ಕೊಟ್ಟೂರು:- ಧರ್ಮಸ್ಥಳ ಗ್ರಾಮಾಭಿವೃದ್ಧಿ ಮಹಿಳಾ ಸಂಘ ಹಾಗೂ ಎಲ್ ಅಂಡ್ ಟಿ ಫೈನಾನ್ಸ್ ಈ ಎರಡು ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಪಟ್ಟಣದ ಬಳ್ಳಾರಿ ಕ್ಯಾಂಪ್ ನಿವಾಸಿ ಆಫ್ರೀನ್ ಬಿ ಆತ್ಮಹತ್ಯೆಗೆ ಯತ್ನಿಸಿದ್ದು,ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿನಾಂಕ: 03-02-2025 ರ ಬೆಳಿಗ್ಗೆ 11 ಘಂಟೆ ಸುಮಾರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಮಹಿಳಾ ಸಂಘದ ಸೇವಾ ಪ್ರತಿನಿಧಿ ಜಗದೀಶ್ ರವರು ನನಗೆ ಫೋನ್ ಮಾಡಿ ನೀವು ಸಾಲದ ವಾರದ ಕಂತಿನ ಹಣವನ್ನು ಕಟ್ಟಬೇಕು ನಿಮಗೆ ಟೈಮ್ ಕೊಡಲು ಆಗುವುದಿಲ್ಲ ನೀವು ಏನಾದರೂ ಮಾಡಿಕೊಳ್ಳಿ ಸಾಲ ಕಟ್ಟಿ ಅಂತ ಕಿರುಕುಳ ನೀಡಿರುತ್ತಾರೆ ಹಾಗೂ ದಿನಾಂಕ:-02-02-2025 ರ ಸಂಜೆ 6-15 ಘಂಟೆ ಸುಮಾರಿಗೆ ಎಲ್ ಅಂಡ್ ಟಿ ಫೈನಾನ್ಸ್ ಕಂಪನಿ ಪ್ರತಿನಿಧಿ ಗಂಗಾಧರ ರವರು ಸಾಲದ ಕಂತಿನ ಹಣ ವಸೂಲಿ ಮಾಡಲು ನನ್ನ ಮನೆ ಹತ್ತಿರ ಬಂದು ನಾನು ಕಟ್ಟಬೇಕಾಗಿದ್ದ ಕಂತಿನ ಹಣ ಕಟ್ಟದಿದ್ದರೆ ನಿನಗೆ ಏನು ಮಾಡಬೇಕು ಅಂತ ನನಗೆ ಗೊತ್ತಿದೆ ನಿನಗೆ ಏನು ಮಾಡುತ್ತೇನೆ ನೋಡಿ ಅಂತ ಬೆದರಿಕೆ ಹಾಕಿರುವುದರಿಂದ ನಾನು ಸಾಯಬೇಕು ಅಂತ 03-02-2025 ರ ಮಧ್ಯಾನ್ಹ 12 ಘಂಟೆಗೆ ನನ್ನ ಮನೆಯಲ್ಲಿದ್ದ ಇರುವೆಗಳಿಗೆ ಬರೆಯುವ ವಿಷದ ಲಕ್ಷ್ಮಣ ರೇಖೆಯ ಪುಡಿಯನ್ನು ನೀರಿನಲ್ಲಿ ಬೆರೆಸಿ ಕುಡಿದಿರುತ್ತೇನೆ ನನಗೆ ಸಂಘದ ಸಾಲಗಳ ಕಂತಿನ ಹಣವನ್ನು ಕೊಡುವಂತೆ ಒತ್ತಾಯಿಸಿ ಕಿರುಕುಳ ನೀಡಿ ಬೆದರಿಕೆ ಹಾಕಿರುವ ಜಗದೀಶ್ ಮತ್ತು ಗಂಗಾಧರ ಇವರುಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ವರದಿ: ಮಣಿಕಂಠ. ಬಿ
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…