Latest

ಕಾರ್ಮಿಕರಿಗೆ ಸರ್ಕಾರದಿಂದ ಗುಡ್​ನ್ಯೂಸ್

ಕರ್ನಾಟಕದಲ್ಲಿ ಕನಿಷ್ಠ ವೇತನ‌ ಪ್ರಕಟ: ಕರ್ನಾಟಕ ರಾಜ್ಯ ಸರ್ಕಾರ ಕನಿಷ್ಠ ವೇತನ ಪ್ರಕಟಿಸಿದೆ. ಕೊರೋನಾ ಕಾಟದಿಂದಾಗಿ ಕಳೆದ 2 ವರ್ಷಗಳಿಂದ ನಿಂತುಹೋಗಿದ್ದ ಕನಿಷ್ಠ ವೇತನವನ್ನು ಸರ್ಕಾರ ಜಾರಿಗೆ ಮುಂದಾಗಿದೆ. ಈ ಮೂಲಕ ಕಾರ್ಮಿಕರಿಗೆ ಸರ್ಕಾರ ಗುಡ್​ನ್ಯೂಸ್ ಕೊಟ್ಟಿದೆ.
ಕೊರೋನಾದಿಂದ ಕನಿಷ್ಠ ವೇತನ ಪರಿಷ್ಕೃರಣೆ ಆಗಿರಲಿಲ್ಲ. ಈಗ ಒಂದಷ್ಟು ವಿಭಾಗಕ್ಕೆ ಕನಿಷ್ಠ ವೇತನ ಜಾರಿಯಾಗಿದ್ದು ಕಾರ್ಮಿಕರಿಗೆ ಹಬ್ಬಗಳ ಮಾಸದಂದೇ ಗಿಫ್ಟ್ ಸಿಕ್ಕಂತಾಗಿದೆ. ಹೊಸ ವೇತನವು ಜುಲೈ 28ರಿಂದ ಅಧಿಸೂಚನೆ ಪ್ರಕಟವಾದಾಗಿನಿಂದ ಜಾರಿಗೆ ಬಂದಿದೆ. ಕಾರ್ಮಿಕರ ವೇತನ, ಪಿಎಫ್​ಗಾಗಿ ಕಡಿತವಾಗುವ ಹಣ ಹಾಗೂ ಕೆಲಸದ ಸಮಯ ಬದಲಾಗುತ್ತೆ ಅನ್ನೋ ಚರ್ಚೆ ನಡುವೆಯೇ ಕನಿಷ್ಠ ವೇತನ ಪ್ರಕಟವಾಗಿದೆ.

ಯಾರಿಗೆಷ್ಟು ಕನಿಷ್ಠ ವೇತನ..?
ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಗುಡ್​ನ್ಯೂಸ್ ಸಿಕ್ಕಂತಾಗಿದೆ. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ, ಕಾರ್ಮಿಕರಿಗೆ ಪರಿಷ್ಕೃತ ಕನಿಷ್ಠ ವೇತನ ಸಿಗಲಿದೆ. ಈ ಬಗ್ಗೆ ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದೆ. ಬಿಬಿಎಂಪಿ ಸಿಬ್ಬಂದಿಗೂ ಕನಿಷ್ಠ ವೇತನ ಜಾರಿ ನೆಮ್ಮದಿ ತರಿಸಿದೆ. ಸರ್ಕಾರ ಕೊಡುವ ಕನಿಷ್ಠ ವೇತನ ಪ್ಲಾನ್​ನಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯೂ ಸೇರಿದೆ.
ಕನಿಷ್ಠ ವೇತನ ಜಾರಿ
ಕನಿಷ್ಠ ವೇತನದಿಂದ BBMP ಮತ್ತು ಇತರ ನಗರ ಸ್ಥಳೀಯ ಸಂಸ್ಥೆಗಳ ಕಾರ್ಮಿಕರು ಮತ್ತು ಕ್ಲರ್ಕ್‌ಗಳು, ಕಂಪ್ಯೂಟರ್/ಡಾಟಾ ಎಂಟ್ರಿ ಆಪರೇಟರ್‌ಗಳು, ಲ್ಯಾಬ್ ತಂತ್ರಜ್ಞರು ಮತ್ತು ಸಹಾಯಕ ಗ್ರಂಥಪಾಲಕರು ಅಂದಾಜು 18,000 ರೂಪಾಯಿಯಷ್ಟು ಸಂಬಳ ಪಡೆಯಲಿದ್ದಾರೆ.

ಯಾರ ಸಂಬಳ ಎಷ್ಟಾಗಿದೆ..?
ಕ್ಲರ್ಕ್​-16,564 ರೂಪಾಯಿ
ಡ್ರೈವರ್ ಕಮ್ ನಿರ್ವಾಹಕರು- 15,777 ರೂಪಾಯಿ.
ಚಾಲಕರು- 15,112 ರೂಪಾಯಿ.
ಕ್ಲೀನರ್- 13,974 ರೂಪಾಯಿ.
ಮೆಕ್ಯಾನಿಕ್‌ಗಳು- 14,657 ರೂಪಾಯಿ.
ಪ್ಲಂಬರ್‌ಗಳು- 14,657 ರೂಪಾಯಿ.
ವಾಟರ್‌ಮೆನ್​ಗಳು- 14,657 ರೂಪಾಯಿ.

ಇದಿಷ್ಟೇ ಅಲ್ಲದೇ ವಿವಿಧ ಸಂಸ್ಥೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೂ ಗುಡ್​ನ್ಯೂಸ್ ಸಿಕ್ಕಿದೆ. ಅವರ ವೇತನವೂ 13 ಸಾವಿರ ರೂಪಾಯಿಯಿಂದ 17 ಸಾವಿರ ರೂಪಾಯಿವರೆಗೆ ಏರಿಕೆಯಾದಂತಾಗಿದೆ.

ವಿವರ ಇಲ್ಲಿದೆ
ಅಟೆಂಡರ್- 13,974 ರೂಪಾಯಿ.
ತೋಟದ ಕೆಲಸಗಾರರು- 13,974 ರೂಪಾಯಿ.
ಸೆಕ್ಯೂರಿಟಿ ಗಾರ್ಡ್​- 13,974 ರೂಪಾಯಿ.
ಬೀದಿ ಗುಡಿಸುವವರು-17,306 ರೂಪಾಯಿ.
ತ್ಯಾಜ್ಯ ಕೆಲಸಗಾರರು- 17,306 ರೂಪಾಯಿ.
ಹೊಸ ವೇತನವು ಜುಲೈ 28ರಿಂದ ಅಧಿಸೂಚನೆಯಾದಾಗಿನಿಂದ ಜಾರಿಗೆ ಬಂದಿದೆ. ಆದಾಯ ಕುಂಠಿತದಿಂದ ಕನಿಷ್ಠ ವೇತನ ಜಾರಿಯಾಗಿರಲಿಲ್ಲ
ಕೇಂದ್ರ ಸರ್ಕಾರ ಕನಿಷ್ಠ ವೇತನ ದರವನ್ನು ಅಧಿನಿಯಮ 1948ರ ಅಡಿಯಲ್ಲಿ 2010ರಲ್ಲಿ ಜಾರಿಮಾಡಿತು. ಅಕ್ಟೋಬರ್ 1ಕ್ಕೆ ಇದನ್ನು ಪರಿಷ್ಕೃರಿಸಲಾಗಿತ್ತು. ಆಯಾ ರಾಜ್ಯ ಸರ್ಕಾರಗಳು ಆಯಾ ಕಾಲಕ್ಕೆ ತಕ್ಕಂತೆ, ವರ್ಷಕ್ಕೊಮ್ಮೆ ದರವನ್ನು ಪರಿಷ್ಕರಣೆ ಮಾಡುತ್ತದೆ. ಆದರೆ ಕೊರೋನಾದಿಂದಾಗಿ, ಆದಾಯ ಕುಂಠಿತವಾಗಿ ಕನಿಷ್ಠ ವೇತನ ಜಾರಿಯಾಗಿರಲಿಲ್ಲ. ಈಗ ಸರ್ಕಾರ ಪ್ರಕಟ ಮಾಡಿದೆ.
ಮುಖ್ಯವಾಗಿ ಕನಿಷ್ಠ ವೇತನ ದರ, ಕೃಷಿ ಸೇರಿದಂತೆ ಅನುಸೂಚಿತ ಉದ್ಯೋಗಗಳಿಗೆ ನಿಗದಿಪಡಿಸಿದ ಸಂಘಟಿತ ಮತ್ತು ಅಸಂಘಟಿತ ವಲಯಗಳ ಕ್ಷೇತ್ರಕ್ಕೂ ಅನ್ವಯವಾಗುತ್ತದೆ.

ವರದಿ: ನಾಗರಾಜ್ ಗೊಬ್ಬುರ್

ಭ್ರಷ್ಟರ ಬೇಟೆ

Recent Posts

ಲಿಂಗಸಗೂರು ತಾಲೂಕಿನಲ್ಲಿ ಕಳ್ಳಭಟ್ಟಿ ದಂಧೆ ವಿರುದ್ಧ ಅಬಕಾರಿ ದಾಳಿ: 4 ಲೀಟರ್ ಸರಾಯಿ ವಶ, ಮೂವರು ಬಂಧನ

ಲಿಂಗಸಗೂರು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಳ್ಳಭಟ್ಟಿ ಸರಾಯಿ ದಂಧೆಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿದ್ದು,…

29 minutes ago

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

1 day ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

1 day ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

1 day ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

1 day ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

1 day ago