Latest

ಅರ್ಧಕ್ಕೆ ನಿಂತ ಚರಂಡಿ ಕಾಮಗಾರಿ: ಗೌರಿಬಿದನೂರು 24ನೇ ವಾರ್ಡ್‌ನಲ್ಲಿ ಸ್ಥಳೀಯರ ಆಕ್ರೋಶ

ಗೌರಿಬಿದನೂರು: ನಗರದ 24ನೇ ವಾರ್ಡ್‌ ಗುಂಡಾಪುರ ಗ್ರಾಮದ ಎಸ್.ಟಿ. ಕಾಲೋನಿಯಲ್ಲಿ ಚರಂಡಿ ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚರಂಡಿ ಸ್ವಚ್ಛತೆ ಮಾಡಿದ್ದರೂ, ಒಂದು ತಿಂಗಳಾದರೂ ಕಸ ತೆಗೆದು ಹೋಗದ ಸ್ಥಿತಿಯಿದೆ. ಕುಡಿಯುವ ನೀರಿನ ಘಟಕ ಹಾಳಾಗಿರುವುದರಿಂದ, ಸ್ಥಳೀಯರು ದೈನಂದಿನ ನೀರಿನ ಅವಶ್ಯಕತೆಗಾಗಿ ಪರದಾಡುತ್ತಿದ್ದಾರೆ.

ಅನೇಕ ವರ್ಷಗಳಿಂದ ಕಾದಲವೇಣಿ ಗ್ರಾಮ ಪಂಚಾಯಿತಿಗೆ ಸೇರಿದ್ದ ಈ ಗ್ರಾಮವು, ನಗರಸಭೆ ವ್ಯಾಪ್ತಿಗೆ ಸೇರಿದ ನಂತರ ಮುಖ್ಯವಾಗಿ ವಿದ್ಯುತ್ ದೀಪಗಳು ಹಾಗೂ ಚರಂಡಿ ಸ್ವಚ್ಛತೆಗೆ ಮಾತ್ರ ಮಹತ್ವ ನೀಡಲಾಗಿದೆ. ಆದರೆ, ಸ್ಥಳೀಯ ನಿವಾಸಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ನಗರಸಭೆ ಸಂಪೂರ್ಣ ವಿಫಲವಾಗಿದೆ.

ಗ್ರಾಮದಲ್ಲಿ 280 ಮನೆಗಳು ಮತ್ತು 1,000ಕ್ಕೂ ಹೆಚ್ಚು ಜನರಿದ್ದು, ಶುದ್ಧ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ಹಾಗೂ ಉತ್ತಮ ರಸ್ತೆಗಳಂತಹ ಸೌಲಭ್ಯಗಳ ಕೊರತೆಯಿಂದಾಗಿ ಗ್ರಾಮಸ್ಥರು ಬಹಳಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ.

ಸ್ಥಳೀಯರ ಆಕ್ರೋಶ
ಗ್ರಾಮಸ್ಥೆ ನಾಗರತ್ನ ಮಾತನಾಡಿ, “ಇಲ್ಲಿನ ಕುಡಿಯುವ ನೀರಿನ ಘಟಕ ಹಲವಾರು ತಿಂಗಳಿನಿಂದ ಬಳಸಲು ಅಸಾಧ್ಯವಾಗಿದೆ. ಚರಂಡಿ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಅದರ ನೀರು ಹೋಗದ ಪರಿಣಾಮವಾಗಿ ರಸ್ತೆಗಳ ಮೇಲೆ ಹರಿಯುತ್ತಿದೆ. ನಗರಸಭೆಯ ಅಧಿಕಾರಿಗಳಿಗೆ ಈ ಬಗ್ಗೆ ತಿಳಿಸಿದರೆ, ಟೆಂಡರ್ ಅನುಮೋದನೆಗಾಗಿ ಕಾಯಬೇಕೆಂದು ಉತ್ತರ ಕೊಡುತ್ತಾರೆ,” ಎಂದು ಹೇಳಿದರು.

ಎಸ್.ಟಿ. ಕಾಲೋನಿಯ ಮತ್ತೊಬ್ಬ ನಿವಾಸಿ ವೆಂಕಟೇಶ್ ಅವರು, “ಚಿಕ್ಕ ಚರಂಡಿಗಳಿಂದ ನೀರು ಹರಿಯದ ಕಾರಣ ರಸ್ತೆ ಮೇಲೆ ಹರಿದು ಮನೆಯ ಮುಂದೆ ಜಗಳಗಳು ನಡೆಯುತ್ತಿವೆ. ಇದರಿಂದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಅರ್ಧಕ್ಕೆ ನಿಂತಿರುವ ಕಾಮಗಾರಿ ತಕ್ಷಣವೇ ಪೂರ್ಣಗೊಳ್ಳಬೇಕು,” ಎಂದು ಒತ್ತಾಯಿಸಿದರು.

ಗ್ರಾಮಸ್ಥರ ಒತ್ತಾಯ
ಅಧಿಕಾರಿಗಳಿಗೆ ಸ್ಥಳೀಯರು ಹಲವು ಬಾರಿ ದೂರು ನೀಡಿದರೂ, ಸಮಸ್ಯೆಗಳು ಇನ್ನೂ ಮುಂದುವರೆದಿವೆ. ಜಯಮ್ಮ, ಶಾಂತಮ್ಮ, ಅಸ್ಮತ್, ಲಕ್ಷ್ಮಮ್ಮ, ಮಣಿ, ಗಂಗಾಧರ್, ನಾಗರಾಜು, ರಂಜಿತ್ ಸೇರಿದಂತೆ ಅನೇಕರು ಈ ಸಭೆಯಲ್ಲಿ ಭಾಗವಹಿಸಿ, ಶೀಘ್ರ ಚರಂಡಿ ನಿರ್ಮಾಣ ಪೂರ್ಣಗೊಳಿಸಲು ಒತ್ತಾಯಿಸಿದರು.

ನಿರ್ಣಾಯಕ ಕ್ರಮದ ಅವಶ್ಯಕತೆ
ಗ್ರಾಮಸ್ಥರ ಆಕ್ರೋಶದಿಂದ ಹಾಸನಹೊಂದಿದ ಈ ಸಮಸ್ಯೆಯನ್ನು ಪರಿಹರಿಸಲು, ಸ್ಥಳೀಯ ಆಡಳಿತ ತಕ್ಷಣವೇ ಕ್ರಮ ಕೈಗೊಳ್ಳಬೇಕಾಗಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago