Latest

ಹೆಸರಿಗೆ ಮಾತ್ರ ಗ್ರೇಡ್-1 ಗ್ರಾಮ ಪಂಚಾಯಿತಿ; ಗ್ರಾಮಸ್ಥರ ಗೋಳಾಟ ಕೇಳುವವರಾರು?

ಬಾಗಲಕೋಟೆ: ಜಿಲ್ಲೆಯ ಗುಡೂರು ಗ್ರೇಡ್-1 ಗ್ರಾಮ ಪಂಚಾಯಿತಿಯಲ್ಲಿ ಸಮಯಕ್ಕೆ ಸರಿಯಾಗಿ ಗ್ರಾಮ ಪಂಚಾಯಿತಿ ಕಚೇರಿಗೆ ಯಾವ ಅಧಿಕಾರಿಗಳು ಬರುತ್ತಿಲ್ಲವೆಂದು ಅಲ್ಲಿನ ಗ್ರಾಮಸ್ಥರು ತಿಳಿಸಿದ್ದಾರೆ.
ಒಂದು ಗ್ರಾಮ ಪಂಚಾಯಿತಿ ಎಂದರೆ ಸಾಕಷ್ಟು ಕೆಲಸಗಳನ್ನು ಮಾಡಿಸಿಕೊಳ್ಳುವ ಸಲುವಾಗಿ ಗ್ರಾಮಸ್ಥರು ಬರುವುದು ಸಹಜ. ಆದರೆ ಈ ಕೆಲಸಗಳನ್ನು ಮಾಡಿಕೊಡಬೇಕಾದ ದ್ವಿತೀಯ ದರ್ಜೆ ಸಹಾಯಕ, ಪ್ರಥಮ ದರ್ಜೆ ಸಹಾಯಕ, ಹಾಗೂ ಇನ್ನುಳಿದ ಕೆಲವು ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಾರ್ಯ ನಿರ್ವಹಿಸದಿದ್ದರೆ ಯಾರ ಹತ್ತಿರ ಹೋಗಿ ಗ್ರಾಮಸ್ಥರು ತಮ್ಮ ಕೆಲಸ, ಕಾರ್ಯಗಳನ್ನು ಮಾಡಿಸಬೇಕು ಎಂಬುದು ಇಲ್ಲಿ ಗ್ರಾಮಸ್ಥರಿಗೆ ಪ್ರಶ್ನೆಯಾಗಿದೆ?
ಅಷ್ಟೇ ಅಲ್ಲದೆ ಇಲ್ಲಿನ ಗ್ರಾಮಸ್ಥರು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಕೊಡಿ ಎಂದು ಕೇಳಿದರೆ ಎಲ್ಲಾ ಗ್ರಾಮಸ್ಥರಿಗೂ ಕೆಲಸ ಕೊಡಲು ಆಗುವುದಿಲ್ಲ ಎಂದು ಇಲ್ಲಿನ ಪಿಡಿಒ ಬಸವರಾಜ ರೇವಡಿ ದುರಹಂಕಾರದಿಂದ ಹೇಳುತ್ತಾನಂತೆ. ಆದರೆ ತಮಗೆ ಬೇಕಾದ ಕೆಲವರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡುತ್ತಾರೆಂದು ಈ ವಿಷಯಕ್ಕೆ ಸಂಬಂಧಿಸಿದಂತೆ ಅಲ್ಲಿನ ಗ್ರಾಮಸ್ಥರು ಪಿಡಿಒ ಗೆ ಮನವಿ ಸಲ್ಲಿಸಿದ್ದಾರೆ.
ನಾವು ನಾನ್ ಗ್ರಾಕ್ಸೋ ಸಂಘಟನೆಯವರಾಗಿದ್ದು ನಮಗೆ ಐದು ತಿಂಗಳುಗಳಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕೊಟ್ಟಿಲ್ಲ ಆದರೆ ಗ್ರಾಕ್ಸೋ ಸಂಘಟನೆಯವರಿಗೆ ಮಾತ್ರ ನಮ್ಮ ಮುಂದೆಯೇ ಕೆಲಸ ಕೊಟ್ಟಿದ್ದಾರೆಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಕುರಿತು ನಮಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡದಿದ್ದರೆ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.
ಈ ಕೂಡಲೇ ಸಂಬಂಧಪಟ್ಟ ಮೇಲಾಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಗ್ರಾಮಸ್ಥರ ಅಳಲನ್ನು ಕೇಳಬೇಕು ಎಂದು ಭ್ರಷ್ಟರ ಬೇಟೆ ಪತ್ರಿಕೆ ಆಗ್ರಹಿಸುತ್ತದೆ.

ವರದಿ: ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

4 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

4 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

4 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

4 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

4 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

4 hours ago