Latest

ಹೆಸರಿಗೆ ಮಾತ್ರ ಗ್ರೇಡ್-1 ಗ್ರಾಮ ಪಂಚಾಯಿತಿ; ಗ್ರಾಮಸ್ಥರ ಗೋಳಾಟ ಕೇಳುವವರಾರು?

ಬಾಗಲಕೋಟೆ: ಜಿಲ್ಲೆಯ ಗುಡೂರು ಗ್ರೇಡ್-1 ಗ್ರಾಮ ಪಂಚಾಯಿತಿಯಲ್ಲಿ ಸಮಯಕ್ಕೆ ಸರಿಯಾಗಿ ಗ್ರಾಮ ಪಂಚಾಯಿತಿ ಕಚೇರಿಗೆ ಯಾವ ಅಧಿಕಾರಿಗಳು ಬರುತ್ತಿಲ್ಲವೆಂದು ಅಲ್ಲಿನ ಗ್ರಾಮಸ್ಥರು ತಿಳಿಸಿದ್ದಾರೆ.
ಒಂದು ಗ್ರಾಮ ಪಂಚಾಯಿತಿ ಎಂದರೆ ಸಾಕಷ್ಟು ಕೆಲಸಗಳನ್ನು ಮಾಡಿಸಿಕೊಳ್ಳುವ ಸಲುವಾಗಿ ಗ್ರಾಮಸ್ಥರು ಬರುವುದು ಸಹಜ. ಆದರೆ ಈ ಕೆಲಸಗಳನ್ನು ಮಾಡಿಕೊಡಬೇಕಾದ ದ್ವಿತೀಯ ದರ್ಜೆ ಸಹಾಯಕ, ಪ್ರಥಮ ದರ್ಜೆ ಸಹಾಯಕ, ಹಾಗೂ ಇನ್ನುಳಿದ ಕೆಲವು ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಾರ್ಯ ನಿರ್ವಹಿಸದಿದ್ದರೆ ಯಾರ ಹತ್ತಿರ ಹೋಗಿ ಗ್ರಾಮಸ್ಥರು ತಮ್ಮ ಕೆಲಸ, ಕಾರ್ಯಗಳನ್ನು ಮಾಡಿಸಬೇಕು ಎಂಬುದು ಇಲ್ಲಿ ಗ್ರಾಮಸ್ಥರಿಗೆ ಪ್ರಶ್ನೆಯಾಗಿದೆ?
ಅಷ್ಟೇ ಅಲ್ಲದೆ ಇಲ್ಲಿನ ಗ್ರಾಮಸ್ಥರು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಕೊಡಿ ಎಂದು ಕೇಳಿದರೆ ಎಲ್ಲಾ ಗ್ರಾಮಸ್ಥರಿಗೂ ಕೆಲಸ ಕೊಡಲು ಆಗುವುದಿಲ್ಲ ಎಂದು ಇಲ್ಲಿನ ಪಿಡಿಒ ಬಸವರಾಜ ರೇವಡಿ ದುರಹಂಕಾರದಿಂದ ಹೇಳುತ್ತಾನಂತೆ. ಆದರೆ ತಮಗೆ ಬೇಕಾದ ಕೆಲವರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡುತ್ತಾರೆಂದು ಈ ವಿಷಯಕ್ಕೆ ಸಂಬಂಧಿಸಿದಂತೆ ಅಲ್ಲಿನ ಗ್ರಾಮಸ್ಥರು ಪಿಡಿಒ ಗೆ ಮನವಿ ಸಲ್ಲಿಸಿದ್ದಾರೆ.
ನಾವು ನಾನ್ ಗ್ರಾಕ್ಸೋ ಸಂಘಟನೆಯವರಾಗಿದ್ದು ನಮಗೆ ಐದು ತಿಂಗಳುಗಳಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕೊಟ್ಟಿಲ್ಲ ಆದರೆ ಗ್ರಾಕ್ಸೋ ಸಂಘಟನೆಯವರಿಗೆ ಮಾತ್ರ ನಮ್ಮ ಮುಂದೆಯೇ ಕೆಲಸ ಕೊಟ್ಟಿದ್ದಾರೆಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಕುರಿತು ನಮಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡದಿದ್ದರೆ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.
ಈ ಕೂಡಲೇ ಸಂಬಂಧಪಟ್ಟ ಮೇಲಾಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಗ್ರಾಮಸ್ಥರ ಅಳಲನ್ನು ಕೇಳಬೇಕು ಎಂದು ಭ್ರಷ್ಟರ ಬೇಟೆ ಪತ್ರಿಕೆ ಆಗ್ರಹಿಸುತ್ತದೆ.

ವರದಿ: ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

10 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

11 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

23 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

23 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

23 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

23 hours ago