ಬಾಗಲಕೋಟೆ: ಜಿಲ್ಲೆಯ ಗುಡೂರು ಗ್ರೇಡ್-1 ಗ್ರಾಮ ಪಂಚಾಯಿತಿಯಲ್ಲಿ ಸಮಯಕ್ಕೆ ಸರಿಯಾಗಿ ಗ್ರಾಮ ಪಂಚಾಯಿತಿ ಕಚೇರಿಗೆ ಯಾವ ಅಧಿಕಾರಿಗಳು ಬರುತ್ತಿಲ್ಲವೆಂದು ಅಲ್ಲಿನ ಗ್ರಾಮಸ್ಥರು ತಿಳಿಸಿದ್ದಾರೆ.
ಒಂದು ಗ್ರಾಮ ಪಂಚಾಯಿತಿ ಎಂದರೆ ಸಾಕಷ್ಟು ಕೆಲಸಗಳನ್ನು ಮಾಡಿಸಿಕೊಳ್ಳುವ ಸಲುವಾಗಿ ಗ್ರಾಮಸ್ಥರು ಬರುವುದು ಸಹಜ. ಆದರೆ ಈ ಕೆಲಸಗಳನ್ನು ಮಾಡಿಕೊಡಬೇಕಾದ ದ್ವಿತೀಯ ದರ್ಜೆ ಸಹಾಯಕ, ಪ್ರಥಮ ದರ್ಜೆ ಸಹಾಯಕ, ಹಾಗೂ ಇನ್ನುಳಿದ ಕೆಲವು ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಾರ್ಯ ನಿರ್ವಹಿಸದಿದ್ದರೆ ಯಾರ ಹತ್ತಿರ ಹೋಗಿ ಗ್ರಾಮಸ್ಥರು ತಮ್ಮ ಕೆಲಸ, ಕಾರ್ಯಗಳನ್ನು ಮಾಡಿಸಬೇಕು ಎಂಬುದು ಇಲ್ಲಿ ಗ್ರಾಮಸ್ಥರಿಗೆ ಪ್ರಶ್ನೆಯಾಗಿದೆ?
ಅಷ್ಟೇ ಅಲ್ಲದೆ ಇಲ್ಲಿನ ಗ್ರಾಮಸ್ಥರು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಕೊಡಿ ಎಂದು ಕೇಳಿದರೆ ಎಲ್ಲಾ ಗ್ರಾಮಸ್ಥರಿಗೂ ಕೆಲಸ ಕೊಡಲು ಆಗುವುದಿಲ್ಲ ಎಂದು ಇಲ್ಲಿನ ಪಿಡಿಒ ಬಸವರಾಜ ರೇವಡಿ ದುರಹಂಕಾರದಿಂದ ಹೇಳುತ್ತಾನಂತೆ. ಆದರೆ ತಮಗೆ ಬೇಕಾದ ಕೆಲವರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡುತ್ತಾರೆಂದು ಈ ವಿಷಯಕ್ಕೆ ಸಂಬಂಧಿಸಿದಂತೆ ಅಲ್ಲಿನ ಗ್ರಾಮಸ್ಥರು ಪಿಡಿಒ ಗೆ ಮನವಿ ಸಲ್ಲಿಸಿದ್ದಾರೆ.
ನಾವು ನಾನ್ ಗ್ರಾಕ್ಸೋ ಸಂಘಟನೆಯವರಾಗಿದ್ದು ನಮಗೆ ಐದು ತಿಂಗಳುಗಳಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕೊಟ್ಟಿಲ್ಲ ಆದರೆ ಗ್ರಾಕ್ಸೋ ಸಂಘಟನೆಯವರಿಗೆ ಮಾತ್ರ ನಮ್ಮ ಮುಂದೆಯೇ ಕೆಲಸ ಕೊಟ್ಟಿದ್ದಾರೆಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಕುರಿತು ನಮಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡದಿದ್ದರೆ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.
ಈ ಕೂಡಲೇ ಸಂಬಂಧಪಟ್ಟ ಮೇಲಾಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಗ್ರಾಮಸ್ಥರ ಅಳಲನ್ನು ಕೇಳಬೇಕು ಎಂದು ಭ್ರಷ್ಟರ ಬೇಟೆ ಪತ್ರಿಕೆ ಆಗ್ರಹಿಸುತ್ತದೆ.
ವರದಿ: ವಿಶ್ವನಾಥ ಭಜಂತ್ರಿ
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…