ಗೌರಿಬಿದನೂರು: ನಗರದ 24ನೇ ವಾರ್ಡ್ ಗುಂಡಾಪುರ ಗ್ರಾಮದ ಎಸ್.ಟಿ. ಕಾಲೋನಿಯಲ್ಲಿ ಚರಂಡಿ ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚರಂಡಿ ಸ್ವಚ್ಛತೆ ಮಾಡಿದ್ದರೂ, ಒಂದು ತಿಂಗಳಾದರೂ ಕಸ ತೆಗೆದು ಹೋಗದ ಸ್ಥಿತಿಯಿದೆ. ಕುಡಿಯುವ ನೀರಿನ ಘಟಕ ಹಾಳಾಗಿರುವುದರಿಂದ, ಸ್ಥಳೀಯರು ದೈನಂದಿನ ನೀರಿನ ಅವಶ್ಯಕತೆಗಾಗಿ ಪರದಾಡುತ್ತಿದ್ದಾರೆ.
ಅನೇಕ ವರ್ಷಗಳಿಂದ ಕಾದಲವೇಣಿ ಗ್ರಾಮ ಪಂಚಾಯಿತಿಗೆ ಸೇರಿದ್ದ ಈ ಗ್ರಾಮವು, ನಗರಸಭೆ ವ್ಯಾಪ್ತಿಗೆ ಸೇರಿದ ನಂತರ ಮುಖ್ಯವಾಗಿ ವಿದ್ಯುತ್ ದೀಪಗಳು ಹಾಗೂ ಚರಂಡಿ ಸ್ವಚ್ಛತೆಗೆ ಮಾತ್ರ ಮಹತ್ವ ನೀಡಲಾಗಿದೆ. ಆದರೆ, ಸ್ಥಳೀಯ ನಿವಾಸಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ನಗರಸಭೆ ಸಂಪೂರ್ಣ ವಿಫಲವಾಗಿದೆ.
ಗ್ರಾಮದಲ್ಲಿ 280 ಮನೆಗಳು ಮತ್ತು 1,000ಕ್ಕೂ ಹೆಚ್ಚು ಜನರಿದ್ದು, ಶುದ್ಧ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ಹಾಗೂ ಉತ್ತಮ ರಸ್ತೆಗಳಂತಹ ಸೌಲಭ್ಯಗಳ ಕೊರತೆಯಿಂದಾಗಿ ಗ್ರಾಮಸ್ಥರು ಬಹಳಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ.
ಸ್ಥಳೀಯರ ಆಕ್ರೋಶ
ಗ್ರಾಮಸ್ಥೆ ನಾಗರತ್ನ ಮಾತನಾಡಿ, “ಇಲ್ಲಿನ ಕುಡಿಯುವ ನೀರಿನ ಘಟಕ ಹಲವಾರು ತಿಂಗಳಿನಿಂದ ಬಳಸಲು ಅಸಾಧ್ಯವಾಗಿದೆ. ಚರಂಡಿ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಅದರ ನೀರು ಹೋಗದ ಪರಿಣಾಮವಾಗಿ ರಸ್ತೆಗಳ ಮೇಲೆ ಹರಿಯುತ್ತಿದೆ. ನಗರಸಭೆಯ ಅಧಿಕಾರಿಗಳಿಗೆ ಈ ಬಗ್ಗೆ ತಿಳಿಸಿದರೆ, ಟೆಂಡರ್ ಅನುಮೋದನೆಗಾಗಿ ಕಾಯಬೇಕೆಂದು ಉತ್ತರ ಕೊಡುತ್ತಾರೆ,” ಎಂದು ಹೇಳಿದರು.
ಎಸ್.ಟಿ. ಕಾಲೋನಿಯ ಮತ್ತೊಬ್ಬ ನಿವಾಸಿ ವೆಂಕಟೇಶ್ ಅವರು, “ಚಿಕ್ಕ ಚರಂಡಿಗಳಿಂದ ನೀರು ಹರಿಯದ ಕಾರಣ ರಸ್ತೆ ಮೇಲೆ ಹರಿದು ಮನೆಯ ಮುಂದೆ ಜಗಳಗಳು ನಡೆಯುತ್ತಿವೆ. ಇದರಿಂದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಅರ್ಧಕ್ಕೆ ನಿಂತಿರುವ ಕಾಮಗಾರಿ ತಕ್ಷಣವೇ ಪೂರ್ಣಗೊಳ್ಳಬೇಕು,” ಎಂದು ಒತ್ತಾಯಿಸಿದರು.
ಗ್ರಾಮಸ್ಥರ ಒತ್ತಾಯ
ಅಧಿಕಾರಿಗಳಿಗೆ ಸ್ಥಳೀಯರು ಹಲವು ಬಾರಿ ದೂರು ನೀಡಿದರೂ, ಸಮಸ್ಯೆಗಳು ಇನ್ನೂ ಮುಂದುವರೆದಿವೆ. ಜಯಮ್ಮ, ಶಾಂತಮ್ಮ, ಅಸ್ಮತ್, ಲಕ್ಷ್ಮಮ್ಮ, ಮಣಿ, ಗಂಗಾಧರ್, ನಾಗರಾಜು, ರಂಜಿತ್ ಸೇರಿದಂತೆ ಅನೇಕರು ಈ ಸಭೆಯಲ್ಲಿ ಭಾಗವಹಿಸಿ, ಶೀಘ್ರ ಚರಂಡಿ ನಿರ್ಮಾಣ ಪೂರ್ಣಗೊಳಿಸಲು ಒತ್ತಾಯಿಸಿದರು.
ನಿರ್ಣಾಯಕ ಕ್ರಮದ ಅವಶ್ಯಕತೆ
ಗ್ರಾಮಸ್ಥರ ಆಕ್ರೋಶದಿಂದ ಹಾಸನಹೊಂದಿದ ಈ ಸಮಸ್ಯೆಯನ್ನು ಪರಿಹರಿಸಲು, ಸ್ಥಳೀಯ ಆಡಳಿತ ತಕ್ಷಣವೇ ಕ್ರಮ ಕೈಗೊಳ್ಳಬೇಕಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…