ. ಕಾರ್ಮಿಕರ ವೇತನ, ಪಿಎಫ್​ಗಾಗಿ ಕಡಿತವಾಗುವ ಹಣ ಹಾಗೂ ಕೆಲಸದ ಸಮಯ ಬದಲಾಗುತ್ತೆ ಅನ್ನೋ ಚರ್ಚೆ ನಡುವೆಯೇ ಕನಿಷ್ಠ ವೇತನ ಪ್ರಕಟವಾಗಿದೆ.

ಯಾರಿಗೆಷ್ಟು ಕನಿಷ್ಠ ವೇತನ..?
ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಗುಡ್​ನ್ಯೂಸ್ ಸಿಕ್ಕಂತಾಗಿದೆ. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ, ಕಾರ್ಮಿಕರಿಗೆ ಪರಿಷ್ಕೃತ ಕನಿಷ್ಠ ವೇತನ ಸಿಗಲಿದೆ. ಈ ಬಗ್ಗೆ ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದೆ. ಬಿಬಿಎಂಪಿ ಸಿಬ್ಬಂದಿಗೂ ಕನಿಷ್ಠ ವೇತನ ಜಾರಿ ನೆಮ್ಮದಿ ತರಿಸಿದೆ. ಸರ್ಕಾರ ಕೊಡುವ ಕನಿಷ್ಠ ವೇತನ ಪ್ಲಾನ್​ನಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯೂ ಸೇರಿದೆ.
ಕನಿಷ್ಠ ವೇತನ ಜಾರಿ
ಕನಿಷ್ಠ ವೇತನದಿಂದ BBMP ಮತ್ತು ಇತರ ನಗರ ಸ್ಥಳೀಯ ಸಂಸ್ಥೆಗಳ ಕಾರ್ಮಿಕರು ಮತ್ತು ಕ್ಲರ್ಕ್‌ಗಳು, ಕಂಪ್ಯೂಟರ್/ಡಾಟಾ ಎಂಟ್ರಿ ಆಪರೇಟರ್‌ಗಳು, ಲ್ಯಾಬ್ ತಂತ್ರಜ್ಞರು ಮತ್ತು ಸಹಾಯಕ ಗ್ರಂಥಪಾಲಕರು ಅಂದಾಜು 18,000 ರೂಪಾಯಿಯಷ್ಟು ಸಂಬಳ ಪಡೆಯಲಿದ್ದಾರೆ.

ಯಾರ ಸಂಬಳ ಎಷ್ಟಾಗಿದೆ..?
ಕ್ಲರ್ಕ್​-16,564 ರೂಪಾಯಿ
ಡ್ರೈವರ್ ಕಮ್ ನಿರ್ವಾಹಕರು- 15,777 ರೂಪಾಯಿ.
ಚಾಲಕರು- 15,112 ರೂಪಾಯಿ.
ಕ್ಲೀನರ್- 13,974 ರೂಪಾಯಿ.
ಮೆಕ್ಯಾನಿಕ್‌ಗಳು- 14,657 ರೂಪಾಯಿ.
ಪ್ಲಂಬರ್‌ಗಳು- 14,657 ರೂಪಾಯಿ.
ವಾಟರ್‌ಮೆನ್​ಗಳು- 14,657 ರೂಪಾಯಿ.

ಇದಿಷ್ಟೇ ಅಲ್ಲದೇ ವಿವಿಧ ಸಂಸ್ಥೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೂ ಗುಡ್​ನ್ಯೂಸ್ ಸಿಕ್ಕಿದೆ. ಅವರ ವೇತನವೂ 13 ಸಾವಿರ ರೂಪಾಯಿಯಿಂದ 17 ಸಾವಿರ ರೂಪಾಯಿವರೆಗೆ ಏರಿಕೆಯಾದಂತಾಗಿದೆ.

ವಿವರ ಇಲ್ಲಿದೆ
ಅಟೆಂಡರ್- 13,974 ರೂಪಾಯಿ.
ತೋಟದ ಕೆಲಸಗಾರರು- 13,974 ರೂಪಾಯಿ.
ಸೆಕ್ಯೂರಿಟಿ ಗಾರ್ಡ್​- 13,974 ರೂಪಾಯಿ.
ಬೀದಿ ಗುಡಿಸುವವರು-17,306 ರೂಪಾಯಿ.
ತ್ಯಾಜ್ಯ ಕೆಲಸಗಾರರು- 17,306 ರೂಪಾಯಿ.
ಹೊಸ ವೇತನವು ಜುಲೈ 28ರಿಂದ ಅಧಿಸೂಚನೆಯಾದಾಗಿನಿಂದ ಜಾರಿಗೆ ಬಂದಿದೆ. ಆದಾಯ ಕುಂಠಿತದಿಂದ ಕನಿಷ್ಠ ವೇತನ ಜಾರಿಯಾಗಿರಲಿಲ್ಲ
ಕೇಂದ್ರ ಸರ್ಕಾರ ಕನಿಷ್ಠ ವೇತನ ದರವನ್ನು ಅಧಿನಿಯಮ 1948ರ ಅಡಿಯಲ್ಲಿ 2010ರಲ್ಲಿ ಜಾರಿಮಾಡಿತು. ಅಕ್ಟೋಬರ್ 1ಕ್ಕೆ ಇದನ್ನು ಪರಿಷ್ಕೃರಿಸಲಾಗಿತ್ತು. ಆಯಾ ರಾಜ್ಯ ಸರ್ಕಾರಗಳು ಆಯಾ ಕಾಲಕ್ಕೆ ತಕ್ಕಂತೆ, ವರ್ಷಕ್ಕೊಮ್ಮೆ ದರವನ್ನು ಪರಿಷ್ಕರಣೆ ಮಾಡುತ್ತದೆ. ಆದರೆ ಕೊರೋನಾದಿಂದಾಗಿ, ಆದಾಯ ಕುಂಠಿತವಾಗಿ ಕನಿಷ್ಠ ವೇತನ ಜಾರಿಯಾಗಿರಲಿಲ್ಲ. ಈಗ ಸರ್ಕಾರ ಪ್ರಕಟ ಮಾಡಿದೆ.
ಮುಖ್ಯವಾಗಿ ಕನಿಷ್ಠ ವೇತನ ದರ, ಕೃಷಿ ಸೇರಿದಂತೆ ಅನುಸೂಚಿತ ಉದ್ಯೋಗಗಳಿಗೆ ನಿಗದಿಪಡಿಸಿದ ಸಂಘಟಿತ ಮತ್ತು ಅಸಂಘಟಿತ ವಲಯಗಳ ಕ್ಷೇತ್ರಕ್ಕೂ ಅನ್ವಯವಾಗುತ್ತದೆ.

ವರದಿ: ನಾಗರಾಜ್ ಗೊಬ್ಬುರ್

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

2 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

3 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

22 hours ago