Latest

ಸ್ವಚ್ಛತೆಗೆ ಆದ್ಯತೆ ನೀಡದ ಗ್ರಾಮ ಪಂಚಾಯತಿ ಪಿಡಿಒ; ಮೌನಾರಾದರಾ? ಗ್ರಾಮ ಪಂಚಾಯತಿ ಸದಸ್ಯರು

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಸ್ಥೆ ತುಂಬಿ ತುಳುಕುತ್ತಿದೆ. ಈ ಗ್ರಾಮ ಪಂಚಾಯತಿಯಲ್ಲಿ ಮೂಲಭೂತ ಸೌಕರ್ಯಗಳು ಎಲ್ಲವೂ ಇವೆ. ಆದರೆ ಇಲ್ಲಿಯ ಪಿಡಿಒ ಎಮ್.ಕೆ. ಡೋಣಿ ನಿರ್ಲಕ್ಷದಿಂದ ಎಲ್ಲಾ ಸೌಕರ್ಯಗಳು ಇದ್ದು ಇಲ್ಲದಂತಾಗಿದೆ.
ಇದರಲ್ಲಿ ಮುಖ್ಯವಾಗಿ ಸ್ವಚ್ಛತೆ ಬಗ್ಗೆ ಅರಿವಿಲ್ಲದೇ ಕುರುಡನಾಗಿ ಕುಳಿತಿದ್ದಾನೆ ಎನ್ನಬಹುದು.
ತನ್ನ ಕಣ್ಮುಂದೆಯೇ ಸಾಕಷ್ಟು ಅವ್ಯವಸ್ಥೆ ಕಂಡರೂ ಸಹ ಕಾಣದಂತಿರುವ ಇಂತಹ ಅಧಿಕಾರಿಯನ್ನು ನೋಡಿ ಗ್ರಾಮಸ್ಥರು ಛೀಮಾರಿ ಹಾಕುತ್ತಿದ್ದಾರೆ. ಇದರಲ್ಲಿ ಮೊದಲನೆಯದಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಸ ವಿಲೇವಾರಿ ವಾಹನವನ್ನು ಸರ್ಕಾರ ನೀಡಿದೆ. ಆದರೆ ಇದರ ಉಪಯೋಗ ಮಾತ್ರ ಹೊಸದಾಗಿ ಬಂದಾಗ ಮಾತ್ರ ಮಾಡಿ ಇದೀಗ ಆ ವಾಹನವನ್ನು ಮೂಲೆ ಗುಂಪು ಮಾಡಿದ್ದಾರೆ. ಈ ವಿಷಯದ ಕುರಿತು ಕರೆ ಮಾಡಿ ತಿಳಿಸಿದರು ಕ್ಯಾರೇ ಎನ್ನದ ಪಿಡಿಒನ ನಿರ್ಲಕ್ಷ್ಯತನ ಎದ್ದು ಕಾಣುತ್ತಿದೆ.

ಈ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಾಲ್ಕು ಹಳ್ಳಿಗಳಿದ್ದು, ಪ್ರತಿ ಹಳ್ಳಿಗಳಲ್ಲಿ ಚರಂಡಿಗಳ ವ್ಯವಸ್ಥೆ ಇಲ್ಲ, ಚರಂಡಿಗಳ ವ್ಯವಸ್ಥೆ ಇದ್ದಲ್ಲಿ ಸ್ವಚ್ಛತೆ ಮಾಡಲ್ಲವೆಂದು ಕೆಲವು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚರಂಡಿಗಳ ಹಾಗೂ ಗಲೀಜು ಪ್ರದೇಶದ ಸ್ವಚ್ಛತೆ ಸರಿಯಾಗಿ ಮಾಡದ ಕಾರಣ ಸೊಳ್ಳೆಗಳ ಕಾಟದಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಬಂದು 20ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿರುವ ಪ್ರಕರಣಗಳಿವೆ.
ಈ ರೀತಿಯಾಗಿ ಅಧಿಕಾರಿ ತೋರುವ ನಿರ್ಲಕ್ಷ್ಯದಿಂದ ಬಡ ಕುಟುಂಬಗಳೆಲ್ಲ ತಿಂಗಳು ಪೂರ್ತಿ ದುಡಿದ ಹಣವನ್ನೆಲ್ಲಾ ಆಸ್ಪತ್ರೆಗೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಷ್ಟೇ ಅಲ್ಲದೆ ಸರಿಯಾದ ಸಮಯಕ್ಕೆ ಈ ಪಿಡಿಒ ಗ್ರಾಮ ಪಂಚಾಯಿತಿಗೆ ಬರುವುದಿಲ್ಲ ತನ್ನ ಮನಸ್ಸಿಗೆ ಬಂದಾಗ ಬರುತ್ತಾನೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿಯ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರು ಸಹ ಅವ್ಯವಸ್ಥೆ ಮತ್ತು ಸ್ವಚ್ಛತೆ ಬಗ್ಗೆ ಗಮನ ಹರಿಸುತ್ತಿಲ್ಲ. ಹೊಸದಾಗಿ ಸದಸ್ಯರಾಗಿ ಆಯ್ಕೆಯಾದಾಗ ರೆಕ್ಕೆ ಬಿಚ್ಚಿ ಹಾರಾಡುವ ಹಕ್ಕಿಯಂತಿದ್ದ ಸದಸ್ಯರು ಇದೀಗ ರೆಕ್ಕೆ ಮುರಿದ ಹಕ್ಕಿಯಂತಾಗಿದ್ದಾರೆಂದು ಗ್ರಾಮಸ್ಥರು ಅಲ್ಲಲ್ಲಿ ಪಿಸುಗುಡುತ್ತಿದ್ದಾರೆ. ಹೊಸ ಹುರುಪಿನಲ್ಲಿ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಇದೀಗ ಎಲ್ಲಾ ಸದಸ್ಯರು ಮೌನವಾಗಿರುವುದು ಸಾಕಷ್ಟು ಸಂದೇಹಗಳಿಗೆ ಎಡೆಮಾಡಿಕೊಟ್ಟಿದೆ. ಇವರೆಲ್ಲರೂ ಸಹ ಪಿಡಿಒ ರವರ ಬುದ್ದಿಯನ್ನೇ ಕಲಿಯುತ್ತಿದ್ದಾರಾ ಎಂಬುದು ಪ್ರಶ್ನೆಯಾಗಿದೆ?
ಇದಷ್ಟೇ ಅಲ್ಲದೇ ಇನ್ನೂ ಸಾಕಷ್ಟು ಅವ್ಯವಸ್ಥೆ ಈ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇದೆ. ಈ ವರದಿಯನ್ನು ಗಮನಿಸಿಯಾದರೂ ಎಲ್ಲವನ್ನೂ ಸರಿಪಡಿಸದಿದ್ದರೆ ಇನ್ನಷ್ಟು ಅವ್ಯವಸ್ಥೆ ಹಾಗೂ ಕಳಪೆ ಕಾಮಗಾರಿಗಳ ಕುರಿತು ಮುಂದಿನ ದಿನಗಳಲ್ಲಿ ಬಯಲಿಗೆ ಎಳೆಯಬೇಕಾಗುತ್ತದೆ.

ವರದಿ: ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

14 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

14 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

14 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

14 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

14 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

14 hours ago