ಕೊಟ್ಟೂರು:- ಧರ್ಮಸ್ಥಳ ಗ್ರಾಮಾಭಿವೃದ್ಧಿ ಮಹಿಳಾ ಸಂಘ ಹಾಗೂ ಎಲ್ ಅಂಡ್ ಟಿ ಫೈನಾನ್ಸ್ ಈ ಎರಡು ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಪಟ್ಟಣದ ಬಳ್ಳಾರಿ ಕ್ಯಾಂಪ್ ನಿವಾಸಿ ಆಫ್ರೀನ್ ಬಿ ಆತ್ಮಹತ್ಯೆಗೆ ಯತ್ನಿಸಿದ್ದು,ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿನಾಂಕ: 03-02-2025 ರ ಬೆಳಿಗ್ಗೆ 11 ಘಂಟೆ ಸುಮಾರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಮಹಿಳಾ ಸಂಘದ ಸೇವಾ ಪ್ರತಿನಿಧಿ ಜಗದೀಶ್ ರವರು ನನಗೆ ಫೋನ್ ಮಾಡಿ ನೀವು ಸಾಲದ ವಾರದ ಕಂತಿನ ಹಣವನ್ನು ಕಟ್ಟಬೇಕು ನಿಮಗೆ ಟೈಮ್ ಕೊಡಲು ಆಗುವುದಿಲ್ಲ ನೀವು ಏನಾದರೂ ಮಾಡಿಕೊಳ್ಳಿ ಸಾಲ ಕಟ್ಟಿ ಅಂತ ಕಿರುಕುಳ ನೀಡಿರುತ್ತಾರೆ ಹಾಗೂ ದಿನಾಂಕ:-02-02-2025 ರ ಸಂಜೆ 6-15 ಘಂಟೆ ಸುಮಾರಿಗೆ ಎಲ್ ಅಂಡ್ ಟಿ ಫೈನಾನ್ಸ್ ಕಂಪನಿ ಪ್ರತಿನಿಧಿ ಗಂಗಾಧರ ರವರು ಸಾಲದ ಕಂತಿನ ಹಣ ವಸೂಲಿ ಮಾಡಲು ನನ್ನ ಮನೆ ಹತ್ತಿರ ಬಂದು ನಾನು ಕಟ್ಟಬೇಕಾಗಿದ್ದ ಕಂತಿನ ಹಣ ಕಟ್ಟದಿದ್ದರೆ ನಿನಗೆ ಏನು ಮಾಡಬೇಕು ಅಂತ ನನಗೆ ಗೊತ್ತಿದೆ ನಿನಗೆ ಏನು ಮಾಡುತ್ತೇನೆ ನೋಡಿ ಅಂತ ಬೆದರಿಕೆ ಹಾಕಿರುವುದರಿಂದ ನಾನು ಸಾಯಬೇಕು ಅಂತ 03-02-2025 ರ ಮಧ್ಯಾನ್ಹ 12 ಘಂಟೆಗೆ ನನ್ನ ಮನೆಯಲ್ಲಿದ್ದ ಇರುವೆಗಳಿಗೆ ಬರೆಯುವ ವಿಷದ ಲಕ್ಷ್ಮಣ ರೇಖೆಯ ಪುಡಿಯನ್ನು ನೀರಿನಲ್ಲಿ ಬೆರೆಸಿ ಕುಡಿದಿರುತ್ತೇನೆ ನನಗೆ ಸಂಘದ ಸಾಲಗಳ ಕಂತಿನ ಹಣವನ್ನು ಕೊಡುವಂತೆ ಒತ್ತಾಯಿಸಿ ಕಿರುಕುಳ ನೀಡಿ ಬೆದರಿಕೆ ಹಾಕಿರುವ ಜಗದೀಶ್ ಮತ್ತು ಗಂಗಾಧರ ಇವರುಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ವರದಿ: ಮಣಿಕಂಠ. ಬಿ
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…