ಬಾಗಲಕೋಟೆ: ಲಂಚ ಸ್ವೀಕರಿಸುವಾಗ ಗ್ರಾಮ ಪಂಚಾಯತಿ ಪಿಡಿಒ ಗಳು ಅಕ್ಟೋಬರ್ 20 ಗುರುವಾರ ದಂದು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಬಾಗಲಕೋಟೆ ತಾಲೂಕಿನ ಬೇವಿನಮಟ್ಟಿ ಗ್ರಾಮ ಪಂಚಾಯತಿ ಪಿಡಿಒ ಚಂದ್ರಕಾಂತ ತಿಮ್ಮಾಪುರ ಮತ್ತು ರಾಂಪುರ ಗ್ರಾಮ ಪಂಚಾಯತಿ ಪಿಡಿಒ ಮುದಕಣ್ಣ ತೇಜಿ ಅವರ ಮೇಲೆ ದಾಳಿ ನಡೆಸಿದ್ದು, ಅವರನ್ನು ಲೋಕಾಯುಕ್ತರು ವಶಕ್ಕೆ ಪಡೆದಿದ್ದಾರೆ.
NA (ಎನ್ ಎ) ಪ್ಲಾಟ್ ಎಂಟ್ರಿ ಮಾಡಿಕೊಡಲು 2,50,000 ಲಕ್ಷ ರೂಪಾಯಿಗಳನ್ನು ಕೇಳಲಾಗಿದೆ ಎನ್ನಲಾಗಿದೆ. ಇದರ ಪೈಕಿ ಮೊದಲ ಕಂತಿನಲ್ಲಿ 1 ಲಕ್ಷ ರೂಪಾಯಿಗಳನ್ನು ಹಾಗೂ ಉಳಿದ 1,50,000 ಲಕ್ಷ ರೂಪಾಯಿಗಳನ್ನು ಕೆಲಸದ ನಂತರ ಕೊಡಬೇಕೆಂದು ಹೊನ್ನಾಕಟ್ಟಿ ಗ್ರಾಮದ ವಾಸು ಜಾಧವ್ ಎಂಬುವವರಿಗೆ ಬೇಡಿಕೆ ಇಟ್ಟಿದ್ದರು.
ಈ ಮೂಲಕ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತರು ಪಿಡಿಓ ಗಳ ಮೇಲೆ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಜಿಲ್ಲಾ ಲೋಕಾಯುಕ್ತ ಎಸ್ಪಿ ಅನಿತಾ ಮಾರ್ಗದರ್ಶನದಲ್ಲಿ ಬಾಗಲಕೋಟೆ ಲೋಕಾಯುಕ್ತ ಡಿಎಸ್ಪಿ ಪುಷ್ಪಲತಾ ಹಾಗೂ ಸಿಪಿಐ ಮಲ್ಲಪ್ಪ ಬಿದರಿ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಇಬ್ಬರು ಪಿಡಿಒ ಗಳನ್ನು ವಶಕ್ಕೆ ಪಡೆದ ಲೋಕಾಯುಕ್ತರು ವಿಚಾರಣೆ ನಡೆಸಿದ್ದಾರೆ.
ವರದಿ: ವಿಶ್ವನಾಥ ಭಜಂತ್ರಿ
ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…
ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…
ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…
ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…
ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…
ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…