Categories: CrimeLatest

ಎದೆಯ ಮೇಲೆ ಬೇರೊಬ್ಬನ ಟ್ಯಾಟೂ ಕಂಡ ಗಂಡನಿಂದ ಕಿರುಕುಳ, ಮನನೊಂದು ನವವಿವಾಹಿತೆ ಆತ್ಮಹತ್ಯೆ..!

ಚಿಕ್ಕಬಳ್ಳಾಪುರ: ಮದುವೆಯ ಮೊದಲ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಿಕೊಳ್ಳಬೇಕಿದ್ದ ನವವಿವಾಹಿತೆಯೊಬ್ಬಳು, ಗಂಡನ ಅನುಮಾನ ಹಾಗೂ ನಿರಂತರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ನಡೆದಿದೆ.

ಗೌರಿಬಿದನೂರು ಮೂಲದ ಪ್ರೇಮಾ ಹಾಗೂ ಶಿಡ್ಲಘಟ್ಟದ ಶಿವಕುಮಾರ್ ಸಂಬಂಧಿಕರಾಗಿದ್ದು, ಪ್ರೇಮಾ ಅವರನ್ನು ಶಿವಕುಮಾರ್ ಪ್ರೀತಿಸಿ ಮದುವೆಯಾಗಿದ್ದನು. ಮದುವೆಯಾದ ಮೊದಲ ಮೂರು ತಿಂಗಳು ದಾಂಪತ್ಯ ಜೀವನ ಸುಖಕರವಾಗಿದ್ದರೂ, ಬಳಿಕ ಅಸಹಜ ತಿರುವು ಪಡೆದುಕೊಂಡಿದೆ.

ಈ ದಂಪತಿಯ ಜೀವನದಲ್ಲಿ ಬಿರುಕು ಮೂಡಲು ಕಾರಣವಾದದ್ದು ಪ್ರೇಮಾ ಎದೆಯ ಮೇಲೆ ಇದ್ದ ಹಚ್ಚೆ (Tattoo). ಯುವಕನೊಬ್ಬನ ಹೆಸರಿನ ಹಚ್ಚೆಯನ್ನು ಕಂಡ ಶಿವಕುಮಾರ್, ಅದನ್ನು ಕೇವಲ ಸ್ನೇಹಿತನ ಹೆಸರು ಎಂದು ಪತ್ನಿ ಸ್ಪಷ್ಟನೆ ನೀಡಿದರೂ ನಂಬದೆ, ಅನುಮಾನ ಪಡಲು ಆರಂಭಿಸಿದ್ದ. ಇದೇ ವಿಚಾರ ದಂಪತಿಗಳ ನಡುವೆ ನಿರಂತರ ಜಗಳಕ್ಕೆ ಕಾರಣವಾಯಿತು.

ಕಾಲಕ್ರಮೇಣ ಶಿವಕುಮಾರ್‌ನ ಅನುಮಾನ ತೀವ್ರಗೊಂಡು, ಪತ್ನಿಯ ಮೇಲೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಲು ಶುರು ಮಾಡಿದ್ದಾನೆ ಎನ್ನಲಾಗಿದೆ. ಇದಲ್ಲದೆ, ವರದಕ್ಷಿಣೆ ತರಬೇಕೆಂದು ಒತ್ತಾಯಿಸಿ, ಪ್ರೇಮಾಳನ್ನು ಹಲ್ಲೆ ಮಾಡುತ್ತಿದ್ದ ಎಂಬ ಆರೋಪವೂ ಕೇಳಿಬಂದಿದೆ.

ಮೂರು ತಿಂಗಳ ಹಿಂದೆ ಪ್ರೇಮಾಗೆ ಗರ್ಭಪಾತವಾಗಿದ್ದ ಸಂದರ್ಭದಲ್ಲಿಯೂ ಗಂಡನ ಮನೆಯವರು ಸರಿಯಾದ ಆರೈಕೆ ನೀಡಿಲ್ಲ ಎಂದು ಮೃತಳ ತಾಯಿ ಆರೋಪಿಸಿದ್ದಾರೆ. ಕುಟುಂಬದ ಒಳಜಗಳ, ಕಿರುಕುಳ ಮತ್ತು ಮಾನಸಿಕ ಒತ್ತಡಗಳಿಂದ ನಲುಗಿದ ಪ್ರೇಮಾ, ಕೊನೆಗೆ ಗಂಡನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ.

ಸ್ಥಳಕ್ಕೆ ಭೇಟಿ ನೀಡಿದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ವರದಕ್ಷಿಣೆ ಕಿರುಕುಳ ಹಾಗೂ ಆತ್ಮಹತ್ಯೆಗೆ ಪ್ರೇರಣೆ ಆರೋಪದಡಿ ಪತಿ ಶಿವಕುಮಾರ್‌ರನ್ನು ಬಂಧಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

ಈ ಘಟನೆ ದಾಂಪತ್ಯ ಜೀವನದಲ್ಲಿ ಅನುಮಾನ ಮತ್ತು ಕಿರುಕುಳ ಎಷ್ಟು ಭೀಕರ ಪರಿಣಾಮಗಳನ್ನು ಉಂಟುಮಾಡಬಹುದು ಎಂಬುದಕ್ಕೆ ಮತ್ತೊಂದು ದಾರುಣ ಉದಾಹರಣೆಯಾಗಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

14 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

14 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

14 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

14 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

14 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

14 hours ago