ಕೊಟ್ಟೂರು:- ಧರ್ಮಸ್ಥಳ ಗ್ರಾಮಾಭಿವೃದ್ಧಿ ಮಹಿಳಾ ಸಂಘ ಹಾಗೂ ಎಲ್ ಅಂಡ್ ಟಿ ಫೈನಾನ್ಸ್ ಈ ಎರಡು ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಪಟ್ಟಣದ ಬಳ್ಳಾರಿ ಕ್ಯಾಂಪ್ ನಿವಾಸಿ ಆಫ್ರೀನ್ ಬಿ ಆತ್ಮಹತ್ಯೆಗೆ ಯತ್ನಿಸಿದ್ದು,ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿನಾಂಕ: 03-02-2025 ರ ಬೆಳಿಗ್ಗೆ 11 ಘಂಟೆ ಸುಮಾರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಮಹಿಳಾ ಸಂಘದ ಸೇವಾ ಪ್ರತಿನಿಧಿ ಜಗದೀಶ್ ರವರು ನನಗೆ ಫೋನ್ ಮಾಡಿ ನೀವು ಸಾಲದ ವಾರದ ಕಂತಿನ ಹಣವನ್ನು ಕಟ್ಟಬೇಕು ನಿಮಗೆ ಟೈಮ್ ಕೊಡಲು ಆಗುವುದಿಲ್ಲ ನೀವು ಏನಾದರೂ ಮಾಡಿಕೊಳ್ಳಿ ಸಾಲ ಕಟ್ಟಿ ಅಂತ ಕಿರುಕುಳ ನೀಡಿರುತ್ತಾರೆ ಹಾಗೂ ದಿನಾಂಕ:-02-02-2025 ರ ಸಂಜೆ 6-15 ಘಂಟೆ ಸುಮಾರಿಗೆ ಎಲ್ ಅಂಡ್ ಟಿ ಫೈನಾನ್ಸ್ ಕಂಪನಿ ಪ್ರತಿನಿಧಿ ಗಂಗಾಧರ ರವರು ಸಾಲದ ಕಂತಿನ ಹಣ ವಸೂಲಿ ಮಾಡಲು ನನ್ನ ಮನೆ ಹತ್ತಿರ ಬಂದು ನಾನು ಕಟ್ಟಬೇಕಾಗಿದ್ದ ಕಂತಿನ ಹಣ ಕಟ್ಟದಿದ್ದರೆ ನಿನಗೆ ಏನು ಮಾಡಬೇಕು ಅಂತ ನನಗೆ ಗೊತ್ತಿದೆ ನಿನಗೆ ಏನು ಮಾಡುತ್ತೇನೆ ನೋಡಿ ಅಂತ ಬೆದರಿಕೆ ಹಾಕಿರುವುದರಿಂದ ನಾನು ಸಾಯಬೇಕು ಅಂತ 03-02-2025 ರ ಮಧ್ಯಾನ್ಹ 12 ಘಂಟೆಗೆ ನನ್ನ ಮನೆಯಲ್ಲಿದ್ದ ಇರುವೆಗಳಿಗೆ ಬರೆಯುವ ವಿಷದ ಲಕ್ಷ್ಮಣ ರೇಖೆಯ ಪುಡಿಯನ್ನು ನೀರಿನಲ್ಲಿ ಬೆರೆಸಿ ಕುಡಿದಿರುತ್ತೇನೆ ನನಗೆ ಸಂಘದ ಸಾಲಗಳ ಕಂತಿನ ಹಣವನ್ನು ಕೊಡುವಂತೆ ಒತ್ತಾಯಿಸಿ ಕಿರುಕುಳ ನೀಡಿ ಬೆದರಿಕೆ ಹಾಕಿರುವ ಜಗದೀಶ್ ಮತ್ತು ಗಂಗಾಧರ ಇವರುಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ವರದಿ: ಮಣಿಕಂಠ. ಬಿ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…