ಸ್ನೇಹಿತನಿಗೆ ನೆರವು ನೀಡಲು ಆನ್ ಲೈನ್ ನಲ್ಲಿ ಸಾಲ ಮಾಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಎಚ್ ಎಂಟಿ ಲೇಔಟ್ ನಲ್ಲಿ ನಡೆದಿದೆ. ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತೇಜಸ್ ವಿದ್ಯಾರ್ಥಿ ತಾಯಿಯ ವೇಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ.
ಸ್ನೇಹಿತ ಮಹೇಶನಿಗೆ ನೆರವು ನೀಡಲು ತೇಜಸ್ ಚೀನಾ ಆಯಪ್ ಸ್ಪೈಲ್ಸ್ ಪೇ, ಕಿಶ್ತ್ ಆಪ್ ಮತ್ತು ಮಹೀಂದ್ರ ಆಪ್ ಗಳಲ್ಲಿ ಸಾಲ ಮಾಡಿದ್ದ. ಆದರೆ ಮಹೇಶ್ ಒಂದು ವರ್ಷದಿಂದ ಸಾಲದ ಕಂತು ಪಾವತಿಸದ ಕಾರಣ ಆನ್ ಲೈನ್ ನಲ್ಲಿ ಸಾಲ ನೀಡಿದ್ದ ಕಂಪನಿಗಳು ಕಿರುಕುಳ ನೀಡಲು ಆರಂಭಿಸಿದ್ದರು.
ಚೀನಾ ಲೋನ್ ಆಪ್ ಗಳು ಸಾಲ ಮರುಪಾವತಿ ಮಾಡದೇ ಇದ್ದರೆ ನಿಮ್ಮ ಮೊಬೈಲ್ ಗ್ಯಾಲರಿಯಿಂದ ತೆಗೆದಿರುವ ಬೆತ್ತಲೆ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡುವುದಾಗಿ ಬೆದರಿಕೆ ಹಾಕಿ ಪದೇಪದೆ ಕಿರುಕುಳ ನೀಡುತ್ತಿದ್ದವು ಎಂದು ತಿಳಿದು ಬಂದಿದೆ.
ಅಪ್ಪ-ಅಮ್ಮ ನನ್ನನ್ನು ಕ್ಷಮಿಸಿ. ನಾನು ಮಾಡಿರುವ ತಪ್ಪಿಗೆ ಕ್ಷಮೆಯಿಲ್ಲ. ಮಾಡಿರುವ ಸಾಲ ತೀರಿಸಲು ಆಗುವುದಿಲ್ಲ, ಇದು ನನ್ನ ಕೊನೆ ತೀರ್ಮಾನ’ ‘ಥ್ಯಾಂಕ್ಸ್ ಗುಡ್ ಬೈ ಎಂದು ಡೆತ್ ನೋಟ್ ಬರೆದಿಟ್ಟು ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ತೇಜಸ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯ ಶವವನ್ನು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಜಾಲಹಳ್ಳಿ ಪೊಲೀಸ್ ಠಾಣೆಗೆ ತೇಜಸ್ ಪೋಷಕರು ದೂರು ನೀಡಿದಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…