Crime

ನಿರ್ದೇಶಕನಿಗೆ ಕಿರುತೆರೆ ಶಶಿಕಲಾ ನಟಿಯ ಕಿರುಕುಳ: ಮದುವೆ, ಬೆದರಿಕೆ ಆರೋಪಕ್ಕೆ ಎಫ್‌ಐಆರ್‌ ದಾಖಲು

ಕಿರುತೆರೆ ನಟಿ ಮತ್ತು ನಿರ್ಮಾಪಕಿ ಶಶಿಕಲಾ ಅಲಿಯಾಸ್ ಸುಶೀಲಮ್ಮ ವಿರುದ್ಧ ನಿರ್ದೇಶಕ ಹರ್ಷವರ್ಧನ್ ಅವರು ವಿಧ್ಯಾರಣ್ಯಪುರ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಶಶಿಕಲಾ ಬ್ಲಾಕ್‌ಮೇಲ್ ಮಾಡಿ ಮದುವೆಗೂ ಒತ್ತಾಯಿಸಿ, ನಂತರ ಮನಸಿಕ ಕಿರುಕುಳ ನೀಡುತ್ತಿರುವುದಾಗಿ ಹರ್ಷವರ್ಧನ್ ಆರೋಪಿಸಿದ್ದಾರೆ. ಈ ಕುರಿತು ಎಫ್‌ಐಆರ್‌ ದಾಖಲಾಗಿ ತನಿಖೆ ಮುಂದುವರಿದಿದೆ.

ಹರ್ಷವರ್ಧನ್, ಪ್ರಜಾರಾಜ್ಯ ಸಿನಿಮಾದ ನಿರ್ದೇಶಕರಾಗಿ ಖ್ಯಾತರಾಗಿದ್ದು, 2020ರಲ್ಲಿ ಹೊಸ ಚಿತ್ರದ ಶೂಟಿಂಗ್ ಆರಂಭಿಸಿದ್ದರು. 2021ರ ಮಾರ್ಚ್‌ನಲ್ಲಿ, ಹರ್ಷವರ್ಧನ್ ಅವರ ಸಿನಿಮಾಗೆ ಹಾಸ್ಯ ಕಲಾವಿದೆಯಾಗಿ ಶಶಿಕಲಾ ಸೇರಿಕೊಂಡರು. ಈ ಸಮಯದಲ್ಲಿ ಶಶಿಕಲಾ ಹರ್ಷವರ್ಧನ್ ಅವರ ಸಂಪರ್ಕವನ್ನು ಪಡೆದು, ಸಿನಿಮಾಗೆ ಹಣ ಹೂಡಿಕೆ ಮಾಡುತ್ತೇನೆಂದು ಭರವಸೆ ನೀಡಿದರಂತೆ.

ರಿಲೇಷನ್‌ಶಿಪ್‌ಗೆ ಒತ್ತಾಯ ಶಶಿಕಲಾ ಅವರು ಹಣ ಹೂಡಿಕೆ ಮಾಡುತ್ತೇನೆಂದು ನಂಬಿಸಿ, ಹರ್ಷವರ್ಧನ್ ಅವರೊಂದಿಗೆ ಸಂಬಂಧದಲ್ಲಿ ಇರಲು ಒತ್ತಾಯಿಸಿದರೆಂದು ದೂರು ನೀಡಲಾಗಿದೆ. ಹರ್ಷವರ್ಧನ್ ಮದುವೆಗೆ ನಕಾರ ನೀಡಿದಾಗ, ಶಶಿಕಲಾ ಅವರಿಗೆ ಕೊಲೆದಂಡನೆ ನೀಡುವುದಾಗಿ ಬೆದರಿಸಿದರೆಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ, ಹರ್ಷವರ್ಧನ್ ಒತ್ತಾಯಕ್ಕೆ ಮಣಿದು 2022ರ ಮಾರ್ಚ್ 5 ರಂದು ಶಶಿಕಲಾ ಅವರೊಂದಿಗೆ ಮದುವೆಯಾಗಿದ್ದಾರೆ.

ಮದುವೆಯ ನಂತರದ ತೊಡಕುಗಳು
ಮದುವೆಯ ನಂತರ ಹರ್ಷವರ್ಧನ್ ಮನೆಗೆ ಶಶಿಕಲಾ ಅವರ ಸ್ನೇಹಿತರು ಮತ್ತು ನಿರ್ಮಾಪಕರು ಬರುತ್ತಿದ್ದರು. ಹರ್ಷವರ್ಧನ್ ಇದನ್ನು ಪ್ರಶ್ನಿಸಿದಾಗ, ಅವರು ಮತ್ತೊಮ್ಮೆ ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆಯೊಡ್ಡಿದರಂತೆ. ಹರ್ಷವರ್ಧನ್ ಅವರ ಪ್ರಕಾರ, 2024ರ ಆಗಸ್ಟ್‌ನಲ್ಲಿ ಶಶಿಕಲಾ ಅವರು ಜಗಳ ಮಾಡಿ ತಮ್ಮನ್ನು ಮನೆಯಿಂದ ಹೊರಹಾಕಿದ್ದಾರೆ.

ಕಿರುಕುಳ ಮತ್ತು ಬೆದರಿಕೆ ಆರೋಪ
ಮನೆಯಿಂದ ದೂರವಾದ ನಂತರವೂ, ಶಶಿಕಲಾ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದು, ಮನಸಿಕ ಕಿರುಕುಳ ನೀಡುತ್ತಿದ್ದಾರೆಂದು ಹರ್ಷವರ್ಧನ್ ವಿದ್ಯಾರಣ್ಯಪುರ ಪೊಲೀಸರಿಗೆ ದೂರು ನೀಡಿದ್ದಾರೆ. ಶಶಿಕಲಾ ಅವರ ಈ ವರ್ತನೆಗೆ ಹರ್ಷವರ್ಧನ್ ಅವರ ವೃತ್ತಿಜೀವನದ ಮೇಲೆ ದೊಡ್ಡ ಪ್ರಭಾವ ಬಿದ್ದಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಪ್ರಕರಣ ಇದೀಗ ಪೊಲೀಸರ ಗಮನಕ್ಕೆ ಬಂದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

6 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

6 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

6 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

6 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

6 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

6 hours ago