Latest

ಸಬ್ ರಿಜಿಸ್ಟಾರ್ ಕಛೇರಿ ಅಧಿಕಾರಿಗೆ ತರಾಟೆ: ತಹಶೀಲ್ದಾರ್ ಗೆ ಮನವಿ…!

ಮುಂಡಗೋಡ: ಸಬ್ ರಿಜಿಸ್ಟರ್ ಕಚೇರಿಯ ಸಿಬ್ಬಂದಿ ನೋಂದಣಿ ಮಾಡಲು ಸರಕಾರಿ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನು ಕೇಳುತ್ತಾರೆ ಎಂದು ಆರೋಪಿಸಿ ಸಾರ್ವಜನಿಕರು ಗುರುವಾರ ಕಚೇರಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಕೊಳಗೇರಿ ನಿರ್ಮೂಲನಾ ಮಂಡಳಿಯಿಂದ ಪಟ್ಟಣದ ಕೊಳಗೇರಿ ನಿವಾಸಿಗಳಿಗೆ ಈ ಹಿಂದೆ ಅಧಿಕೃತ ಹಕ್ಕು ಪತ್ರವನ್ನು ಸಚಿವ ಶಿವರಾಂ ಹೆಬ್ಬಾರ್ ವಿತರಿಸಿ ಇದನ್ನು ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು ನೋಂದಣಿ ಮಾಡಿಸಿಕೊಳ್ಳುವಾಗ ಯಾರಿಗೂ ಹಣವನ್ನು ನೀಡಬಾರದು ಎಂದು ಹೇಳಿದ್ದರು ಈ ಹಿನ್ನೆಲೆಯಲ್ಲಿ ಕಂಬಾರಗಟ್ಟಿಯ ನಿವಾಸಿಗಳು ನೋಂದಣಿ ಮಾಡಿಸಲು ಹೋದಾಗ ಸರಕಾರಿ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನು ಸಿಬ್ಬಂದಿಗಳು ಕೇಳಿದಾಗ ಆಕ್ರೋಶಗೊಂಡ ಕೆಲವು ಸಾರ್ವಜನಿಕರು ಸಬ್ ರಿಜಿಸ್ಟರ್ ಕಚೇರಿಯ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಂತರ ತಹಶೀಲ್ದಾರ್ ಕೊಠಡಿಗೆ ತೆರಳಿ ಸಬ್ ರೆಜಿಸ್ಟಾರ್ ಕಚೇರಿಯಲ್ಲಿ ಸರಕಾರಿ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನು ಕೇಳುತ್ತಿದ್ದಾರೆ ಹಣ ಕೊಡದಿದ್ದರೆ ಸರ್ವರ್ ಇಲ್ಲ,ಸಿಬ್ಬಂದಿ ಇಲ್ಲವೆಂಬ ನೆಪ ಹೇಳುತ್ತಿದ್ದಾರೆ ಅಲ್ಲದೆ ಕಚೇರಿಯಲ್ಲಿ ಸಿಸಿ ಕ್ಯಾಮರಾವನ್ನು ಸಹ ಅಳವಡಿಸಿಲ್ಲ ಎಂದು ಮನವಿ ಪತ್ರದಲ್ಲಿ ವಿನಂತಿಸಿ ಕೂಡಲೇ ಕಛೇರಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆಯೂ ಸಹ ವಿನಂತಿಸಿದ್ದಾರೆ.
ವರದಿ: ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

3 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

18 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

19 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

2 days ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

2 days ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

2 days ago