ಬಾಗಲಕೋಟೆ: ಲಂಚ ಸ್ವೀಕರಿಸುವಾಗ ಗ್ರಾಮ ಪಂಚಾಯತಿ ಪಿಡಿಒ ಗಳು ಅಕ್ಟೋಬರ್ 20 ಗುರುವಾರ ದಂದು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಬಾಗಲಕೋಟೆ ತಾಲೂಕಿನ ಬೇವಿನಮಟ್ಟಿ ಗ್ರಾಮ ಪಂಚಾಯತಿ ಪಿಡಿಒ ಚಂದ್ರಕಾಂತ ತಿಮ್ಮಾಪುರ ಮತ್ತು ರಾಂಪುರ ಗ್ರಾಮ ಪಂಚಾಯತಿ ಪಿಡಿಒ ಮುದಕಣ್ಣ ತೇಜಿ ಅವರ ಮೇಲೆ ದಾಳಿ ನಡೆಸಿದ್ದು, ಅವರನ್ನು ಲೋಕಾಯುಕ್ತರು ವಶಕ್ಕೆ ಪಡೆದಿದ್ದಾರೆ.
NA (ಎನ್ ಎ) ಪ್ಲಾಟ್ ಎಂಟ್ರಿ ಮಾಡಿಕೊಡಲು 2,50,000 ಲಕ್ಷ ರೂಪಾಯಿಗಳನ್ನು ಕೇಳಲಾಗಿದೆ ಎನ್ನಲಾಗಿದೆ. ಇದರ ಪೈಕಿ ಮೊದಲ ಕಂತಿನಲ್ಲಿ 1 ಲಕ್ಷ ರೂಪಾಯಿಗಳನ್ನು ಹಾಗೂ ಉಳಿದ 1,50,000 ಲಕ್ಷ ರೂಪಾಯಿಗಳನ್ನು ಕೆಲಸದ ನಂತರ ಕೊಡಬೇಕೆಂದು ಹೊನ್ನಾಕಟ್ಟಿ ಗ್ರಾಮದ ವಾಸು ಜಾಧವ್ ಎಂಬುವವರಿಗೆ ಬೇಡಿಕೆ ಇಟ್ಟಿದ್ದರು.
ಈ ಮೂಲಕ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತರು ಪಿಡಿಓ ಗಳ ಮೇಲೆ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಜಿಲ್ಲಾ ಲೋಕಾಯುಕ್ತ ಎಸ್ಪಿ ಅನಿತಾ ಮಾರ್ಗದರ್ಶನದಲ್ಲಿ ಬಾಗಲಕೋಟೆ ಲೋಕಾಯುಕ್ತ ಡಿಎಸ್ಪಿ ಪುಷ್ಪಲತಾ ಹಾಗೂ ಸಿಪಿಐ ಮಲ್ಲಪ್ಪ ಬಿದರಿ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಇಬ್ಬರು ಪಿಡಿಒ ಗಳನ್ನು ವಶಕ್ಕೆ ಪಡೆದ ಲೋಕಾಯುಕ್ತರು ವಿಚಾರಣೆ ನಡೆಸಿದ್ದಾರೆ.
ವರದಿ: ವಿಶ್ವನಾಥ ಭಜಂತ್ರಿ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…