ಬೆಂಗಳೂರು: ಆಟೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯರಿಬ್ಬರನ್ನು ಚುಡಾಯಿಸಿ ಕಿರುಕುಳ ನೀಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಏಪ್ರಿಲ್ 23ರಂದು ನಗರದಲ್ಲಿ ನಡೆದಿದೆ.

ಬಂಧಿತರು ಬನಶಂಕರಿ ನಿವಾಸಿಗಳಾದ ಮುಬಾರಕ್ ಮತ್ತು ಹಫೀಫ್ ಎಂದು ಗುರುತಿಸಲಾಗಿದೆ. ಎಸ್.ಆರ್.ನಗರದ ಸಾರಕ್ಕಿ ಮಾರುಕಟ್ಟೆ ಬಳಿ ಈ ಘಟನೆ ನಡೆದಿದ್ದು, ಬೈಕ್‌ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಆಟೋ ಅಡ್ಡಗಟ್ಟಿ ಯುವತಿಯರೊಂದಿಗೆ ಅನಾಗರಿಕವಾಗಿ ವರ್ತಿಸಿದ್ದಾರೆ.

ಅವರ ವರ್ತನೆ ಪ್ರಶ್ನಿಸಿದ ಯುವತಿಯರ ತಾಯಿಗೆ ಕೂಡ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ಭಾರೀ ಅವಮಾನ ಮಾಡಿದ್ದಾರೆ. ನಂತರ, ಪೀಡಿತೆಯ ತಾಯಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದರು.

ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದರು. ಶೀಘ್ರ ಕಾರ್ಯಾಚರಣೆಯಲ್ಲಿ ಮುಬಾರಕ್ ಮತ್ತು ಹಫೀಫ್ ಎಂಬವರನ್ನು ಬಂಧಿಸಲಾಗಿದೆ. ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

Related News

error: Content is protected !!