Categories: Latest

ಅರ್ಧಕ್ಕೆ ನಿಂತ ಶೌಚಾಲಯ, ಮೂತ್ರದ ದುರ್ವಾಸನೆ: ಅಥಣಿಯಲ್ಲಿ ಸಾರ್ವಜನಿಕರ ಆಕ್ರೋಶ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬೆನ್ನಿಪೇಟೆಯ ಶಿವಣಗಿ ಕಾಂಪ್ಲೆಕ್ಸ್ ಹಿಂಭಾಗದಲ್ಲಿ, ಜಿ ಮಾರ್ಟ್ ಎದುರಿನ ಪ್ರದೇಶದಲ್ಲಿ ಗಂಭೀರ ಸ್ವಚ್ಛತಾ ಸಮಸ್ಯೆ ತಲೆದೋರಿದೆ. ಇಲ್ಲಿ ಮೂತ್ರ ವಿಸರ್ಜನೆಗೆ ಯಾವುದೇ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಜನರು ತೆರೆಯಲ್ಲೇ ವಿಸರ್ಜನೆ ಮಾಡುತ್ತಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ದುರ್ವಾಸನೆ ಉಂಟಾಗಿದೆ.

ಇದೇ ಸ್ಥಳದಲ್ಲಿ ಶೌಚಾಲಯ ನಿರ್ಮಾಣ ಕಾರ್ಯ ಆರಂಭಗೊಂಡಿದ್ದರೂ, ಅದು ಅರ್ಧಕ್ಕೆ ನಿಂತು ಹೋಗಿದ್ದು ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಪರಿಣಾಮವಾಗಿ, ಅಲ್ಲಿನ ವ್ಯಾಪಾರಸ್ಥರು ಹಾಗೂ ಸಂಚರಿಸುವ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಪ್ರದೇಶದಲ್ಲಿ ಅಸ್ವಚ್ಛತೆ ಹೆಚ್ಚಾಗಿರುವುದರಿಂದ ಮಲೇರಿಯಾ, ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ಭೀತಿ ಕೂಡ ಎದುರಾಗುತ್ತಿದೆ. ದುರ್ವಾಸನೆಯಿಂದ ಬೇಸತ್ತ ಜನರು ಈಗ ಆತಂಕದಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

ಸ್ಥಳೀಯರು ಹಲವಾರು ಬಾರಿ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಚ್ಛ ಭಾರತ ಅಭಿಯಾನವನ್ನು ಜಾರಿಗೊಳಿಸುತ್ತಿರುವ ಸರ್ಕಾರದ ಮಧ್ಯೆ ಇಂತಹ ಸಮಸ್ಯೆಗಳು ಪರಿಹಾರ ಕಾಣದೇ ಇರುವುದಕ್ಕೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಪುರಸಭೆ, ತಾಲೂಕು ಆಡಳಿತ, ಜಿಲ್ಲಾಡಳಿತ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ತಕ್ಷಣ ಎಚ್ಚೆತ್ತುಕೊಂಡು, ಶೌಚಾಲಯ ನಿರ್ಮಾಣವನ್ನು ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅಗತ್ಯ ಸೌಲಭ್ಯ ಒದಗಿಸುವಂತೆ ಜನರು ಆಗ್ರಹಿಸಿದ್ದಾರೆ. ಇಲ್ಲವಾದರೆ, ಈ ಸಮಸ್ಯೆ ಮುಂದುವರಿದು ಸಾರ್ವಜನಿಕರ ಆರೋಗ್ಯಕ್ಕೆ ದೊಡ್ಡ ಅಪಾಯವಾಗುವ ಸಾಧ್ಯತೆ ಇದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago