Latest

ಹೆಸರಿಗೆ ಮಾತ್ರ ಗ್ರೇಡ್-1 ಗ್ರಾಮ ಪಂಚಾಯಿತಿ; ಗ್ರಾಮಸ್ಥರ ಗೋಳಾಟ ಕೇಳುವವರಾರು?

ಬಾಗಲಕೋಟೆ: ಜಿಲ್ಲೆಯ ಗುಡೂರು ಗ್ರೇಡ್-1 ಗ್ರಾಮ ಪಂಚಾಯಿತಿಯಲ್ಲಿ ಸಮಯಕ್ಕೆ ಸರಿಯಾಗಿ ಗ್ರಾಮ ಪಂಚಾಯಿತಿ ಕಚೇರಿಗೆ ಯಾವ ಅಧಿಕಾರಿಗಳು ಬರುತ್ತಿಲ್ಲವೆಂದು ಅಲ್ಲಿನ ಗ್ರಾಮಸ್ಥರು ತಿಳಿಸಿದ್ದಾರೆ.
ಒಂದು ಗ್ರಾಮ ಪಂಚಾಯಿತಿ ಎಂದರೆ ಸಾಕಷ್ಟು ಕೆಲಸಗಳನ್ನು ಮಾಡಿಸಿಕೊಳ್ಳುವ ಸಲುವಾಗಿ ಗ್ರಾಮಸ್ಥರು ಬರುವುದು ಸಹಜ. ಆದರೆ ಈ ಕೆಲಸಗಳನ್ನು ಮಾಡಿಕೊಡಬೇಕಾದ ದ್ವಿತೀಯ ದರ್ಜೆ ಸಹಾಯಕ, ಪ್ರಥಮ ದರ್ಜೆ ಸಹಾಯಕ, ಹಾಗೂ ಇನ್ನುಳಿದ ಕೆಲವು ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಾರ್ಯ ನಿರ್ವಹಿಸದಿದ್ದರೆ ಯಾರ ಹತ್ತಿರ ಹೋಗಿ ಗ್ರಾಮಸ್ಥರು ತಮ್ಮ ಕೆಲಸ, ಕಾರ್ಯಗಳನ್ನು ಮಾಡಿಸಬೇಕು ಎಂಬುದು ಇಲ್ಲಿ ಗ್ರಾಮಸ್ಥರಿಗೆ ಪ್ರಶ್ನೆಯಾಗಿದೆ?
ಅಷ್ಟೇ ಅಲ್ಲದೆ ಇಲ್ಲಿನ ಗ್ರಾಮಸ್ಥರು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಕೊಡಿ ಎಂದು ಕೇಳಿದರೆ ಎಲ್ಲಾ ಗ್ರಾಮಸ್ಥರಿಗೂ ಕೆಲಸ ಕೊಡಲು ಆಗುವುದಿಲ್ಲ ಎಂದು ಇಲ್ಲಿನ ಪಿಡಿಒ ಬಸವರಾಜ ರೇವಡಿ ದುರಹಂಕಾರದಿಂದ ಹೇಳುತ್ತಾನಂತೆ. ಆದರೆ ತಮಗೆ ಬೇಕಾದ ಕೆಲವರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡುತ್ತಾರೆಂದು ಈ ವಿಷಯಕ್ಕೆ ಸಂಬಂಧಿಸಿದಂತೆ ಅಲ್ಲಿನ ಗ್ರಾಮಸ್ಥರು ಪಿಡಿಒ ಗೆ ಮನವಿ ಸಲ್ಲಿಸಿದ್ದಾರೆ.
ನಾವು ನಾನ್ ಗ್ರಾಕ್ಸೋ ಸಂಘಟನೆಯವರಾಗಿದ್ದು ನಮಗೆ ಐದು ತಿಂಗಳುಗಳಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕೊಟ್ಟಿಲ್ಲ ಆದರೆ ಗ್ರಾಕ್ಸೋ ಸಂಘಟನೆಯವರಿಗೆ ಮಾತ್ರ ನಮ್ಮ ಮುಂದೆಯೇ ಕೆಲಸ ಕೊಟ್ಟಿದ್ದಾರೆಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಕುರಿತು ನಮಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡದಿದ್ದರೆ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.
ಈ ಕೂಡಲೇ ಸಂಬಂಧಪಟ್ಟ ಮೇಲಾಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಗ್ರಾಮಸ್ಥರ ಅಳಲನ್ನು ಕೇಳಬೇಕು ಎಂದು ಭ್ರಷ್ಟರ ಬೇಟೆ ಪತ್ರಿಕೆ ಆಗ್ರಹಿಸುತ್ತದೆ.

ವರದಿ: ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

10 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

17 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

17 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago