ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ಉಂಟಾದ ವೈಷಮ್ಯದಿಂದ ಈ ಘಟನೆ ನಡೆದಿತ್ತು. ಹನುಮಂತಮ್ಮ (ತಾಯಿ ಹುಲಿಗೆಮ್ಮ ಹೊಸಮನಿ) ಅವರ ಕುಟುಂಬದವರೊಂದಿಗೆ ಆರೋಪಿತರ ನಡುವೆ ದ್ವೇಷ ಉಂಟಾಗಿತ್ತು. 2021ರಲ್ಲಿ ಹನುಮಂತಮ್ಮ ಹಾಗೂ ಅವರ ಮಕ್ಕಳು ಶರಣಬಸವ ಮತ್ತು ಅಮರೇಶ ಮನೆಯ ಮುಂದೆ ಇದ್ದಾಗ, ಆರೋಪಿತರು ಅಕ್ರಮಕೂಟ ರಚಿಸಿ ಕಟ್ಟಿಗೆ, ಕೊಡಲಿ ಹಾಗೂ ಕಲ್ಲುಗಳೊಂದಿಗೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ದಾಳಿಯಲ್ಲಿ ಶರಣಬಸವ ಅವರಿಗೆ ಗಂಭೀರ ಗಾಯಗಳಾಗಿದ್ದು, ಲಿಂಗಸಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಮೃತಪಟ್ಟಿದ್ದಾರೆ. ಹನುಮಂತಮ್ಮ ಅವರ ದೂರಿನ ಮೇರೆಗೆ ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ಅಂದಿನ ಸಿಪಿಐ ಮಹಾಂತೇಶ ಸಜ್ಜನ ಮತ್ತು ರಮೇಶ ಕುಲ್ಕರ್ಣಿ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣವನ್ನು ವಿಚಾರಣೆ ನಡೆಸಿದ ರಾಯಚೂರು 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಲಿಂಗಸಗೂರು ಪೀಠ)ದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ಆರೋಪಿಗಳನ್ನು ದೋಷಿ ಎಂದು ತೀರ್ಮಾನಿಸಿ, ಎಲ್ಲಾ 10 ಮಂದಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ತಲಾ ₹19,500 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಮಂಜುನಾಥ ಬೇರ್ಗಿ (ಹುಳ್ಕಿಹಾಳ್) ವಾದ ಮಂಡಿಸಿದ್ದರು. ಪ್ರಕರಣದಲ್ಲಿ ಸಾಕ್ಷಿದಾರರನ್ನು ಸಮಯಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಪೊಲೀಸ್ ಪೇದೆಗಳಾದ ನಿಂಗಯ್ಯ ಮತ್ತು ಮಂಜುನಾಥ ಸಹಕಾರ ನೀಡಿದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Belagavi ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ಅಜಯಸಿಂಗ್ ರಜಪೂತ್ ಅವರ ನಿವಾಸ ಮತ್ತು ಸಂಬಂಧಿತ ಸ್ಥಳಗಳ ಮೇಲೆ…
ಕನ್ನಡ ಮತ್ತು ತೆಲುಗು ಸಂಗೀತ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿರುವ ಗಾಯಕಿ Mangli ಹಾಗೂ ಅವರ ಸಹೋದರನ ವಿರುದ್ಧ ಭಾರೀ ವಂಚನೆ…
ನೆರೆಯ ತೆಲಂಗಾಣ ರಾಜ್ಯದ ರಾಜಧಾನಿ ಹೈದರಾಬಾದ್ ನಲ್ಲಿ ಮನಕಲಕುವ ಘಟನೆಯೊಂದು ಬೆಳಕಿಗೆ ಬಂದಿದೆ. ಮದುವೆ ಪ್ರಸ್ತಾಪವನ್ನು ನಿರಾಕರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ,…
ಅಂತರ್ಧರ್ಮೀಯ ವಿವಾಹ ಮಾಡಿಕೊಂಡಿರುವ ಯುವ ಜೋಡಿಯೊಂದು ತನ್ನ ಸುರಕ್ಷತೆಗಾಗಿ ಜಿಲ್ಲಾ ಪೊಲೀಸ್ ಅಧಿಕಾರಿಗಳ ನೆರವು ಬೇಡಿರುವ ಘಟನೆ ಇದೀಗ ಗಮನ…
ದೇಶದಲ್ಲಿ ಮಹಿಳಾ ಸುರಕ್ಷತೆಗೆ ಸಂಬಂಧಿಸಿದಂತೆ ಎಷ್ಟೇ ಕಠಿಣ ಕಾನೂನು ಕ್ರಮಗಳನ್ನು ಕೈಗೊಂಡರೂ, ಸಾರ್ವಜನಿಕ ಸ್ಥಳಗಳಲ್ಲಿ ಕಿರುಕುಳ ನೀಡುವ ಘಟನೆಗಳು ನಿಲ್ಲುವ…
ಡಿಜಿಟಲ್ ವಹಿವಾಟುಗಳಲ್ಲಿ ಹೆಚ್ಚುತ್ತಿರುವ ವಂಚನೆ ಪ್ರಕರಣಗಳನ್ನು ನಿಯಂತ್ರಿಸಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೊಸ ಭದ್ರತಾ ಕ್ರಮಗಳನ್ನು ಪರಿಗಣಿಸುತ್ತಿದೆ. ಈ…