ಮಂಗಳೂರಿನಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬ ನಗರದ ಸ್ಟ್ರೀಟ್ನಲ್ಲಿರುವ ಚಿನ್ನದ ಅಂಗಡಿಯೊಂದಕ್ಕೆ ಚಿನ್ನಾಭರಣಗಳನ್ನು ಮಾರಾಟ ಮಾಡಲು ಆಗಮಿಸಿದ್ದ.
ಈ ವೇಳೆ ಆತನ ಮೇಲೆ ಅನುಮಾನಗೊಂಡು ಮಂಗಳೂರು ಉತ್ತರ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದರು. ಬಳಿಕ ಆತನನ್ನ ವಿಚಾರಿಸಿದಾಗ ಇತ ‘ತ್ರಿಶೂರ್ನ ವೈಲತ್ತೂರ್ ನಿವಾಸಿ ಅಹ್ಮದ್ ಅಕ್ಮಲ್ (27) ಎಂಬುದು ಬೆಳಕಿಗೆ ಬಂದಿದೆ. ಬಳಿಕ ಮತ್ತಷ್ಟು ವಿಚಾರಣೆಗೊಳಪಡಿಸಿದಾಗ ಇತ ಜುಲೈ 23 ರಂದು ಕೇರಳದ ತ್ರಿಶೂರ್ನಲ್ಲಿ ವಾಸವಾಗಿದ್ದ ಅಜ್ಜ ಮತ್ತು ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣಗಳನ್ನು ದೋಚಿಕೊಂಡು ಬಂದಿದ್ದಾಗಿ ಬಾಯ್ಬಿಟಿದ್ದಾನೆ. ಸಧ್ಯ ಈ ಪ್ರಕರಣವನ್ನ ಬೈಂದೂರು ಇನ್ಸ್ ಪೆಕ್ಟರ್ ರಾಘವೇಂದ್ರ ನೇತೃತ್ವದ ತಂಡ ಪತ್ತೆ ಮಾಡಿದೆ.
ಇನ್ನು ಆರೋಪಿ ಅಹ್ಮದ್ ಅಕ್ಮಲ್ ಮಂಗಳೂರಿನಲ್ಲಿ ವ್ಯಾಸಂಗ ಮಾಡಿದ್ದ. ಹಾಗಾಗಿ ಇಲ್ಲಿನ ಬಗ್ಗೆ ಆತನಿಗೆ ಗೊತ್ತಿದ್ದರಿಂದ ಅಜ್ಜ ಅಜ್ಜಿಯನ್ನ ಕೊಲೆ ಮಾಡಿ ಚಿನ್ನಾಭರಣ ದೋಚಿಕೊಂಡು ಮಂಗಳೂರಿಗೆ ಬಂದಿದ್ದ. ಇನ್ನು ಆತನನ್ನ ಪೊಲೀಸರು ಪರಿಶೀಲಿಸಿದಾಗ ಒಂದು ಚಾಕು, ಸ್ಕ್ರೂಡ್ರೈವರ್, ಮಂಗಳೂರು ವಿಶ್ವವಿದ್ಯಾನಿಲಯದ ಮಾರ್ಕ್ಸ್ ಕಾರ್ಡ್, ಪಾಸ್ಪೋರ್ಟ್, ಆಧಾರ್, ಸೌತ್ ಇಂಡಿಯಾ ಬ್ಯಾಂಕ್ ಕಾರ್ಡ್, ಆಕ್ಸಿಸ್ ಬ್ಯಾಂಕ್ ವೀಸಾ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಹೊಂದಿರುವ ಪರ್ಸ್. ಒಂದು ಮುತ್ತಿನ ಸರ, ಮೂರು ಜೋಡಿ ಕಿವಿಯೋಲೆಗಳು, ಒಂದು ಸಣ್ಣ ಚಿನ್ನದ ಸರದ ಜೊತೆ ಬೆರಳಿನ ಉಂಗುರಗಳು ಮತ್ತು ಎರಡು ಚಿನ್ನದ ಬಳೆಗಳು ಇದ್ದು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…