Categories: Latest

ಜಾತ್ಯಾತೀತ ಸೌಹಾರ್ದತೆಗೆ ಸಾಕ್ಷಿಯಾದ ಹರಾಳು ಅಡ್ಡಪಲ್ಲಕ್ಕಿ ಮಹೋತ್ಸವ; ಧರ್ಮಸಭೆಯಲ್ಲಿ ಉಜ್ಜಯಿನಿ ಶ್ರೀ ಜಗದ್ಗುರುಗಳಿಂದ ಆಶೀರ್ವಚನ.

ಕೊಟ್ಟೂರು:- ತಾಲ್ಲೂಕಿನ ಹರಾಳು ಗ್ರಾಮದಲ್ಲಿ ದಿನಾಂಕ 02-04-2026 ಗುರುವಾರದಂದು ಆಗಮಿಸಿದ ಶ್ರೀ ಉಜ್ಜಯಿನಿ ಜಗದ್ಗುರುಗಳನ್ನು ಅಡ್ಡಪಲ್ಲಕ್ಕಿಯಲ್ಲಿ ಕುಳ್ಳಿರಿಸಿ, ಸಮ್ಮಳ ವಾದ್ಯ, ಡೊಳ್ಳು ಕುಣಿತ, ಮತ್ತು ಕನ್ಯಾಮಣಿಯರು ಹಾಗೂ ಸುಮಂಗಲೆಯರಿಂದ ಕಳಸ, ಕುಂಭಮೇಳದೊಂದಿಗೆ ಊರಿನ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆಯ ಮೂಲಕ ಅದ್ದೂರಿಯಾಗಿ ಗ್ರಾಮಸ್ಥರು ಸ್ವಾಗತಿಸಿದರು.

ಆನಂತರ ವೇದಿಕೆ ಕಾರ್ಯಕ್ರಮಗಳನ್ನು ಜ್ಯೋತಿ ಬೆಳಗುವುದರೊಂದಿಗೆ ಧರ್ಮಸಭೆಗೆ ಅಧಿಕೃತ ಚಾಲನೆ ನೀಡಿದರು. ಉದ್ಘಾಟನಾ ನುಡಿಯನ್ನು ಮಾನ್ಯ ಶಾಸಕರಾದ ಶ್ರೀ ಕೆ. ನೇಮಿರಾಜನಾಯ್ಕ್ ಅವರು ಅನ್ನದಾತ ರೈತರನ್ನು ನೆನೆದರು ಹಾಗೂ ಗ್ರಾಮಸ್ಥರು ದುಷ್ಚಟಗಳಿಂದ ದೂರವಿರಲು ಸಂಕಲ್ಪ ಮಾಡಿದರು. ಶಾಸಕರ ಅನುದಾನದಡಿಯಲ್ಲಿ ಸುಮಾರು 60 ಲಕ್ಷ ರೂಪಾಯಿಗಳನ್ನು ಗ್ರಾಮದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ನೀಡುವ ಭರವಸೆ ಕೊಟ್ಟರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಎಸ್‌. ಗುರುಮೂರ್ತಿ ಹರಾಳು ಅವರು ಕರಿಗಲ್ಲುಗಳು ಗ್ರಾಮದ ಸೈನಿಕರಿದ್ದಂತೆ; ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹಾರೈಸಿದರು ಹಾಗೂ ಗ್ರಾಮದ ಸರಕಾರಿ ನೌಕರರ ತನು, ಮನ, ಧನ ಸೇವೆಯನ್ನು ಸ್ಮರಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಎಂ.ಎಂ.ಜೆ. ಹರ್ಷವರ್ಧನ್ ಹಾಗೂ ಪಿ.ಎಚ್. ದೊಡ್ಡರಾಮಣ್ಣ ಅವರು ಮಾತನಾಡಿದರು.
ಗ್ರಾಮದ ಸರಕಾರಿ ಶಾಲೆಯ ವಿದ್ಯಾರ್ಥಿನಿಯರಿಂದ ಭರತ ನಾಟ್ಯ ನೃತ್ಯ ಎಲ್ಲರ ಗಮನ ಸೆಳೆಯಿತು.

ಪ್ರಮುಖ ಘಟ್ಟವಾದ ಉಜ್ಜಯಿನಿ ಶ್ರೀಗಳಿಂದ ಆಶೀರ್ವಚನ ಕಾರ್ಯಕ್ರಮದಲ್ಲಿ ದೇಶದ ಬೆನ್ನೆಲುಬಾಗಿ ನಿಂತಿರುವ ರೈತರ ಬದುಕು ಕಲ್ಯಾಣವಾಗಲಿ, ಜೊತೆಗೆ ಯಾವ ವಿಜ್ಞಾನ, ತಂತ್ರಜ್ಞಾನವೂ ಒಂದು ಬೀಜವನ್ನು ಹಿಡಿ ಕಾಳಾಗಿ ಮಾಡಲು ಸಾಧ್ಯವಿಲ್ಲ; ಅದೇನಿದ್ದರೂ ರೈತರಿಂದ ಮಾತ್ರ ಸಾಧ್ಯವೆಂದು ಅಭಿಪ್ರಾಯ ಪಟ್ಟರು. ಗೋಹತ್ಯೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿದರು. ದೇವಸ್ಥಾನದ ಕಳಸಗಳು ನೆಟ್ ವರ್ಕ್ ಟವರ್ ಗಳಿದ್ದಂತೆ; ಭಗವಂತನ ಕೃಪೆಗೆ ಭಕ್ತರು ಪಾತ್ರರಾಗುವಲ್ಲಿ ಸಂಬಂಧ ಸೇತುವೆಯನ್ನು ಕಲ್ಪಿಸುತ್ತವೆ. ಉಜ್ಜಯಿನಿ ಪೀಠವು ಮಳೆ ಪೀಠವಾಗಿ ಪ್ರಸಿದ್ಧ ಪಡೆದಿದ್ದು, ಜಗದ್ಗುರುಗಳು ಅಂತಿಮವಾಗಿ ಗ್ರಾಮದಲ್ಲೇ ವಾಸ್ತವ್ಯ ಹೂಡುವುದರೊಂದಿಗೆ ಆಶೀರ್ವಚನ ಕಾರ್ಯಕ್ರಮವನ್ನು ಪೂರ್ಣಗೊಳಿಸಿದರು.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

20 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

20 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

20 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

20 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

20 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

20 hours ago