Latest

ಹಾನಗಲ್ ಗ್ಯಾಂಗ್ ರೇಪ್: ಜಾಮೀನಿನಲ್ಲಿ ಬಿಡುಗಡೆಗೆಾದ ಆರೋಪಿಗಳಿಂದ ಭರ್ಜರಿ ರೋಡ್ ಶೋ, ಸಾರ್ವಜನಿಕ ಆಕ್ರೋಶ

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿ ಆಲೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಗಳು ಜಾಮೀನಿನಲ್ಲಿ ಬಿಡುಗಡೆಗೊಂಡ ಬೆನ್ನಲ್ಲೇ ಭರ್ಜರಿ ಮೆರವಣಿಗೆ ನಡೆಸಿದ ಘಟನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.

2024ರ ಜನವರಿ 8ರಂದು ಹಾನಗಲ್ ಹೊರವಲಯದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದಲ್ಲಿ 19 ಜನರನ್ನು ಬಂಧಿಸಲಾಗಿತ್ತು. ಈ ಪೈಕಿ ಪ್ರಮುಖ ಎಳನೋಟದಲ್ಲಿದ್ದ ಏಳು ಮಂದಿಗೆ — ಅಪ್ತಾಬ್ ಚಂದನಕಟ್ಟಿ (ಎ1), ಮದರ್ ಸಾಬ್ ಮಂಡಕ್ಕಿ (ಎ2), ಸಮಿವುಲ್ಲಾ ಲಾಲನವರ (ಎ3), ಮಹಮದ್ ಸಾದಿಕ್ ಅಗಸಿಮನಿ (ಎ4), ಶೊಯಿಬ್ ಮುಲ್ಲಾ (ಎ8), ತೌಸಿಪ್ ಚೋಟಿ (ಎ11), ಮತ್ತು ರಿಯಾಜ್ ಸಾವಿಕೆರಿ (ಎ13) — ಇದೀಗ ಜಾಮೀನು ಲಭಿಸಿದೆ.

ಹಾವೇರಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯವು ಸಂತ್ರಸ್ತೆ ಆರೋಪಿಗಳನ್ನು ಖಚಿತಪಡಿಸಲು ವಿಫಲವಾದ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಿದೆ. ಈ ಹಿಂದೆಯೇ ಇತರ 12 ಆರೋಪಿಗಳು 10 ತಿಂಗಳ ಹಿಂದೆ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು. ಆದರೆ ಪ್ರಮುಖ ಆರೋಪಿಗಳ ಅರ್ಜಿ ಹಲವಾರು ಬಾರಿ ತಿರಸ್ಕಾರವಾಗಿತ್ತು.

ಜಾಮೀನು ಸಿಕ್ಕ ನಂತರ, ಈ ಏಳು ಆರೋಪಿಗಳು ಹಾವೇರಿ ಸಬ್ ಜೈಲಿನಿಂದ ಅಕ್ಕಿ ಆಲೂರಿನವರೆಗೆ ಸುಮಾರು ಐದು ಕಾರುಗಳಲ್ಲಿ, 20ಕ್ಕೂ ಹೆಚ್ಚು ಹಿಂಬಾಲಕರೊಂದಿಗೆ, ನಗರದ ಪ್ರಮುಖ ರಸ್ತೆಗಳಲ್ಲಿನಲ್ಲೂ ಮೆರವಣಿಗೆ ನಡೆಸಿದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಸಾರ್ವಜನಿಕರ ಎದೆಯ ಸುಟ್ಟ ಈ ದೃಶ್ಯಗಳು, ಪ್ರಕರಣವನ್ನು ಗಂಭೀರವಾಗಿ ನೋಡುವ ಜನತೆ ಮತ್ತು ಮಹಿಳಾ ಸಂಘಟನೆಗಳಿಂದ ಕಿಡಿಕಾರುವ ಪ್ರತಿಕ್ರಿಯೆಗಳನ್ನು ಎಳೆದಿವೆ.

ಈ ಘಟನೆ ಪೊಲೀಸರಿಂದಲೇ ನಿರ್ಲಕ್ಷ್ಯವಾಗಿದೆ ಎಂಬ ಆರೋಪ ಕೂಡ ಕೇಳಿಬರುತ್ತಿದ್ದು, ಆರೋಪಿಗಳ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಾಗೂ ಅವರ ಜಾಮೀನು ರದ್ದುಗೊಳಿಸಬೇಕೆಂದು ಜನತೆ ಗಟ್ಟಿ ಆಗ್ರಹ ವ್ಯಕ್ತಪಡಿಸುತ್ತಿದ್ದಾರೆ. ಹಾವೇರಿ ಜಿಲ್ಲೆಯ ಪೊಲೀಸ್ ಇಲಾಖೆ ಮೇಲಿನ ನಂಬಿಕೆ ಕದಡುವಂತಿರುವ ಈ ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ರಾಜ್ಯದ ಗಮನ ಸೆಳೆಯಲಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago