ಕೊಟ್ಟೂರು:- ಧರ್ಮಸ್ಥಳ ಗ್ರಾಮಾಭಿವೃದ್ಧಿ ಮಹಿಳಾ ಸಂಘ ಹಾಗೂ ಎಲ್ ಅಂಡ್ ಟಿ ಫೈನಾನ್ಸ್ ಈ ಎರಡು ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಪಟ್ಟಣದ ಬಳ್ಳಾರಿ ಕ್ಯಾಂಪ್ ನಿವಾಸಿ ಆಫ್ರೀನ್ ಬಿ ಆತ್ಮಹತ್ಯೆಗೆ ಯತ್ನಿಸಿದ್ದು,ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿನಾಂಕ: 03-02-2025 ರ ಬೆಳಿಗ್ಗೆ 11 ಘಂಟೆ ಸುಮಾರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಮಹಿಳಾ ಸಂಘದ ಸೇವಾ ಪ್ರತಿನಿಧಿ ಜಗದೀಶ್ ರವರು ನನಗೆ ಫೋನ್ ಮಾಡಿ ನೀವು ಸಾಲದ ವಾರದ ಕಂತಿನ ಹಣವನ್ನು ಕಟ್ಟಬೇಕು ನಿಮಗೆ ಟೈಮ್ ಕೊಡಲು ಆಗುವುದಿಲ್ಲ ನೀವು ಏನಾದರೂ ಮಾಡಿಕೊಳ್ಳಿ ಸಾಲ ಕಟ್ಟಿ ಅಂತ ಕಿರುಕುಳ ನೀಡಿರುತ್ತಾರೆ ಹಾಗೂ ದಿನಾಂಕ:-02-02-2025 ರ ಸಂಜೆ 6-15 ಘಂಟೆ ಸುಮಾರಿಗೆ ಎಲ್ ಅಂಡ್ ಟಿ ಫೈನಾನ್ಸ್ ಕಂಪನಿ ಪ್ರತಿನಿಧಿ ಗಂಗಾಧರ ರವರು ಸಾಲದ ಕಂತಿನ ಹಣ ವಸೂಲಿ ಮಾಡಲು ನನ್ನ ಮನೆ ಹತ್ತಿರ ಬಂದು ನಾನು ಕಟ್ಟಬೇಕಾಗಿದ್ದ ಕಂತಿನ ಹಣ ಕಟ್ಟದಿದ್ದರೆ ನಿನಗೆ ಏನು ಮಾಡಬೇಕು ಅಂತ ನನಗೆ ಗೊತ್ತಿದೆ ನಿನಗೆ ಏನು ಮಾಡುತ್ತೇನೆ ನೋಡಿ ಅಂತ ಬೆದರಿಕೆ ಹಾಕಿರುವುದರಿಂದ ನಾನು ಸಾಯಬೇಕು ಅಂತ 03-02-2025 ರ ಮಧ್ಯಾನ್ಹ 12 ಘಂಟೆಗೆ ನನ್ನ ಮನೆಯಲ್ಲಿದ್ದ ಇರುವೆಗಳಿಗೆ ಬರೆಯುವ ವಿಷದ ಲಕ್ಷ್ಮಣ ರೇಖೆಯ ಪುಡಿಯನ್ನು ನೀರಿನಲ್ಲಿ ಬೆರೆಸಿ ಕುಡಿದಿರುತ್ತೇನೆ ನನಗೆ ಸಂಘದ ಸಾಲಗಳ ಕಂತಿನ ಹಣವನ್ನು ಕೊಡುವಂತೆ ಒತ್ತಾಯಿಸಿ ಕಿರುಕುಳ ನೀಡಿ ಬೆದರಿಕೆ ಹಾಕಿರುವ ಜಗದೀಶ್ ಮತ್ತು ಗಂಗಾಧರ ಇವರುಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ವರದಿ: ಮಣಿಕಂಠ. ಬಿ
ಉತ್ತರ ಕನ್ನಡ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಅಣ್ಣನನ್ನೇ ತಮ್ಮ ಹತ್ಯೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ…
ಗದಗ ಜಿಲ್ಲೆಯ ಡಿವೈಎಸ್ಪಿ ಮುರ್ತುಜಾ ಖಾದ್ರಿ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಗಡದ ವಿರುದ್ಧ ಗದಗ ಜೆಎಂಎಫ್ಸಿ…
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್ ಹಾಗೂ ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಆಗ್ರಹಿಸಿ…
ಶಿರಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಶಿರಸಿ ನಗರ…
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…