ಕುಂದಗೋಳ: ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಐದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ ನೀರಿನ ಸಮಸ್ಯೆ ತಲೆದೋರಿದೆ. ಈಗಾಗಲೇ ಟ್ಯಾಂಕರ್ ಮೂಲಕ ನೀರು ಸರಬರಾಜು ವ್ಯವಸ್ಥೆ ಕಲ್ಪಿಸಲಾಗಿದೆ.
ಹೌದು..! ಕೆಳೆದ ಏಳೆಂಟು ದಿನಗಳಿಂದ ನೀರಿನ ಅಭಾವ ಸೃಷಿಯಾಗಿದ್ದು, ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನೀರಿನ ಅಭಾವ ಹಿನ್ನೆಲೆಯಲ್ಲಿ ಜನರು ಹೊಲ-ಗದ್ದೆಗಳ ಕೆರೆಗಳಿಗೆ ಹೋಗಿ ಕುಡಿಯುವ ನೀರು ತೆಗದುಕೂಂಡು ಬರ್ತಾ ಇದ್ದಾರೆ. ಇನ್ನೂ ದ್ವಿಚಕ್ರವಾಹನ ಹೊಂದಿದವರು ಶಿರಗುಪ್ಪಿ, ಕುಂದಗೋಳ, ಭಂಡಿವಾಡ, ಹೀಗೆ ಬೇರೆ ಗ್ರಾಮಗಳಿಗೆ ಸಂಚಾರಸಿ ಶುದ್ದ ನೀರು ತೆಗದುಕೂಂಡು ಬರ್ತಾ ಇದ್ದಾರೆ. ನೀರಿನ ಬವಣೆ ನೀಗಿಸಲು ಸರಬರಾಜು ಮಾಡುವು ಟ್ಯಾಂಕರ್ ವಾಹನದಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಜನ ಪರದಾಡುವುದು ಅಧಿಕಾರಿಗಳ ಗಮನಕ್ಕೆ ಬಂದಿಲ್ಲಾವ?
ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ ಊಂಟಾಗಿದ್ದು, ಕುಡಿಯುವ ನೀರಿಗೆ ಜನ ತತ್ತಿರಿಸುವಂತೆ ಮಾಡಿದೆ. ಸರಕಾರ ನೀರಿನ ಸರಬರಾಜು ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಸಾಕಷ್ಟು ಹಣ ವಿನಿಯೋಗಿಸಲು ಬಿಡುಗಡೆ ಮಾಡಿದರು, ಅಧಿಕಾರಿಗಳ ಬೇಜವಾಬ್ದಾರಿತನ ಇದಕ್ಕೆ ಕಾರಣ ಎನ್ನಬಹುದು. ಸರಕಾರದ ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆಯಡಿ ನಿರ್ಮಾಸಿಲಾಗಿರುವ 13 ಹಳ್ಳಿಗಳಿಗೆ ನೀರು ಸರಬರಾಜು ಮಾಡುವು ಕಾರ್ಯ ಸ್ಥಗತಿಗೂಂಡಿದೆ. ಹಾಗಾದರೆ ಜನರ ಗೋಳು ಕೇಳುವರು ಯಾರು? ಎಂಬ ಯಕ್ಷ ಪ್ರಶ್ನೆಯಾಗಿ ಉಳಿದಿದೆ.
ಕಾರಣ: ರಾಜ್ಯಾದ್ಯಾಂತ ವಿಪರೀತ ಮಳೆಯಿಂದಾಗಿ ಹಳ್ಳ -ಕೂಳ್ಳಗಳು ತುಂಬಿ ಹರಿದ ಪರಿಣಾಮ ಹೆಬಸೂರ ರೈಲ್ವೆ ಬ್ರಿಡ್ಜ್ ಬಳಿ ಕೆಳಗೆ ನೀರು ಸಂಗ್ರಹವಾಗಿರುವುದರಿಂದ, ಪಂಪಸೆಟ್ಟ್ ಅಳವಡಿಸಿ ನೀರು ಹೊರಗೆ ಹಾಕಿ. ನಂತರ ದುರಸ್ತಿಗೆ ಒಳಪಟ್ಟರೆ ಸರಿಪಡಿಸಿ. ಶ್ರೀಘ್ರದಲ್ಲಿ ನೀರಿನ ಸಂಪರ್ಕ ಒದಗಿಸುತ್ತವೆ ಎಂದು ಗ್ರಾಮೀಣ ಕುಡಿಯುವ ನೀರಿನ ನೈರ್ಮಲ್ಯ ಇಲಾಖೆ ಅಭಿಯಂತರರು ಮಾಹಿತಿ ನೀಡಿದರು.
————————–
ಆಕಾಶ ವಂದೇ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕುಂದಗೋಳ ವಿಭಾಗ
ಒಟ್ಟಿನಲ್ಲಿ ನೀರಗಾಗಿ ಹಾಹಾಕಾರ ಉಂಟಾಗಿದ್ದು, ಅಧಿಕಾರಿಗಳು ನೀರಿನ ಬವಣೆ ಸರಿದೂಗಿಸುತ್ತರ ಇಲ್ಲೋ ಕಾದು ನೋಡಬೇಕಾಗಿದೆ..
ವರದಿ: ಶಾನು ಯಲಿಗಾರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…