Latest

ಸ್ವಚ್ಛತೆಗೆ ಆದ್ಯತೆ ನೀಡದ ಗ್ರಾಮ ಪಂಚಾಯತಿ ಪಿಡಿಒ; ಮೌನಾರಾದರಾ? ಗ್ರಾಮ ಪಂಚಾಯತಿ ಸದಸ್ಯರು

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಸ್ಥೆ ತುಂಬಿ ತುಳುಕುತ್ತಿದೆ. ಈ ಗ್ರಾಮ ಪಂಚಾಯತಿಯಲ್ಲಿ ಮೂಲಭೂತ ಸೌಕರ್ಯಗಳು ಎಲ್ಲವೂ ಇವೆ. ಆದರೆ ಇಲ್ಲಿಯ ಪಿಡಿಒ ಎಮ್.ಕೆ. ಡೋಣಿ ನಿರ್ಲಕ್ಷದಿಂದ ಎಲ್ಲಾ ಸೌಕರ್ಯಗಳು ಇದ್ದು ಇಲ್ಲದಂತಾಗಿದೆ.
ಇದರಲ್ಲಿ ಮುಖ್ಯವಾಗಿ ಸ್ವಚ್ಛತೆ ಬಗ್ಗೆ ಅರಿವಿಲ್ಲದೇ ಕುರುಡನಾಗಿ ಕುಳಿತಿದ್ದಾನೆ ಎನ್ನಬಹುದು.
ತನ್ನ ಕಣ್ಮುಂದೆಯೇ ಸಾಕಷ್ಟು ಅವ್ಯವಸ್ಥೆ ಕಂಡರೂ ಸಹ ಕಾಣದಂತಿರುವ ಇಂತಹ ಅಧಿಕಾರಿಯನ್ನು ನೋಡಿ ಗ್ರಾಮಸ್ಥರು ಛೀಮಾರಿ ಹಾಕುತ್ತಿದ್ದಾರೆ. ಇದರಲ್ಲಿ ಮೊದಲನೆಯದಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಸ ವಿಲೇವಾರಿ ವಾಹನವನ್ನು ಸರ್ಕಾರ ನೀಡಿದೆ. ಆದರೆ ಇದರ ಉಪಯೋಗ ಮಾತ್ರ ಹೊಸದಾಗಿ ಬಂದಾಗ ಮಾತ್ರ ಮಾಡಿ ಇದೀಗ ಆ ವಾಹನವನ್ನು ಮೂಲೆ ಗುಂಪು ಮಾಡಿದ್ದಾರೆ. ಈ ವಿಷಯದ ಕುರಿತು ಕರೆ ಮಾಡಿ ತಿಳಿಸಿದರು ಕ್ಯಾರೇ ಎನ್ನದ ಪಿಡಿಒನ ನಿರ್ಲಕ್ಷ್ಯತನ ಎದ್ದು ಕಾಣುತ್ತಿದೆ.

ಈ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಾಲ್ಕು ಹಳ್ಳಿಗಳಿದ್ದು, ಪ್ರತಿ ಹಳ್ಳಿಗಳಲ್ಲಿ ಚರಂಡಿಗಳ ವ್ಯವಸ್ಥೆ ಇಲ್ಲ, ಚರಂಡಿಗಳ ವ್ಯವಸ್ಥೆ ಇದ್ದಲ್ಲಿ ಸ್ವಚ್ಛತೆ ಮಾಡಲ್ಲವೆಂದು ಕೆಲವು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚರಂಡಿಗಳ ಹಾಗೂ ಗಲೀಜು ಪ್ರದೇಶದ ಸ್ವಚ್ಛತೆ ಸರಿಯಾಗಿ ಮಾಡದ ಕಾರಣ ಸೊಳ್ಳೆಗಳ ಕಾಟದಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಬಂದು 20ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿರುವ ಪ್ರಕರಣಗಳಿವೆ.
ಈ ರೀತಿಯಾಗಿ ಅಧಿಕಾರಿ ತೋರುವ ನಿರ್ಲಕ್ಷ್ಯದಿಂದ ಬಡ ಕುಟುಂಬಗಳೆಲ್ಲ ತಿಂಗಳು ಪೂರ್ತಿ ದುಡಿದ ಹಣವನ್ನೆಲ್ಲಾ ಆಸ್ಪತ್ರೆಗೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಷ್ಟೇ ಅಲ್ಲದೆ ಸರಿಯಾದ ಸಮಯಕ್ಕೆ ಈ ಪಿಡಿಒ ಗ್ರಾಮ ಪಂಚಾಯಿತಿಗೆ ಬರುವುದಿಲ್ಲ ತನ್ನ ಮನಸ್ಸಿಗೆ ಬಂದಾಗ ಬರುತ್ತಾನೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿಯ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರು ಸಹ ಅವ್ಯವಸ್ಥೆ ಮತ್ತು ಸ್ವಚ್ಛತೆ ಬಗ್ಗೆ ಗಮನ ಹರಿಸುತ್ತಿಲ್ಲ. ಹೊಸದಾಗಿ ಸದಸ್ಯರಾಗಿ ಆಯ್ಕೆಯಾದಾಗ ರೆಕ್ಕೆ ಬಿಚ್ಚಿ ಹಾರಾಡುವ ಹಕ್ಕಿಯಂತಿದ್ದ ಸದಸ್ಯರು ಇದೀಗ ರೆಕ್ಕೆ ಮುರಿದ ಹಕ್ಕಿಯಂತಾಗಿದ್ದಾರೆಂದು ಗ್ರಾಮಸ್ಥರು ಅಲ್ಲಲ್ಲಿ ಪಿಸುಗುಡುತ್ತಿದ್ದಾರೆ. ಹೊಸ ಹುರುಪಿನಲ್ಲಿ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಇದೀಗ ಎಲ್ಲಾ ಸದಸ್ಯರು ಮೌನವಾಗಿರುವುದು ಸಾಕಷ್ಟು ಸಂದೇಹಗಳಿಗೆ ಎಡೆಮಾಡಿಕೊಟ್ಟಿದೆ. ಇವರೆಲ್ಲರೂ ಸಹ ಪಿಡಿಒ ರವರ ಬುದ್ದಿಯನ್ನೇ ಕಲಿಯುತ್ತಿದ್ದಾರಾ ಎಂಬುದು ಪ್ರಶ್ನೆಯಾಗಿದೆ?
ಇದಷ್ಟೇ ಅಲ್ಲದೇ ಇನ್ನೂ ಸಾಕಷ್ಟು ಅವ್ಯವಸ್ಥೆ ಈ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇದೆ. ಈ ವರದಿಯನ್ನು ಗಮನಿಸಿಯಾದರೂ ಎಲ್ಲವನ್ನೂ ಸರಿಪಡಿಸದಿದ್ದರೆ ಇನ್ನಷ್ಟು ಅವ್ಯವಸ್ಥೆ ಹಾಗೂ ಕಳಪೆ ಕಾಮಗಾರಿಗಳ ಕುರಿತು ಮುಂದಿನ ದಿನಗಳಲ್ಲಿ ಬಯಲಿಗೆ ಎಳೆಯಬೇಕಾಗುತ್ತದೆ.

ವರದಿ: ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

1 hour ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

1 hour ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

21 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago