Latest

ಲೋಕಾಯುಕ್ತರ ಭರ್ಜರಿ ಬೇಟೆ; ಪಿಡಿಒ ಗಳು ಅರೆಸ್ಟ್!

ಬಾಗಲಕೋಟೆ: ಲಂಚ ಸ್ವೀಕರಿಸುವಾಗ ಗ್ರಾಮ ಪಂಚಾಯತಿ ಪಿಡಿಒ ಗಳು ಅಕ್ಟೋಬರ್ 20 ಗುರುವಾರ ದಂದು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಬಾಗಲಕೋಟೆ ತಾಲೂಕಿನ ಬೇವಿನಮಟ್ಟಿ ಗ್ರಾಮ ಪಂಚಾಯತಿ ಪಿಡಿಒ ಚಂದ್ರಕಾಂತ ತಿಮ್ಮಾಪುರ ಮತ್ತು ರಾಂಪುರ ಗ್ರಾಮ ಪಂಚಾಯತಿ ಪಿಡಿಒ ಮುದಕಣ್ಣ ತೇಜಿ ಅವರ ಮೇಲೆ ದಾಳಿ ನಡೆಸಿದ್ದು, ಅವರನ್ನು ಲೋಕಾಯುಕ್ತರು ವಶಕ್ಕೆ ಪಡೆದಿದ್ದಾರೆ.
NA (ಎನ್ ಎ) ಪ್ಲಾಟ್ ಎಂಟ್ರಿ ಮಾಡಿಕೊಡಲು 2,50,000 ಲಕ್ಷ ರೂಪಾಯಿಗಳನ್ನು ಕೇಳಲಾಗಿದೆ ಎನ್ನಲಾಗಿದೆ. ಇದರ ಪೈಕಿ ಮೊದಲ ಕಂತಿನಲ್ಲಿ 1 ಲಕ್ಷ ರೂಪಾಯಿಗಳನ್ನು ಹಾಗೂ ಉಳಿದ 1,50,000 ಲಕ್ಷ ರೂಪಾಯಿಗಳನ್ನು ಕೆಲಸದ ನಂತರ ಕೊಡಬೇಕೆಂದು ಹೊನ್ನಾಕಟ್ಟಿ ಗ್ರಾಮದ ವಾಸು ಜಾಧವ್ ಎಂಬುವವರಿಗೆ ಬೇಡಿಕೆ ಇಟ್ಟಿದ್ದರು.
ಈ ಮೂಲಕ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತರು ಪಿಡಿಓ ಗಳ ಮೇಲೆ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಜಿಲ್ಲಾ ಲೋಕಾಯುಕ್ತ ಎಸ್ಪಿ ಅನಿತಾ ಮಾರ್ಗದರ್ಶನದಲ್ಲಿ ಬಾಗಲಕೋಟೆ ಲೋಕಾಯುಕ್ತ ಡಿಎಸ್ಪಿ ಪುಷ್ಪಲತಾ ಹಾಗೂ ಸಿಪಿಐ ಮಲ್ಲಪ್ಪ ಬಿದರಿ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಇಬ್ಬರು ಪಿಡಿಒ ಗಳನ್ನು ವಶಕ್ಕೆ ಪಡೆದ ಲೋಕಾಯುಕ್ತರು ವಿಚಾರಣೆ ನಡೆಸಿದ್ದಾರೆ.

ವರದಿ: ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago