Latest

ಕಾರ್ಮಿಕರಿಗೆ ಸರ್ಕಾರದಿಂದ ಗುಡ್​ನ್ಯೂಸ್

ಕರ್ನಾಟಕದಲ್ಲಿ ಕನಿಷ್ಠ ವೇತನ‌ ಪ್ರಕಟ: ಕರ್ನಾಟಕ ರಾಜ್ಯ ಸರ್ಕಾರ ಕನಿಷ್ಠ ವೇತನ ಪ್ರಕಟಿಸಿದೆ. ಕೊರೋನಾ ಕಾಟದಿಂದಾಗಿ ಕಳೆದ 2 ವರ್ಷಗಳಿಂದ ನಿಂತುಹೋಗಿದ್ದ ಕನಿಷ್ಠ ವೇತನವನ್ನು ಸರ್ಕಾರ ಜಾರಿಗೆ ಮುಂದಾಗಿದೆ. ಈ ಮೂಲಕ ಕಾರ್ಮಿಕರಿಗೆ ಸರ್ಕಾರ ಗುಡ್​ನ್ಯೂಸ್ ಕೊಟ್ಟಿದೆ.
ಕೊರೋನಾದಿಂದ ಕನಿಷ್ಠ ವೇತನ ಪರಿಷ್ಕೃರಣೆ ಆಗಿರಲಿಲ್ಲ. ಈಗ ಒಂದಷ್ಟು ವಿಭಾಗಕ್ಕೆ ಕನಿಷ್ಠ ವೇತನ ಜಾರಿಯಾಗಿದ್ದು ಕಾರ್ಮಿಕರಿಗೆ ಹಬ್ಬಗಳ ಮಾಸದಂದೇ ಗಿಫ್ಟ್ ಸಿಕ್ಕಂತಾಗಿದೆ. ಹೊಸ ವೇತನವು ಜುಲೈ 28ರಿಂದ ಅಧಿಸೂಚನೆ ಪ್ರಕಟವಾದಾಗಿನಿಂದ ಜಾರಿಗೆ ಬಂದಿದೆ. ಕಾರ್ಮಿಕರ ವೇತನ, ಪಿಎಫ್​ಗಾಗಿ ಕಡಿತವಾಗುವ ಹಣ ಹಾಗೂ ಕೆಲಸದ ಸಮಯ ಬದಲಾಗುತ್ತೆ ಅನ್ನೋ ಚರ್ಚೆ ನಡುವೆಯೇ ಕನಿಷ್ಠ ವೇತನ ಪ್ರಕಟವಾಗಿದೆ.

ಯಾರಿಗೆಷ್ಟು ಕನಿಷ್ಠ ವೇತನ..?
ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಗುಡ್​ನ್ಯೂಸ್ ಸಿಕ್ಕಂತಾಗಿದೆ. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ, ಕಾರ್ಮಿಕರಿಗೆ ಪರಿಷ್ಕೃತ ಕನಿಷ್ಠ ವೇತನ ಸಿಗಲಿದೆ. ಈ ಬಗ್ಗೆ ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದೆ. ಬಿಬಿಎಂಪಿ ಸಿಬ್ಬಂದಿಗೂ ಕನಿಷ್ಠ ವೇತನ ಜಾರಿ ನೆಮ್ಮದಿ ತರಿಸಿದೆ. ಸರ್ಕಾರ ಕೊಡುವ ಕನಿಷ್ಠ ವೇತನ ಪ್ಲಾನ್​ನಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯೂ ಸೇರಿದೆ.
ಕನಿಷ್ಠ ವೇತನ ಜಾರಿ
ಕನಿಷ್ಠ ವೇತನದಿಂದ BBMP ಮತ್ತು ಇತರ ನಗರ ಸ್ಥಳೀಯ ಸಂಸ್ಥೆಗಳ ಕಾರ್ಮಿಕರು ಮತ್ತು ಕ್ಲರ್ಕ್‌ಗಳು, ಕಂಪ್ಯೂಟರ್/ಡಾಟಾ ಎಂಟ್ರಿ ಆಪರೇಟರ್‌ಗಳು, ಲ್ಯಾಬ್ ತಂತ್ರಜ್ಞರು ಮತ್ತು ಸಹಾಯಕ ಗ್ರಂಥಪಾಲಕರು ಅಂದಾಜು 18,000 ರೂಪಾಯಿಯಷ್ಟು ಸಂಬಳ ಪಡೆಯಲಿದ್ದಾರೆ.

ಯಾರ ಸಂಬಳ ಎಷ್ಟಾಗಿದೆ..?
ಕ್ಲರ್ಕ್​-16,564 ರೂಪಾಯಿ
ಡ್ರೈವರ್ ಕಮ್ ನಿರ್ವಾಹಕರು- 15,777 ರೂಪಾಯಿ.
ಚಾಲಕರು- 15,112 ರೂಪಾಯಿ.
ಕ್ಲೀನರ್- 13,974 ರೂಪಾಯಿ.
ಮೆಕ್ಯಾನಿಕ್‌ಗಳು- 14,657 ರೂಪಾಯಿ.
ಪ್ಲಂಬರ್‌ಗಳು- 14,657 ರೂಪಾಯಿ.
ವಾಟರ್‌ಮೆನ್​ಗಳು- 14,657 ರೂಪಾಯಿ.

ಇದಿಷ್ಟೇ ಅಲ್ಲದೇ ವಿವಿಧ ಸಂಸ್ಥೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೂ ಗುಡ್​ನ್ಯೂಸ್ ಸಿಕ್ಕಿದೆ. ಅವರ ವೇತನವೂ 13 ಸಾವಿರ ರೂಪಾಯಿಯಿಂದ 17 ಸಾವಿರ ರೂಪಾಯಿವರೆಗೆ ಏರಿಕೆಯಾದಂತಾಗಿದೆ.

ವಿವರ ಇಲ್ಲಿದೆ
ಅಟೆಂಡರ್- 13,974 ರೂಪಾಯಿ.
ತೋಟದ ಕೆಲಸಗಾರರು- 13,974 ರೂಪಾಯಿ.
ಸೆಕ್ಯೂರಿಟಿ ಗಾರ್ಡ್​- 13,974 ರೂಪಾಯಿ.
ಬೀದಿ ಗುಡಿಸುವವರು-17,306 ರೂಪಾಯಿ.
ತ್ಯಾಜ್ಯ ಕೆಲಸಗಾರರು- 17,306 ರೂಪಾಯಿ.
ಹೊಸ ವೇತನವು ಜುಲೈ 28ರಿಂದ ಅಧಿಸೂಚನೆಯಾದಾಗಿನಿಂದ ಜಾರಿಗೆ ಬಂದಿದೆ. ಆದಾಯ ಕುಂಠಿತದಿಂದ ಕನಿಷ್ಠ ವೇತನ ಜಾರಿಯಾಗಿರಲಿಲ್ಲ
ಕೇಂದ್ರ ಸರ್ಕಾರ ಕನಿಷ್ಠ ವೇತನ ದರವನ್ನು ಅಧಿನಿಯಮ 1948ರ ಅಡಿಯಲ್ಲಿ 2010ರಲ್ಲಿ ಜಾರಿಮಾಡಿತು. ಅಕ್ಟೋಬರ್ 1ಕ್ಕೆ ಇದನ್ನು ಪರಿಷ್ಕೃರಿಸಲಾಗಿತ್ತು. ಆಯಾ ರಾಜ್ಯ ಸರ್ಕಾರಗಳು ಆಯಾ ಕಾಲಕ್ಕೆ ತಕ್ಕಂತೆ, ವರ್ಷಕ್ಕೊಮ್ಮೆ ದರವನ್ನು ಪರಿಷ್ಕರಣೆ ಮಾಡುತ್ತದೆ. ಆದರೆ ಕೊರೋನಾದಿಂದಾಗಿ, ಆದಾಯ ಕುಂಠಿತವಾಗಿ ಕನಿಷ್ಠ ವೇತನ ಜಾರಿಯಾಗಿರಲಿಲ್ಲ. ಈಗ ಸರ್ಕಾರ ಪ್ರಕಟ ಮಾಡಿದೆ.
ಮುಖ್ಯವಾಗಿ ಕನಿಷ್ಠ ವೇತನ ದರ, ಕೃಷಿ ಸೇರಿದಂತೆ ಅನುಸೂಚಿತ ಉದ್ಯೋಗಗಳಿಗೆ ನಿಗದಿಪಡಿಸಿದ ಸಂಘಟಿತ ಮತ್ತು ಅಸಂಘಟಿತ ವಲಯಗಳ ಕ್ಷೇತ್ರಕ್ಕೂ ಅನ್ವಯವಾಗುತ್ತದೆ.

ವರದಿ: ನಾಗರಾಜ್ ಗೊಬ್ಬುರ್

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

15 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

20 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

20 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

20 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

20 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

20 hours ago